Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ಮನೆಯಲ್ಲಿ ಮಲಗಿದ್ದ ಮನೆ ಮಾಲಕ,...

ಹೊಸ ಮನೆಯಲ್ಲಿ ಮಲಗಿದ್ದ ಮನೆ ಮಾಲಕ, ಸಂಬಂಧಿ ಮೃತ್ಯು: ಓರ್ವ ಅಸ್ವಸ್ಥ

ಜನರೇಟರ್ ವಿಷಾನಿಲದಿಂದ ಸಾವು ಶಂಕೆ

ವಾರ್ತಾಭಾರತಿವಾರ್ತಾಭಾರತಿ11 Feb 2019 6:52 PM IST
share
ಹೊಸ ಮನೆಯಲ್ಲಿ ಮಲಗಿದ್ದ ಮನೆ ಮಾಲಕ, ಸಂಬಂಧಿ ಮೃತ್ಯು: ಓರ್ವ ಅಸ್ವಸ್ಥ

ಚಿಕ್ಕಮಗಳೂರು, ಫೆ.11: ನೂತನವಾಗಿ ನಿರ್ಮಿಸಲಾಗಿದ್ದ ಮನೆಯಲ್ಲಿ ಮಲಗಿದ್ದ ಇಬ್ಬರು ಸಾವನ್ನಪ್ಪಿ, ಮತ್ತೋರ್ವ ಅಸ್ವಸ್ಥನಾಗಿರುವ ಘಟನೆ ಸೋಮವಾರ ಮುಂಜಾನೆ ನಗರ ಸಮೀಪದ ಹರಿಹರದಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಕೋಣೆಯ ಕಿಟಕಿ, ಬಾಗಿಲು ಹಾಕಿದ್ದರಿಂದ ಉಸಿರುಗಟ್ಟಿ ಇಲ್ಲವೇ ವಿದ್ಯುತ್ ಶಾಕ್‍ನಿಂದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಲೂಕಿನ ಹರಿಹರದಹಳ್ಳಿ ಗ್ರಾಮದ ಶಿವಕುಮಾರ್(35), ಭರತ್(20) ಮೃತಪಟ್ಟಿದ್ದು, ಸಚಿನ್ ಎಂಬಾತ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಹರಿಹರದಹಳ್ಳಿ ಗ್ರಾಮದ ಶಿವಕುಮಾರ್ ಎಂಬವರು ಗ್ರಾಮದಲ್ಲಿ ಹೊಸದಾಗಿ ಇತ್ತೀಚೆಗೆ ಹೊಸ ಮನೆಯೊಂದನ್ನು ಕಟ್ಟಿಸಿದ್ದರು. ಈ ನೂತನ ಮನೆಯ ಗೃಹಪ್ರವೇಶ ಇದೇ ತಿಂಗಳ 15ರಂದು ನಡೆಯಬೇಕಿತ್ತು. ಈ ಕಾರಣಕ್ಕೆ ರವಿವಾರ ಮನೆಯ ಸಣ್ಣಪುಟ್ಟ ಕೆಲಸ ಮಾಡಿದ ಬಳಿಕ ಮನೆ ಮಾಲಕ ಶಿವಕುಮಾರ್ ತನ್ನ ಸಹೋದರಿಯ ಮಗ ಭರತ್ ಹಾಗೂ ಸಂಬಂಧಿ ಸಚಿನ್ ಎಂಬವರೊಂದಿಗೆ ಫೆ.10ರಂದು ರಾತ್ರಿ ತಮ್ಮ ಹೊಸ ಮನೆಯಲ್ಲಿಯೇ ಮಲಗಿದ್ದರು. ಹೊಸ ಮನೆಗೆ ಹೋದಾಗ ವಿದ್ಯುತ್ ಕಡಿತಗೊಂಡಿದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆಯಲ್ಲಿಟ್ಟು ಮನೆಯ ಕಿಟಕಿ ಹಾಗೂ ಬಾಗಿಲು ಮುಚ್ಚಿ ಮಲಗಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಸೋಮವಾರ ಮುಂಜಾನೆ ಶಿವಕುಮಾರ್ ಅವರ ಪತ್ನಿ ಹೊಸ ಮನೆಗೆ ಹೋಗಿ ಬಾಗಿಲು ಬಡಿದು ಕೂಗಿದರೂ ಯಾರೂ ಪ್ರತಿಕ್ರಿಯೆ ನೀಡಿಲ್ಲ. ಕೂಡಲೇ ಪತ್ನಿಯು ಮನೆಗೆ ಹೋಗಿ ಶಿವಕುಮಾರ್ ಅವರ ಸಹೊದರ ಎಚ್.ಎಂ.ನಾಗರಾಜ್ ಅವರಿಗೆ ತಿಳಿಸಿದಾಗ ಅವರೂ ಬಂದು ಕೂಗಿದ್ದಾರೆ. ಆಗಲೂ ಪ್ರತಿಕ್ರಿಯೆ ಬಾರದಿದ್ದಾಗ ಹಾರೆಯಿಂದ ಬಾಗಿಲನ್ನು ಮೀಟಿ ತೆಗೆದು ಒಳಗೆ ನೋಡಿದಾಗ ಶಿವಕುಮಾರ್ ಹಾಗೂ ಭರತ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಚಿನ್ ನೆಲದ ಮೇಲೆ ಹೊರಳಾಡುತ್ತಾ ನರಳುತ್ತಿದ್ದ ಎನ್ನಲಾಗಿದ್ದು, ಕೂಡಲೇ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.

ಪರೀಕ್ಷಿಸಿದ ವೈದ್ಯರು ಶಿವಕುಮಾರ್ ಹಾಗೂ ಭರತ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದು, ಸಚಿನ್‍ಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ರವಾನಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ವಿದ್ಯುತ್ ಶಾಕ್ ಅಥವಾ ಜನರೇಟರ್ ಹೊಗೆಯಿಂದ ಸಾವನ್ನಪ್ಪಿರಬಹುದೆಂದು ಶಂಕಿಸಿರುವ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತರಿಬ್ಬರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X