Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇರಾ: ಪರಪ್ಪು ಸೈಟ್‍ನಲ್ಲಿ ಸಮಸ್ತ ಮಹಾ...

ಇರಾ: ಪರಪ್ಪು ಸೈಟ್‍ನಲ್ಲಿ ಸಮಸ್ತ ಮಹಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ11 Feb 2019 9:59 PM IST
share
ಇರಾ: ಪರಪ್ಪು ಸೈಟ್‍ನಲ್ಲಿ ಸಮಸ್ತ ಮಹಾ ಸಮ್ಮೇಳನ

ಕೊಣಾಜೆ, ಫೆ. 11:  ಸಮಾಜದಲ್ಲಿ ಧಾರ್ಮಿಕ ಮತ್ತು ಸಾಮಾಜಿಕವಾಗಿ ಜಾಗೃತಿ ಮೂಡಿಸುವ ಜವಾಬ್ದಾರಿ ಸಮಸ್ತ  ಕಾರ್ಯಕರ್ತರ ಮೇಲಿದ್ದು, ಇತರರನ್ನು ಸೋಲಿಸುವ, ದ್ವೇಷಿಸುವ ಕೆಲಸ ಸಮಸ್ತ ಕಾರ್ಯಕರ್ತರಿಂದ ನಡೆಯಬಾರದು ಎಂದು ಬೆಳ್ತಂಗಡಿ ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ಸಯ್ಯಿದ್  ಝೈನುಲ್ ಅಬಿದೀನ್ ಜಿಫ್ರಿ ತಂಙಳ್ ಪೊಸೋಟ್ ಕಿವಿಮಾತು ಹೇಳಿದರು.

ಎಸ್ಕೆಎಸ್ಸೆಸ್ಸೆಫ್ ಪರಪ್ಪು ಸೈಟ್ ಶಾಖೆಯ ವತಿಯಿಂದ ರವಿವಾರ ಪರಪ್ಪು ಸೈಟ್‍ನಲ್ಲಿರುವ ಪಂಚಾಯಿತಿ  ಮೈದಾನದಲ್ಲಿ ನಡೆದ ಸಮಸ್ತ ಮಹಾಸಮ್ಮೇಳನ, ಶೈಖುನಾ ಮಿತ್ತಬೈಲ್ ಜಬ್ಬಾರ್ ಉಸ್ತಾದ್ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದು ಕೆಲವು ಧರ್ಮಗುರುಗಳು ಸ್ವಾರ್ಥಕ್ಕಾಗಿ ಜನರನ್ನು ಹೆದರಿಸಿ ಹೆಸರು ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾರನ್ನೋ ಹೆದರಿಸಿ ಅಥವಾ ಯಾರೂ ದೊಡ್ಡ ಫ್ಲೆಕ್ಸ್ ಹಾಕಿದ ಮಾತ್ರಕ್ಕೆ ಮಹಾತ್ಮನಾಗಲಾರ. ಸಮಸ್ತದ ಆದರ್ಶ ಪವಿತ್ರವಾಗಿದೆ, ಈ ಸಂಘಟನೆ ಮಹಾತ್ಮರು ಮುನ್ನಡೆಸುತ್ತಿರುವುದರಿಂದ ಯಾವುದೇ ರೀತಿಯ ಕೊರತೆ ಕಂಡು ಹಿಡಿಯಲು ಸಾಧ್ಯವಿಲ್ಲ ಎಂದು ಹೇಳಿದರು.

ಜಿಲ್ಲಾ ಸಮಸ್ತ ಮುದರ್ರಿಸ್ ಉಪಾಧ್ಯಕ್ಷ ಹಾರೂನ್ ಅಹ್ಸನಿ  ಕೋಟೆಕಾರ್  ಮಾತನಾಡಿ, ದೊಡ್ಡ ಕಟ್ಟಡ ಕಟ್ಟಿದ ಮಾತ್ರಕ್ಕೆ ಮಹಾನ್ ಗುರು ಆಗಲು ಸಾಧ್ಯವಿಲ್ಲ. ನಯ-ವಿನಯ, ಇಹಲೋಕದ ಮೇಲೆ ಜಿಗುಪ್ಸೆಯ ಜೀವನ ನಡೆಸಿದವರೇ ಮಹಾನ್ ವ್ಯಕ್ತಿ ಎನಿಸುತ್ತಾರೆ. ಇಂತಹ ಧರ್ಮಗುರುಗಳನ್ನು ಸಮಸ್ತದಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು.

