Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈಚಾರಿಕತೆ ನೆಲೆಗಟ್ಟು ಸಂವಿಧಾನದಲ್ಲೇ...

ವೈಚಾರಿಕತೆ ನೆಲೆಗಟ್ಟು ಸಂವಿಧಾನದಲ್ಲೇ ಇದೆ: ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು

ವಾರ್ತಾಭಾರತಿವಾರ್ತಾಭಾರತಿ10 Feb 2019 9:58 PM IST
share

ಬೆಂಗಳೂರು, ಫೆ.10: ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆಯ ನೆಲೆಗಟ್ಟನ್ನು ಭದ್ರಗೊಳಿಸುವ ಅಂಶಗಳನ್ನು ಸಂವಿಧಾನದಲ್ಲೇ ಕಾಣಬಹುದಾಗಿದೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ರಾಜಾಜಿನಗರದ ಎಂಇಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೈಚಾರಿಕತೆಯ ಜ್ಞಾನವನ್ನು ಇಂದಿನ ಪೀಳಿಗೆಯವರಲ್ಲಿ ತುಂಬುವ ಮೂಲಕ ಸಮಾಜದ ಸ್ವಾಸ್ಥಕ್ಕೆ ಶ್ರಮಿಸಬೇಕಾದ ಅಗತ್ಯವಿದ್ದು, ಸಂವಿಧಾನದ ಕಾರ್ಯವೂ ಈ ಹಿನ್ನೆಲೆಯನ್ನೇ ಹೊಂದಿದೆ ಎಂದು ಹೇಳಿದರು.

ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಡಾ. ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಕೇಶ್‌ರಂತಹವರು ನಮ್ಮ ದೇಶಕ್ಕೆ ಬೇಡ. ನಾವು ಹೇಳಿದನ್ನು ಕೇಳಿಸಿಕೊಂಡು ಬದುಕಿ ಎಂಬ ವರ್ಗ ದೇಶದಲ್ಲಿ ಬಲಿಷ್ಠವಾಗುತ್ತಿದೆ. ವಾಸ್ತವ ನೆಲೆಯಲ್ಲಿ ಚಿಂತನೆ ಮಾಡುವರನ್ನು ಮನೆಗೆ ಹೋಗಿ ಕೊಂದಿರುವುದನ್ನು ನೆನೆದರೆ, ಲೇಖಕನಾದ ನನಗೆ ನಮ್ಮ ಮನೆಗೆ ಬರುವವರೆಲ್ಲರನ್ನೂ ಅನುಮಾನದಿಂದ ನೋಡುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜಪ್ರಭುತ್ವದ ಹುಚ್ಚಾಟಗಳಂತೆ ರಾಜಕೀಯ ನಾಯಕರ ಹುಚ್ಚಾಟ ದಿನೇ ದಿನೆ ಹೆಚ್ಚುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದಾರೆ. ಅಲ್ಲದೆ, ದೇಶವು 20- 30 ವರ್ಷ ಮುಂದಕೆ ಚಲಿಸದೆ ಹಿಂದಕ್ಕೆ ಚಲಿಸುತ್ತಾ ಅವೈಜ್ಞಾನಿಕ ಅಂಶಗಳನ್ನು ಜನರಲ್ಲಿ ನಂಬಿಸುವ ಕೆಲಸ ಮಾಡಲಾಗುತ್ತಿದೆ. ದೆಹಲಿಯ ವಿಜ್ಞಾನ ಸಮ್ಮೇಳನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದರೆ, ವೈಚಾರಿಕತೆ ಮರೆಸುವ ಹುನ್ನಾರವನ್ನು ನೋಡಬಹುದು ಎಂದು ತಿಳಿಸಿದರು.

ವೈಜ್ಞಾನಿಕ ಹಾಗೂ ವೈಚಾರಿಕ ಪುಸ್ತಕಗಳು ರಾಜ್ಯದಲ್ಲಿ ಹೆಚ್ಚು ಮಾರಾಟ ಆಗುತ್ತಿದ್ದು, ಜನರಲ್ಲಿ ಈ ವಿಷಯಗಳ ಕುರಿತು ಯೋಚಿಸೋಕೆ ಮನಸ್ಸಿದೆ ಎಂಬುದನ್ನು ಬಿಂಬಿಸುತ್ತದೆ. ಮಾಧ್ಯಮಗಳು ವೈಚಾರಿಕತೆಯನ್ನು ಬೆಳೆಸಲು ಶ್ರಮಿಸಬೇಕು. ಆದರೆ, ಅದರ ಬದಲು ಅವೈಜ್ಞಾನಿಕ ಅಂಶಗಳನ್ನು ಜನರಲ್ಲಿ ತುಂಬುತ್ತಿವೆ. ಇನ್ನು, ಇಸ್ರೋ ಅಧ್ಯಕ್ಷರೆ ತಿರುಪತಿಗೆ ಹೋಗಿ ಬರುತ್ತಾರೆಂದರೆ ವೈಜ್ಞಾನಿಕತೆಯ ಅಜ್ಞಾನ ತಿಳಿಯುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿಕ್ಷಣದ ವಸ್ತುಸ್ಥಿತಿಯನ್ನು ಅರ್ಥ ಮಾಡಿಕೊಂಡು ಸರಕಾರಗಳು ಎಲ್ಲ ವರ್ಗದವರಿಗೂ ಸಲ್ಲುವ ಶಿಕ್ಷಣವನ್ನು ನೀಡಬೇಕು. ಜಾಗತೀಕರಣದಿಂದ ಎಲ್ಲ ಪ್ರಾದೇಶಿಕ ಭಾಷೆಗಳು ನರಳುತ್ತಿವೆ. ಜಪಾನ್, ಯುರೋಪ್ ರಾಷ್ಟ್ರಗಳು ತನ್ನ ನೆಲದ ಭಾಷೆಯಲ್ಲೇ ಮಾತೃ ಭಾಷಾ ಶಿಕ್ಷಣವನ್ನು ನೀಡುತ್ತಾ ಅಭಿವೃದ್ಧಿಯಾಗಿವೆ ಎಂದರು. ಎಂಇಎಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಶಕುಂತಲಾ ಕತ್ರೆ, ಪ್ರಾಂಶುಪಾಲ ಪ್ರೊ. ಮೈಥಿಲಿ ರಾಜು ಉಪಸ್ಥಿತರಿದ್ದರು.

‘ವಿಜ್ಞಾನ ಶಿಕ್ಷಕರೆ ಗ್ರಹಣ, ಸುನಾಮಿ, ಆಕಾಶಕಾಯ ಹಾಗೂ ಭೂಮಂಡಲದ ಸೃಷ್ಠಿಯ ವೈಜ್ಞಾನಿಕ ಅಂಶಗಳನ್ನು ಬೋಧಿಸಿ, ಚಂದ್ರ-ಸೂರ್ಯ ಗ್ರಹಣದ ದಿನ ರಜೆ ಹಾಕಿ ಮನೆಯಲ್ಲಿ ಪೂಜೆ ಮಾಡುತ್ತಾ ಕುಳಿತಿರುತ್ತಾರೆ’

-ಕೋ.ವೆಂ.ರಾಮಕೃಷ್ಣೇಗೌಡ, ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X