Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಎಚ್ಚರಿಕೆ....ಅತಿಯಾದ ಟೂತ್ ಪೇಸ್ಟ್ ಬಳಕೆ...

ಎಚ್ಚರಿಕೆ....ಅತಿಯಾದ ಟೂತ್ ಪೇಸ್ಟ್ ಬಳಕೆ ಮಕ್ಕಳಲ್ಲಿ ಈ ಅಪಾಯಕ್ಕೆ ಕಾರಣವಾಗಬಹುದು!

ವಾರ್ತಾಭಾರತಿವಾರ್ತಾಭಾರತಿ12 Feb 2019 5:09 PM IST
share
ಎಚ್ಚರಿಕೆ....ಅತಿಯಾದ ಟೂತ್ ಪೇಸ್ಟ್ ಬಳಕೆ ಮಕ್ಕಳಲ್ಲಿ ಈ ಅಪಾಯಕ್ಕೆ ಕಾರಣವಾಗಬಹುದು!

ಮಕ್ಕಳಿಗೆ ಸರಿಯಾದ ಪ್ರಮಾಣದ ಅರಿವಿಲ್ಲದಿರುವುದರಿಂದ ಅವರು ಅಗತ್ಯಕ್ಕಿಂತ ಹೆಚ್ಚು ಟೂತ್ ಪೇಸ್ಟ್ ಬಳಸುತ್ತಾರೆ. ಇದು ಸಣ್ಣ ವಿಷಯವಾಗಿರಬಹುದು ಮತ್ತು ಇದೇ ಕಾರಣದಿಂದ ಹೆಚ್ಚಿನ ಪೋಷಕರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಮಕ್ಕಳು ಅಗತ್ಯಕ್ಕಿಂತ ಹೆಚ್ಚಿನ ಟೂತ್ ಪೇಸ್ಟ್ ಬಳಸಿದರೆ ಅದು ಅವರಲ್ಲಿ ದಂತಕ್ಷಯಕ್ಕೆ ಕಾರಣವಾಗಬಹುದು ಎನ್ನುವುದು ನಿಮಗೆ ಗೊತ್ತೇ?, ಅಗತ್ಯಕ್ಕಿಂತ ಹೆಚ್ಚಿನ ಟೂತ್ ಪೇಸ್ಟ್ ಬಳಸುವ ಮಕ್ಕಳು ಬೆಳೆದು ದೊಡ್ಡವರಾದಾಗ ಫ್ಲೋರೊಸಿಸ್‌ ಗೆ ಗುರಿಯಾಗುವ ಹೆಚ್ಚಿನ ಅಪಾಯವನ್ನು ಎದುರಿಸುತ್ತಾರೆ ಎನ್ನುವುದನ್ನು ಇತ್ತೀಚಿನ ಅಧ್ಯಯನವೊಂದು ಬೆಟ್ಟು ಮಾಡಿದೆ.

ಫ್ಲೋರೊಸಿಸ್ ಹಲ್ಲುಗಳನ್ನು ಕಾಡುವ ಕಾಯಿಲೆಯಾಗಿದೆ. ವ್ಯಕ್ತಿಯ ಬದುಕಿನ ಮೊದಲ ಎಂಟು ವರ್ಷಗಳಲ್ಲಿ ಅತಿಯಾದ ಫ್ಲೋರೈಡ್ ಸೇವನೆ ಈ ಕಾಯಿಲೆಗೆ ಕಾರಣವಾಗುತ್ತದೆ.

ಫ್ಲೋರೈಡ್ ನೀರು ಮತ್ತು ಮಣ್ಣಿನಲ್ಲಿರುವ ಖನಿಜವಾಗಿದೆ. ನೈಸರ್ಗಿಕ ನೀರನ್ನು ಕುಡಿಯುವ ಜನರು ಹೆಚ್ಚು ಫ್ಲೋರೈಡ್‌ನ್ನು ಸೇವಿಸುತ್ತಾರೆ ಮತ್ತು ಇದೇ ಕಾರಣದಿಂದ ಅವರಲ್ಲಿ ದಂತಕುಳಿಗಳು ಕಡಿಮೆ ಎನ್ನುವುದು ಹಿಂದಿನ ಅಧ್ಯಯನಗಳಲ್ಲಿ ಬೆಳಕಿಗೆ ಬಂದ ನಂತರ ಟೂತ್ ಪೇಸ್ಟ್, ಮೌತ್ ವಾಷ್ ಮತ್ತು ಬಾಯಿಯ ಆರೋಗ್ಯವನ್ನು ಕಾಪಾಡುವ ಇತರ ಉತ್ಪನ್ನಗಳಲ್ಲಿ ಫ್ಲೋರೈಡ್ ಸೇರ್ಪಡೆಗೊಂಡಿತ್ತು. ಆದರೆ ಅತಿಯಾದ ಫ್ಲೋರೈಡ್ ಸೇವನೆ ಹಲ್ಲುಗಳು ಬಣ್ಣಗೆಡಲು,ಅವುಗಳ ಮೇಲೆ ಕಲೆಗಳುಂಟಾಗಲು ಮತ್ತು ಫ್ಲೋರೊಸಿಸ್‌ ಗೆ ಕಾರಣವಾಗುತ್ತದೆ ಎನ್ನುವುದನ್ನು ಇತ್ತೀಚಿನ ಅಧ್ಯಯನವು ಬೆಳಿಕಿಗೆ ತಂದಿದೆ.

