Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆ.ಆರ್.ಪುರಂ: ಹಳ್ಳಿಯ ವಾತಾವರಣ...

ಕೆ.ಆರ್.ಪುರಂ: ಹಳ್ಳಿಯ ವಾತಾವರಣ ಸೃಷ್ಟಿಸಿದ 'ಹಳ್ಳಿ ಸಂಭ್ರಮ'

ವಾರ್ತಾಭಾರತಿವಾರ್ತಾಭಾರತಿ10 Feb 2019 10:00 PM IST
share

ಬೆಂಗಳೂರು, ಫೆ.10: ಕಾಂಕ್ರೀಟ್ ನಗರದಲ್ಲಿ ಮರೆಯಾಗಿರುವ ಹಳ್ಳಿಯ ವಾತಾವರಣವನ್ನು ಮೂಡಿಸಿ, ಹಳ್ಳಿ ಆಟಗಳನ್ನು ಆಡಿಸುವ ಮೂಲಕ ಇಲ್ಲಿನ ಕೆ.ಆರ್.ಪುರಂ ಐಟಿಐ ಕ್ರೀಡಾಂಗಣದಲ್ಲಿ ಪುಟ್ಟ ಹಳ್ಳಿಯೊಂದನ್ನು ನಿರ್ಮಾಣ ಮಾಡಲಾಗಿತ್ತು.

ಚಿಕ್ಕಣ್ಣ ಹಾಗೂ ರಾಮಕ್ಕ ಸೇವಾ ಸಂಸ್ಥೆಯ 16 ನೆ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಹಳ್ಳಿ ಸಂಭ್ರಮ’ವು ಕ್ರೀಡಾಂಗಣ ತುಂಬವೂ ಪುಟ್ಟ ಹಳ್ಳಿಯನ್ನೇ ನಿರ್ಮಾಣ ಮಾಡಿತ್ತು. ಕೆ.ಆರ್.ಪುರಂನ ಸುತ್ತಲಿನ ನೂರಾರು ಜನರು ಪಾಲ್ಗೊಂಡು ಹಳ್ಳಿಯ ಸಂಸ್ಕೃತಿ, ಆಟಪಾಟಗಳನ್ನು ಅನುಭವಿಸಿ, ಸಂಭ್ರಮಿಸಿದರು.

ಹಳ್ಳಿ ಸೊಗಡಿನ ಗರಿ ಮನೆ, ಹಳ್ಳಿ ಜನರು ಉಪಯೋಗಿಸುತ್ತಿದ್ದ ಸಲಕರಣೆಗಳು, ಹಸು, ಎತ್ತುಗಳ ಪ್ರದರ್ಶನ, ಹೂ, ಕಬ್ಬಿನ ಜಲ್ಲೆ ನಡುವೆ ಕಣ್ಮನ ಸೆಳೆಯುತ್ತಿರುವ ರಂಗೋಲಿ ಸೇರಿದಂತೆ ಅಪ್ಪಟ ಹಳ್ಳಿ ಸೊಗಡಿನ ವಾತಾವರಣದಲ್ಲಿ ಎಲ್ಲರೂ ಪಾಲ್ಗೊಂಡು ರವಿವಾರದ ರಜೆಯನ್ನು ಕಳೆದರು. ಇನ್ನು ಚಿಕ್ಕ ವರು-ದೊಡ್ಡವರು ಎಂಬ ಬೇದಭಾವವಿಲ್ಲದೆ ಲಗೋರಿ, ಚಿನ್ನಿ ದಾಂಡು ನಂತಹ ಆಟಗಳನ್ನು ಆಡಿ ಸಂಭ್ರಮಿಸಿದರು.

ಪ್ರತಿವರ್ಷ ಕೆರೆ ಹಬ್ಬ, ಸೇರಿದಂತೆ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಈ ಸಂಸ್ಥೆ ಈ ಭಾರಿ ಕೊಂಚ ವಿಭಿನ್ನವಾಗಿ ಹಳ್ಳಿ ಹಬ್ಬವನ್ನು ಆಯೋಜಿಸಿತ್ತು. ಈ ಹಬ್ಬದಲ್ಲಿ ರೈತರ ಉಡುಗೆ ತೊಡುಗೆಗಳ ಜೊತೆ, ಭತ್ತ, ರಾಗಿ, ನವಣೆ ಸೇರಿದಂತೆ ರೈತರು ಬೆಳೆಯುತ್ತಿದ್ದ ತರಕಾರಿ ಬೆಳೆಗಳನ್ನು ಸಸಿ ಸಮೇತ ಪ್ರದರ್ಶನದಲ್ಲಿರಿಸಲಾಗಿತ್ತು. ಇದನ್ನು ಕಂಡ ಸಿಲಿಕಾನ್ ಸಿಟಿ ಮಕ್ಕಳು ತಾವು ತಿನ್ನುವ ಆಹಾರ ನಮಗೆ ಹೇಗೆ ದೊರೆಯುತ್ತದೆ ಎಂಬ ಮಾಹಿತಿ ಪಡೆದು, ಸಂತಸಗೊಂಡರು.

ಪ್ರತಿನಿತ್ಯ ಟಿವಿಯ ಸೀರಿಯಲ್‌ಗಳಲ್ಲಿ ಮುಳುಗುತ್ತಿದ್ದವರು, ಕೆಲಸದ ಒತ್ತಡದಲ್ಲಿದ್ದವರಿಗೆ ರವಿವಾರದ ರಜೆ ಒಂದಷ್ಟು ಮನಸ್ಸಿಗೆ ಉಲ್ಲಾಸ ನೀಡಿತು. ಪ್ರತಿದಿನವೂ ಶಾಲೆ-ಕಾಲೇಜು, ಪಠ್ಯ, ಮನೆಕೆಲಸ ಎಂದು ಗೋಳಾಡುವ ವಿದ್ಯಾರ್ಥಿಗಳು ಒಂದಷ್ಟು ಸಮಯ ಇಲ್ಲಿ ಕಳೆಯುವ ಮೂಲಕ ಸಂತಸಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X