Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಕಳ್ಳಭಟ್ಟಿ ದುರಂತ;...

ಉತ್ತರಪ್ರದೇಶ: ಕಳ್ಳಭಟ್ಟಿ ದುರಂತ; ಇಬ್ಬರು ಹಿರಿಯ ಅಧಿಕಾರಿಗಳ ಅಮಾನತು

ವಾರ್ತಾಭಾರತಿವಾರ್ತಾಭಾರತಿ11 Feb 2019 11:36 PM IST
share
ಉತ್ತರಪ್ರದೇಶ: ಕಳ್ಳಭಟ್ಟಿ ದುರಂತ; ಇಬ್ಬರು ಹಿರಿಯ ಅಧಿಕಾರಿಗಳ ಅಮಾನತು

 ಲಕ್ನೋ, ಫೆ. 11: 104 ಜನರ ಸಾವಿಗೆ ಕಾರಣವಾದ ಉತ್ತರಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತಕ್ಕೆ ಸಂಬಂಧಿಸಿ ಉತ್ತರಪ್ರದೇಶ ಸರಕಾರ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಕಳ್ಳ ಭಟ್ಟಿ ದುರಂತದಲ್ಲಿ ಉತ್ತರಪ್ರದೇಶಲ್ಲಿ 67 ಮಂದಿ ಹಾಗೂ ಉತ್ತರಾಖಂಡದಲ್ಲಿ 37 ಮಂದಿ ಮೃತಪಟ್ಟಿದ್ದರು.

ಅನಂತರ ಉತ್ತರ ಪ್ರದೇಶದ ವಿವಿಧ ಭಾಗಗಲ್ಲಿ ದಾಳಿ ನಡೆಸಿ 79,000 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಳ್ಳಲಾಗಿತ್ತು. ಕಳ್ಳಭಟ್ಟಿಯಿಂದ ಸಾವು ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಸಿಟ್) ದಿಂದ ತನಿಖೆ ನಡೆಸುವುದಾಗಿ ಉತ್ತರಪ್ರದೇಶ ಸರಕಾರ ನಿನ್ನೆ ಘೋಷಿಸಿತ್ತು. ನಿರ್ದಿಷ್ಟವಾಗಿ ಪಿತೂರಿಯ ಆಯಾಮದ ಬಗ್ಗೆ ಗಮನ ಕೇಂದ್ರೀಕರಿಸುವಂತೆ ಹಾಗೂ 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಸಿಂಘಾಲ್ ನೇತೃತ್ವದ ಐವರು ಸದಸ್ಯರ ಸಿಟ್ ತಂಡಕ್ಕೆ ಸರಕಾರ ಸೂಚಿಸಿದೆ.

ಕಳ್ಳಭಟ್ಟಿ ದುರಂತದಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದ ಸಹರಣಪುರ ಹಾಗೂ ಕುಶಿನಗರ್‌ನ ಸರ್ಕಲ್ ಅಧಿಕಾರಿಗಳನ್ನು ಅಮಾನತುಗೊಳಿಸುವ ನಿರ್ಧಾರವನ್ನು ಕೂಡ ರಾಜ್ಯ ಸರಕಾರ ತೆಗೆದುಕೊಂಡಿದೆ. ಕಳ್ಳಭಟ್ಟಿ ದುರಂತದ ಬಗ್ಗೆ ಆದಿತ್ಯನಾಥ್ ನೇತೃತ್ವದ ಸರಕಾರ ಹಾಗೂ ಸಮಾಜವಾದಿ ಪಕ್ಷದ ನಡುವೆ ತೀವ್ರ ವಾಗ್ವಾದಗಳು ನಡೆದ ಬಳಿಕ ಅಧಿಕಾರಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಘಟನೆ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು ಹಾಗೂ ಇದು ಬಿಜೆಪಿ ಸರಕಾರದ ‘ಕೇವಲ ಕಠೋರತೆ’ಯ ಪ್ರತಿಫಲ ಎಂದಿದ್ದಾರೆ.

ಒಂದು ವೇಳೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಕಳ್ಳಭಟ್ಟಿ ಪ್ರಕರಣದಲ್ಲಿ ಸಂಪರ್ಕ ಹೊಂದಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ. ಈ ಹಿಂದೆ ಕೂಡ ಇಂತಹ ದುಷ್ಕೃತ್ಯದಲ್ಲಿ ಎಸ್‌ಪಿ ನಾಯಕರು ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು. ಅಝಂಗಢ, ಹರ್ಡೋಲಿ, ಕಾನ್ಪುರ ಹಾಗೂ ಬಾರಾಬಂಕಿಯಲ್ಲಿ ಸಂಭವಿಸಿದ್ದ ಕಳ್ಳಭಟ್ಟಿ ದುರಂತದಲ್ಲಿ ಎಸ್‌ಪಿ ನಾಯಕರು ಪಾಲ್ಗೊಂಡಿರುವುದು ಬಹಿರಂಗಗೊಂಡಿತ್ತು. ಈ ಬಾರಿ ಕೂಡ ಅವರ ಪಿತೂರಿಯನ್ನು ನಾವು ನಿರಾಕರಿಸಲು ಸಾಧ್ಯವಿಲ್ಲ ಎಂದು ಆದಿತ್ಯನಾಥ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X