Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಮಾಜಿ ವೇಗದ ಬೌಲರ್ ಅಮಿತ್ ಭಂಡಾರಿ...

ಭಾರತದ ಮಾಜಿ ವೇಗದ ಬೌಲರ್ ಅಮಿತ್ ಭಂಡಾರಿ ಮೇಲೆ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ11 Feb 2019 5:37 PM IST
share
ಭಾರತದ ಮಾಜಿ ವೇಗದ ಬೌಲರ್ ಅಮಿತ್ ಭಂಡಾರಿ ಮೇಲೆ ಹಲ್ಲೆ

ಹೊಸದಿಲ್ಲಿ, ಫೆ.11: ಭಾರತದ ಮಾಜಿ ವೇಗದ ಬೌಲರ್, ಡಿಡಿಸಿಎ ಹಿರಿಯ ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ಅಮಿತ್ ಭಂಡಾರಿ ಮೇಲೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸೈಂಟ್ ಸ್ಟೀಫನ್ಸ್ ಮೈದಾನದಲ್ಲಿ ಅಂಡರ್-23 ಕ್ರಿಕೆಟ್ ತಂಡದ ಟ್ರಯಲ್ಸ್ ನಡೆಯುತ್ತಿದ್ದಾಗ ಈ ಅಹಿತಕರ ಘಟನೆ ನಡೆದಿದೆ.

ಹಲ್ಲೆಯಿಂದಾಗಿ ಭಂಡಾರಿ ಅವರ ತಲೆ ಹಾಗೂ ಕಿವಿ ಭಾಗಕ್ಕೆ ಗಾಯವಾಗಿದ್ದು ಅವರನ್ನು ಸಹೋದ್ಯೋಗಿ ಸುಖ್ವಿಂದರ್ ಸಿಂಗ್ ಅವರು ಸಿವಿಲ್ ಲೈನ್ಸ್‌ನ ಸಂತ ಪರಮಾನಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಸ್ಥಳಕ್ಕೆ ಧಾವಿಸುವ ವೇಳೆಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

‘‘ನಾವು ಘಟನೆಯ ಸಮಗ್ರ ವರದಿ ಕಲೆಹಾಕಲು ಯತ್ನಿಸುತ್ತೇವೆ. ನನಗೆ ಗೊತ್ತಿರುವ ಪ್ರಕಾರ ರಾಷ್ಟ್ರೀಯ ಅಂಡರ್-23 ಟೂರ್ನಮೆಂಟ್‌ನ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆಯದ ಅತೃಪ್ತ ಆಟಗಾರನ ಕೃತ್ಯ ಇದಾಗಿದೆ. ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಟೀಫನ್ಸ್ ಮೈದಾನಕ್ಕೆ ತಲುಪಿದ್ದಾರೆ. ದಿಲ್ಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್‌ರೊಂದಿಗೆ ಖುದ್ದಾಗಿ ಮಾತನಾಡಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡದೆ ಬಿಡುವುದಿಲ್ಲ. ಈ ಕೃತ್ಯದಲ್ಲಿ ಒಳಗೊಂಡಿರುವ ಎಲ್ಲರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡುವೆ. ನಾವು ಎಫ್‌ಐಆರ್‌ನ್ನು ದಾಖಲಿಸಿದ್ದೇವೆ’’ ಎಂದು ಡೆಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಅಧ್ಯಕ್ಷ ರಜತ್ ಶರ್ಮಾ ಹೇಳಿದ್ದಿೆ.

