Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಯೋಗಾತ್ಮಕ ಬರಹದಿಂದ ಉತ್ತಮ ಕವಿತೆ...

ಪ್ರಯೋಗಾತ್ಮಕ ಬರಹದಿಂದ ಉತ್ತಮ ಕವಿತೆ ಸೃಷ್ಟಿ: ಸಾಹಿತಿ ಕೆ.ವೈ.ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 Feb 2019 9:56 PM IST
share

ಬೆಂಗಳೂರು, ಫೆ.10: ಪ್ರಯೋಗಾತ್ಮಕ ಬರಹಗಳಿಂದ ಉತ್ತಮ ಕವಿತೆಗಳು ಹೊರಬರಲು ಸಾಧ್ಯವಾಗುತ್ತದೆ ಎಂದು ಸಾಹಿತಿ ಹಾಗೂ ಪ್ರಾಧ್ಯಾಪಕ ಕೆ.ವೈ.ನಾರಾಯಣಸ್ವಾಮಿ ಹೇಳಿದ್ದಾರೆ.

ರವಿವಾರ ಬಸವನಗುಡಿ ಇಂಡಿಯನ್ ಇನ್ಸಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನ ಬಿ.ಪಿ.ವಾಡಿಯಾ ಸಬಾಂಗಣದಲ್ಲಿ ಆಯೋಜಿಸಿದ್ದ ಕವಯತ್ರಿಗಳಾದ ಎನ್.ಸಂಧ್ಯಾರಾಣಿ ಹಾಗೂ ಬಿ.ವಿ.ಭಾರತಿ ಅವರ ಕವನ ಸಂಕಲನ ‘ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯಾ’ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕವಿತೆ ಬರೆಯುತ್ತೇವೆ ಎನ್ನುವುವವರೆಲ್ಲಾ ಕವಿಯಾಗಲ್ಲ, ಬರೆಯುವುದೆಲ್ಲವೂ ಕಾವ್ಯವಾಗಲ್ಲ. ಒಂದು ಕವಿತೆ ಸೃಷ್ಟಿಯಾಗಬೇಕಾದರೆ ಹಲವಾರು ಪ್ರಯತ್ನಗಳು ಮಾಡಬೇಕಾಗುತ್ತದೆ. ಸಾರ್ಥಕ ಸಾಲುಗಳಿಂದ ಉತ್ತಮ ಕವಿತೆಯ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಸಾಹಿತ್ಯ ಪ್ರಕಾರಗಳು ಸಾಮಾಜಿಕ, ಪ್ರಾದೇಶಿಕ ಚರಹೆಗಳಿಂದ ರೂಪುಗೊಂಡಿವೆ. ಆದರೆ ಕವಿತೆ ವ್ಯಕ್ತಿಗತವಾದದ್ದು. ಅಪಟ್ಟ ಮನುಷ್ಯನ ಕುರಿತು, ಅವರ ಅನುಭವ, ಅನುಭೂತಿ ಇವೆಲ್ಲವನ್ನೂ ಕವಿತೆಯಲ್ಲಿ ಕಾಣಬಹುದು ಎಂದು ಹೇಳಿದರು.

ಪ್ರತಿಯೊಬ್ಬ ಲೇಖಕ, ಕವಿ, ಸಾಹಿತಿ ಸೇರಿದಂತೆ ಎಲ್ಲರೂ ನಾವು ಉತ್ತಮ, ಅತ್ಯುತ್ತಮ ಬರಹಗಾರರಾಗಬೇಕು ಎಂದು ಬಯಸಿ ಬರೆಯುತ್ತಾರೆ. ಇನ್ನೂ ಕೆಲವರಿಗೆ ನಾನು ರಚಿಸುವ ಕವಿತೆಯಿಂದ ಅಥವಾ ಬರಹದಿಂದ ಸಮಾಜಕ್ಕೆ ಏನಾದರೂ ಸಂದೇಶ ನೀಡಬೇಕು ಎಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ ಸಂಧ್ಯಾರಾಣಿ ಹಾಗೂ ಬಿ.ವಿ.ಭಾರತಿ ಅವರ ಕವಿತೆಗಳು ಭಾವನಾತ್ಮಕ ಸಂಗತಿಗಳನ್ನು ಕಟ್ಟಿಕೊಟ್ಟಿವೆ ಎಂದರು.

ವಿಮರ್ಶಕ ಅಬ್ದುಲ್ ರಶೀದ್ ಮಾತನಾಡಿ, ಹಲವು ಸಾಹಿತಿಗಳು ಹಾಗೂ ಬರಹಗಾರರು ಗಂಭೀರತೆಯಲ್ಲಿ ತಮ್ಮ ಸಮಯವನ್ನು ಕಳೆಯುತ್ತಾರೆ. ಆದರೆ, ಅತಿಹೆಚ್ಚು ಗಂಭೀರವಾಗಿರುವ ಬದಲು ಸಮಾಜದೊಂದಿಗೆ ತೊಡಗಿಸಿಕೊಳ್ಳುವ ಮೂಲಕ ನೆಮ್ಮದಿಯ ಜೀವನ ನಡೆಸಬೇಕು ಎಂದು ನುಡಿದರು.

ಕವಿತೆಯು ಒಂದು ಕ್ಷಣದಲ್ಲಿ ಹುಟ್ಟುತ್ತವೆ ಅಥವಾ ಧೀರ್ಘ ಸಮಯವನ್ನು ಪಡೆಯುತ್ತವೆ. ಆದರೆ, ಅದು ಉತ್ತಮವಾದ ಕವಿತೆಯಾಗಲು ಪ್ರಯೋಗಕ್ಕೆ ಒಳಪಡಬೇಕು. ಆಗ ಅದು ಸಂಪೂರ್ಣ ಕವಿತೆಯಾಗುತ್ತದೆ ಎಂದ ಅವರು, ಸಂಧ್ಯಾರಾಣಿ ಹಾಗೂ ಭಾರತಿ ಸೇರಿ ಒಂದು ಕವನ ಸಂಕಲನ ಮಾಡಿದ್ದಾರೆ. ಕನ್ನಡದ ಮಹಿಳಾ ಸಾಹಿತ್ಯ ಲೋಕದಲ್ಲಿ ಇದೊಂದು ಹೊಸ ಪ್ರಯೋಗ ಎಂದು ಹೇಳಿದರು. ಸಮಾರಂಭದಲ್ಲಿ ಕವಯತ್ರಿಯರಾದ ಎನ್.ಸಂಧ್ಯಾರಾಣಿ, ಬಿ.ವಿ.ಭಾರತಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X