Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರಬಲ ವ್ಯಕ್ತಿಗಳು ದ್ವೇಷ ಮತ್ತು ವಿಭಜನೆ...

ಪ್ರಬಲ ವ್ಯಕ್ತಿಗಳು ದ್ವೇಷ ಮತ್ತು ವಿಭಜನೆ ಬಿತ್ತುತ್ತಿದ್ದಾರೆ: ಕಮಲಾ ಹ್ಯಾರಿಸ್

ಟೀಕಾಕಾರರ ವಿರುದ್ಧ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ12 Feb 2019 8:19 PM IST
share
ಪ್ರಬಲ ವ್ಯಕ್ತಿಗಳು ದ್ವೇಷ ಮತ್ತು ವಿಭಜನೆ ಬಿತ್ತುತ್ತಿದ್ದಾರೆ: ಕಮಲಾ ಹ್ಯಾರಿಸ್

ನ್ಯೂಯಾರ್ಕ್, ಫೆ. 12: ತನ್ನ ಕರಿಯ ವರ್ಣದ ಪರಂಪರೆ, ಪ್ರಾಸಿಕ್ಯೂಟರ್ ಆಗಿ ಅಲ್ಪಸಂಖ್ಯಾತರನ್ನು ಜೈಲಿಗೆ ತಳ್ಳಿರುವ ದಾಖಲೆ ಹಾಗೂ ಬಿಳಿಯ ವ್ಯಕ್ತಿಯನ್ನು ಮದುವೆಯಾಗಲು ತಾನು ತೆಗೆದುಕೊಂಡಿರುವ ನಿರ್ಧಾರವನ್ನು ಪ್ರಶ್ನಿಸಿರುವ ತನ್ನ ಟೀಕಾಕಾರರ ವಿರುದ್ಧ ಅಮೆರಿಕದ ಸೆನೆಟರ್ ಕಮಲಾ ಹ್ಯಾರಿಸ್ ನೇರ ವಾಗ್ದಾಳಿ ನಡೆಸಿದ್ದಾರೆ.

ಭಾರತ ಮತ್ತು ಜಮೈಕ ಮೂಲದ ಕಮಲಾ ಹ್ಯಾರಿಸ್ 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವುದನ್ನು ಸ್ಮರಿಸಬಹುದಾಗಿದೆ.

ನ್ಯೂಯಾರ್ಕ್‌ನ ‘ದ ಬ್ರೇಕ್‌ಫಾಸ್ಟ್ ಕ್ಲಬ್ ರೇಡಿಯೊ’ಗೆ ಸೋಮವಾರ ನೀಡಿದ ಸಂದರ್ಶನದಲ್ಲಿ ಅವರು ತನ್ನ ವಿರೋಧಿಗಳ ವಿರುದ್ಧ ಮಾತಿನ ಪ್ರಹಾರ ನಡೆಸಿದರು ಎಂದು ಸಿಎನ್‌ಎನ್ ವರದಿ ಮಾಡಿದೆ.

‘‘ಕಮಲಾ ಹ್ಯಾರಿಸ್ ಆಫ್ರಿಕನ್-ಅಮೆರಿಕನ್ ಎಂಬುದಾಗಿ ಹೇಳುತ್ತಿದ್ದಾರೆ. ಆದರೆ, ಅವರು ಆಫ್ರಿಕನ್-ಅಮೆರಿಕನ್ ಅಲ್ಲ. ಅವರ ಹೆತ್ತವರು ಭಾರತ ಮತ್ತು ಜಮೈಕದಲ್ಲಿ ಹುಟ್ಟಿ ಅಮೆರಿಕಕ್ಕೆ ವಲಸೆ ಬಂದವರು. ಅದೂ ಅಲ್ಲದೆ, ಅವರು ತನ್ನ ಹೈಸ್ಕೂಲ್ ವರ್ಷಗಳನ್ನು ಕೆನಡದಲ್ಲಿ ಕಳೆದವರು’’ ಎಂಬ ಆರೋಪದ ಬಗ್ಗೆ ಕಾರ್ಯಕ್ರಮದ ನಿರೂಪಕರು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕಮಲಾ, ‘‘ನಾನು ಹುಟ್ಟಿದ್ದು ಓಕ್‌ ಲ್ಯಾಂಡ್‌ ನಲ್ಲಿ. ಕೆನಡದ ಮಾಂಟ್ರಿಯಲ್‌ನಲ್ಲಿ ಹೈಸ್ಕೂಲ್‌ಗೆ ಹೋಗಿರುವುದನ್ನು ಬಿಟ್ಟರೆ ನಾನು ಬೆಳೆದದ್ದು ಅಮೆರಿಕದಲ್ಲಿ’’ ಎಂದು ಹೇಳಿದರು.

‘‘ನೋಡಿ, ಇದನ್ನೇ ಅವರು ಬರಾಕ್ ಒಬಾಮ (ಅಮೆರಿಕದ ಮಾಜಿ ಅಧ್ಯಕ್ಷ)ಗೂ ಮಾಡಿದ್ದರು. ಇದು ನಮಗೆ ಹೊಸದಲ್ಲ. ಹಾಗಾಗಿ, ಅವರು ಏನು ಮಾಡಲು ಹೊರಟಿದ್ದಾರೆ ಎನ್ನುವುದು ನಮಗೆ ಗೊತ್ತಿದೆ’’ ಎಂದರು.

‘‘ಕಳೆದ ಎರಡು ವರ್ಷಗಳಿಂದ ನಮ್ಮ ದೇಶದಲ್ಲಿ ಏನು ನಡೆಯುತ್ತಿದೆಯೋ, ಅದನ್ನೇ ಅವರು ಮಾಡಹೊರಟಿದ್ದಾರೆ. ಪ್ರಬಲ ವ್ಯಕ್ತಿಗಳು ದ್ವೇಷ ಮತ್ತು ವಿಭಜನೆಯನ್ನು ಬಿತ್ತಲು ಪ್ರಯತ್ನಿಸುತ್ತಿದ್ದಾರೆ. ಹಾಗೂ ಈ ಆಟದಲ್ಲಿ ನಮ್ಮನ್ನು ತೊಡಗಿಸಲು ಅವರು ಮುಂದಾಗುವಾಗ ಅದು ನಮಗೆ ಗೊತ್ತಾಗಬೇಕು’’ ಎಂದು ಕಮಲಾ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X