ಘಟನೆಯ ಬಗ್ಗೆ ವಿವರಿಸಿದ ದಿಲ್ಲಿ ಹಿರಿಯರ ಹಾಗೂ ಅಂಡರ್-23 ತಂಡದ ಮ್ಯಾನೇಜರ್ ಶಂಕರ್ ಸೈನಿ, ‘‘ನಾನು ಟೆಂಟ್‌ನೊಳಗೆ ಸಹೋದ್ಯೋಗಿಯೊಂದಿಗೆ ಊಟ ಮಾಡುತ್ತಿದ್ದೆ. ಭಂಡಾರಿ ಅವರು ಇತರ ಆಯ್ಕೆಗಾರರು ಹಾಗೂ ಹಿರಿಯರ ತಂಡದ ಕೋಚ್ ಮಿಥುನ್ ಮನ್ಹಾಸ್ ಸಂಭಾವ್ಯ ಆಟಗಾರರ ಟ್ರಯಲ್ ಪಂದ್ಯವನ್ನು ನೋಡುತ್ತಿದ್ದರು. ಕೆಲವು ಜನರ ಗುಂಪು ಮೈದಾನ ಬಳಿ ಬಂದು ಭಂಡಾರಿಯವರತ್ತ ತೆರಳಿತು. ಇಬ್ಬರು ವ್ಯಕ್ತಿಗಳು ಹಾಗೂ ಭಂಡಾರಿ ಮಧ್ಯೆ ಮಾತಿನ ಚಕಮಕಿ ನಡೆಯಿತು. ಆ ಬಳಿಕ ಅವರು ಅಲ್ಲಿಂದ ತೆರಳಿದರು. ತಕ್ಷಣವೇ 15 ಜನರಿದ್ದ ತಂಡ ಹಾಕಿ ಸ್ಟಿಕ್ಸ್, ರಾಡ್ ಹಾಗೂ ಸೈಕಲ್ ಚೈನ್‌ನೊಂದಿಗೆ ಬಂದು ಹಲ್ಲೆ ನಡೆಸಿದೆ. ಟ್ರಯಲ್ಸ್‌ನಲ್ಲಿದ್ದ ಇತರ ಹುಡುಗರು ಹಾಗೂ ನಾನು ಭಂಡಾರಿಯವರ ರಕ್ಷಣೆಗೆ ಧಾವಿಸಿದೆವು. ಆ ಗುಂಪು ನಮಗೆ ಬೆದರಿಕೆ ಹಾಕಲಾರಂಭಿಸಿತು. ನೀವು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಬೇಡಿ. ಮುಂದೆ ಬಂದರೆ ಶೂಟ್ ಮಾಡುತ್ತೇವೆ ಎಂದು ಓರ್ವ ವ್ಯಕ್ತಿ ನಮಗೆ ಬೆದರಿಸಿದ. ಕಿಡಿಗೇಡಿಗಳ ಗುಂಪು ಹಾಕಿ ಸ್ಟಿಕ್ಸ್, ರಾಡ್ಸ್‌ನಿಂದ ಭಂಡಾರಿಗೆ ಹಲ್ಲೆ ನಡೆಸಿದ ಕಾರಣ ಅವರ ತಲೆಗೆ ಗಾಯವಾಗಿದೆ ಎಂದು ಸೈನಿ ಹೇಳಿದ್ದಾರೆ.

ದಾಳಿ ಹಿಂದೆ ಯಾರಿರಬಹುದು ಎಂದು ಕೇಳಿದಾಗ, ‘‘ಭಂಡಾರಿ ಬಳಿ ಮೊದಲಿಗೆ ಮಾತನಾಡಿದ್ದ ಇಬ್ಬರ ಪರಿಚಯ ನನಗಿಲ್ಲ. ಭಂಡಾರಿ ಪೊಲೀಸರಿಗೆ ಹೇಳಿಕೆ ನೀಡಿದ ಬಳಿಕ ಸತ್ಯ ಗೊತ್ತಾಗಬಹುದು’’ ಎಂದರು.

ದಿಲ್ಲಿ ಕ್ರಿಕೆಟ್ ಸಂಸ್ಥೆ ಭ್ರಷ್ಟಾಚಾರ ಆರೋಪ ಹಾಗೂ ಆಟಗಾರರ ಆಯ್ಕೆ ವಿಷಯಕ್ಕೆ ಸಂಬಂಧಿಸಿ ಸದಾ ಕಾಲ ಸುದ್ದಿಯಾಗುತ್ತಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X