ಶೈಖುನಾ ಮುಹಮ್ಮದ್ ಮುಸ್ಲಿಯಾರ್ ಪಾತೂರ್ ಧ್ವಜರೋಹಣಗೈದರು. ಸಯ್ಯಿದ್ ಇಬ್ರಾಹಿಂ ಬಾತಿಷ್ ತಂಙಳ್ ಅಲ್ ಅಝ್ಹರಿ ಅನೆಕಲ್ಲು ಮಜ್ಲಿಸುನ್ನೂರು ನೇತೃತ್ವ ನೀಡಿದರು. ಸಮಸ್ತ ಕರ್ನಾಟಕ ಮುಶಾವರ ಪ್ರಾಂಶುಪಾಲ ಶೈಖುನಾ ಅಲ್-ಹಾಜ್ ಬಿ.ಕೆ.ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಉದ್ಘಾಟಿಸಿದರು. ಪರಪ್ಪು ಸೈಟ್ ಎಸ್ಕೆಸ್ಸೆಸ್ಸೆಫ್ ಅಧ್ಯಕ್ಷ ಮುಹಮ್ಮದ್ ರಫೀಕ್ ಪರಪ್ಪು ಅಧ್ಯಕ್ಷತೆ ವಹಿಸಿದ್ದರು. ಉಸ್ತಾದ್ ವಲಿಯುದ್ದೀನ್ ಫೈಝಿ ವಯಕ್ಕಾಡ್ ಮುಖ್ಯ ಭಾಷಣ ಮಾಡಿದರು.

ಅನೀಸ್ ಕೌಸರಿ ವಿರಮಂಗೀಲ, ಅಬ್ದುಲ್ಲಾ ಮುಸ್ಲಿಯಾರ್ ಪರಪ್ಪು, ರಿಯಾಝ್ ರಹ್ಮಾನಿ ಕಿನ್ಯ, ಝೈನ್ ಸಖಾಫಿ ಉಳ್ಳಾಲ, ಟಿ.ಇಬ್ರಾಹಿಂ ಸಂಪಿಲ, ಇಬ್ರಾಹಿಂ ದಾರಿಮಿ ಪಾತೂರು, ಮಾಹಿನ್ ದಾರಿಮಿ ಪಾತೂರು, ಹನೀಫ್ ಮುಸ್ಲಿಯಾರ್ ಬೋಳಂತೂರು ಮುಖ್ಯ ಅತಿಥಿಗಳಾಗಿದ್ದರು. ಎಸ್ಕೆಎಸ್ಸೆಸ್ಸೆಫ್ ಪದಾಧಿಕಾರಿಗಳಾದ ಇಕ್ಬಾಲ್ ಸೈಟ್, ರಝಾಕ್ ಸೈಟ್, ಇಬ್ರಾಹಿಂ ಸೈಟ್, ಇಸ್ಮಾಯಿಲ್ ಸೈಟ್, ಇಲ್ಯಾಸ್ ಪರಪ್ಪು, ನಿಝಾಮ್ ಪರಪ್ಪು, ಉಮ್ಮರ್ ಇರಾ ಮೊದಲಾದವರು ಉಪಸ್ಥಿತರಿದ್ದರು.

ಮುಹಮ್ಮದ್ ಅಲಿ ಫೈಝಿ ಪರಪ್ಪು ಸ್ವಾಗತಿಸಿದರು. ಇರ್ಷಾದ್ ಫೈಝಿ ಪಾಣತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಇರ್ಫಾನ್ ಮೌಲವಿ ಕಲಾಯಿ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X