ಮಕ್ಕಳು ಆರೋಗ್ಯಕರ ಹಲ್ಲುಗಳು ಮತ್ತು ವಸಡುಗಳಿಗಾಗಿ ಬಟಾಣಿ ಗಾತ್ರದಷ್ಟು ಅಥವಾ ಅದಕ್ಕೂ ಕಡಿಮೆ ಟೂಥ್‌ಪೇಸ್ಟ್‌ನ್ನು ಬಳಸಬೇಕು ಎಂದೂ ಅಧ್ಯಯನವು ಶಿಫಾರಸು ಮಾಡಿದೆ. ಆದರೆ ಶೇ.40ರಷ್ಟು ಮಕ್ಕಳು ಅರ್ಧ ಬ್ರಷ್ ಅಥವಾ ಪೂರ್ಣ ಬ್ರಷ್‌ನಷ್ಟು ಟೂತ್ ಪೇಸ್ಟ್ ನ್ನು ಬಳಸುತ್ತಾರೆ ಎನ್ನುವುದು ಕಂಡು ಬಂದಿದೆ.

ಫ್ಲೋರೈಡ್‌ನ್ನು ಸೂಕ್ತ ಪ್ರಮಾಣದಲ್ಲಿ ಬಳಸಿದರೆ ಅದು ಬಾಯಿಯ ಆರೋಗ್ಯಕ್ಕೆ ಅತ್ಯಂತ ಲಾಭಕರ ಎನ್ನುವುದು ತಜ್ಞರ ಅಭಿಪ್ರಾಯ. ಕಾಯಿಲೆ ನಿಯಂತ್ರಣ ಮತ್ತು ತಡೆ ಕೇಂದ್ರಗಳ ಸಂಶೋಧಕರು ಕೈಗೊಂಡಿದ್ದ ಅಧ್ಯಯನದಲ್ಲಿ 3ರಿಂದ 15 ವರ್ಷ ಪ್ರಾಯದ 5,000ಕ್ಕೂ ಅಧಿಕ ಮಕ್ಕಳನ್ನು ಭಾಗಿಯಾಗಿಸಲಾಗಿತ್ತು.

ಮೂರು ವರ್ಷಕ್ಕಿಂತ ಕೆಳಗಿನ ಮಕ್ಕಳು ಅಕ್ಕಿಕಾಳಿನಷ್ಟು ಗಾತ್ರದ ಟೂಥ್‌ಪೇಸ್ಟ್ ಬಳಸಬೇಕು ಮತ್ತು 3ರಿಂದ 6 ವರ್ಷ ಪ್ರಾಯದ ಮಕ್ಕಳು ಬಟಾಣಿ ಗಾತ್ರದಷ್ಟು ಟೂತ್ ಪೇಸ್ಟ್ ಬಳಸಬೇಕು ಎಂದು ಸಂಶೋಧನಾ ವರದಿಯು ಶಿಫಾರಸು ಮಾಡಿದೆ.

ಪೋಷಕರು ಮಕ್ಕಳ ಆಹಾರದ ವಿಷಯದಲ್ಲಿ ವಹಿಸುವಷ್ಟೇ ಕಾಳಜಿಯನ್ನು ಅವರು ಬಳಸುವ ಟೂತ್ ಬ್ರಷ್ ಮತ್ತು ಟೂತ್ ಪೇಸ್ಟ್ ಪ್ರಮಾಣದ ಬಗ್ಗೆಯೂ ವಹಿಸಬೇಕು ಎಂದು ಸಂಶೋಧಕರು ವರದಿಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X