Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂಐಟಿ ಸಮ್ಮೇಳನಕ್ಕೆ ಸುಬ್ರಮಣಿಯನ್...

ಎಂಐಟಿ ಸಮ್ಮೇಳನಕ್ಕೆ ಸುಬ್ರಮಣಿಯನ್ ಸ್ವಾಮಿಗೆ ಆಹ್ವಾನ: ಉಪನ್ಯಾಸಕರಿಂದ ತೀವ್ರ ವಿರೋಧ

ವಾರ್ತಾಭಾರತಿವಾರ್ತಾಭಾರತಿ10 Feb 2019 10:33 PM IST
share
ಎಂಐಟಿ ಸಮ್ಮೇಳನಕ್ಕೆ ಸುಬ್ರಮಣಿಯನ್ ಸ್ವಾಮಿಗೆ ಆಹ್ವಾನ: ಉಪನ್ಯಾಸಕರಿಂದ ತೀವ್ರ ವಿರೋಧ

ಹೊಸದಿಲ್ಲಿ,ಫೆ.10: 9ನೇ ವಾರ್ಷಿಕ ಎಂಐಟಿ ಇಂಡಿಯಾ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಬಿಜೆಪಿಯ ಸುಬ್ರಮಣ್ಯನ್ ಸ್ವಾಮಿಯನ್ನು ಆಹ್ವಾನಿಸಿರುವುದರ ವಿರುದ್ಧ ಮಸಾಚುಸೆಟ್ಸ್ ತಾಂತ್ರಿಕ ಸಂಸ್ಥೆ (ಎಂಐಟಿ)ಯ ಉಪನ್ಯಾಸಕರ ಗುಂಪು ವಿರೋದ ವ್ಯಕ್ತಪಡಿಸಿದೆ.

ಈ ಬಗ್ಗೆ ಉಪನ್ಯಾಸಕರು ಹಾಕಿರುವ ಆನ್‌ಲೈನ್ ಮನವಿಯಲ್ಲಿ, ಸ್ವಾಮಿ ಇತ್ತೀಚೆಗೆ ಮಾಡಿರುವ ದ್ವೇಷ ಭಾಷಣ ಮತ್ತು ಬೈಪೋಲಾರ್ ಕಾಯಿಲೆಯಿರುವ ಜನರ ಬಗ್ಗೆ ಆಡಿರುವ ಮಾತುಗಳನ್ನು ಉಲ್ಲೇಖಿಸಿ ಆತಂಕ ವ್ಯಕ್ತಪಡಿಸಲಾಗಿದೆ. ಫೆಬ್ರವರಿ 16ರಂದು ನಡೆಯಲಿರುವ ಸಮ್ಮೇಳನದ ಜಾಲತಾಣದಲ್ಲಿ ಹೆಸರಿಸಲಾಗಿರುವ ಹದಿನೆಂಟು ಪ್ರಮುಖ ಭಾಷಣಕಾರರ ಪೈಕಿ ಸ್ವಾಮಿ ಒಬ್ಬರಾಗಿದ್ದಾರೆ. ಸ್ವಾಮಿಯ ಹೇಳಿಕೆಗಳು ಸಂಸ್ಥೆಯ ವೌಲ್ಯ ಮತ್ತು ತತ್ವಗಳಿಗೆ ವಿರುದ್ಧವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದ್ದು ಇದಕ್ಕೆ ಉಪನ್ಯಾಸಕರಾದ ಅಭಿಜಿತ್ ಬ್ಯಾನರ್ಜಿ, ಅರಿಂದಮ್ ದತ್ತಾ, ಬಾಲಕೃಷ್ಣನ್ ರಾಜಗೋಪಾಲ್, ಮೃಗಾಂಕ ಸುರ್, ಋತ್ ಪೆರ್ರಿ, ಸ್ಯಾಲಿ ಹಸ್ಲಂಗೆರ್, ಎಲಿಝಬೆತ್ ಎ ವುಡ್, ಹೆಲೆನ್ ಇ ಲೀ ಮತ್ತು ಅಭಾ ಸುರ್ ಸಹಿ ಹಾಕಿದ್ದಾರೆ. ಶನಿವಾರದ ವೇಳೆಗೆ ಈ ಮನವಿಗೆ 1,301 ಮಂದಿ ಸಹಿ ಹಾಕಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಮುಸ್ಲಿಮರ ಬಗ್ಗೆ ಆಡಿರುವ ಮಾತುಗಳು ದ್ವೇಷದಿಂದ ಕೂಡಿದೆ. ಸಮಾನ ಲಿಂಗದ ಜನರ ಮಧ್ಯೆ ಲೈಂಗಿಕತೆಯನ್ನು ನಿರಪರಾಧೀಕರಣಗೊಳಿಸುವ ಬಗ್ಗೆಯೂ ಅವರು ಆಕ್ಷೇಪ ಎತ್ತಿದ್ದರು. ಪ್ರಿಯಾಂಕಾ ಗಾಂಧಿಯನ್ನು ಬೈಪೋಲಾರ್ ಕಾಯಿಲೆ ಪೀಡಿತೆ ಎಂದು ಕರೆಯುತ್ತಾ, ಈ ಸಮಸ್ಯೆಯಿರುವವರು ನಾಯಕತ್ವವಹಿಸಿಕೊಳ್ಳಲು ಅನರ್ಹರು ಎಂದು ತಿಳಿಸಿದ್ದರು ಎಂದು ಮನವಿಯಲ್ಲಿ ವಿವರಿಸಲಾಗಿದೆ. 2011ರಲ್ಲಿ ಹಾರ್ವರ್ಡ್ ವಿಶ್ವವಿದ್ಯಾನಿಲಯದ ಕಲೆ ಮತ್ತು ವಿಜ್ಞಾನಗಳ ಉಪನ್ಯಾಸಕರು ಸ್ವಾಮಿಯನ್ನು ಬೋಧಿಸಲು ಆಹ್ವಾನಿಸದಿರುವುದನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X