Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಆಪರೇಶನ್ ಆಡಿಯೋ' ವಿಚಾರ ಈಗ ಸದನದ...

'ಆಪರೇಶನ್ ಆಡಿಯೋ' ವಿಚಾರ ಈಗ ಸದನದ ಆಸ್ತಿಯಾಗಿದೆ: ಸಿದ್ದರಾಮಯ್ಯ

"ತನಿಖೆ ನಡೆದು ಕಳಂಕದಿಂದ ಹೊರ ಬರಬೇಕಿದೆ"

ವಾರ್ತಾಭಾರತಿವಾರ್ತಾಭಾರತಿ12 Feb 2019 9:52 PM IST
share
ಆಪರೇಶನ್ ಆಡಿಯೋ ವಿಚಾರ ಈಗ ಸದನದ ಆಸ್ತಿಯಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಫೆ.12: ಧ್ವನಿ ಸುರುಳಿ ವಿಚಾರ ಕಳೆದ ಎರಡು ದಿನಗಳಿಂದ ಸದನದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೆ, ಸಂಸತ್ತಿನಲ್ಲಿಯೂ ಈ ವಿಚಾರ ಚರ್ಚೆಯಾಗಿದೆ. ಈಗ ಇದು ಸದನದ ಆಸ್ತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೆ ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಈ ಸಂಬಂಧ ಯಾವುದಾದರೂ ಒಂದು ತನಿಖೆ ನಡೆದು ಕಳಂಕದಿಂದ ಹೊರ ಬರಬೇಕಿದೆ ಎಂದರು.

ಸಾರ್ವಜನಿಕವಾಗಿ ನಮ್ಮ ಬಗ್ಗೆ ಇರುವ ಗೌರವ ಕ್ರಮೇಣ ಕಡಿಮೆಯಾಗುತ್ತಿದೆ. ನಮ್ಮನ್ನು ಸಂಶಯದಿಂದ ನೋಡುವಂತಾಗಿದೆ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು, ಸದನದಲ್ಲಿ ನಡೆಯುತ್ತಿರುವ ಚರ್ಚೆಗಳು ನೋಡಿದರೆ ಜನ ನಮ್ಮ ಮೇಲೆ ಸಂಶಯಪಡುವುದು ಸಹಜವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಸದನದ 224 ಸದಸ್ಯರಿಗೂ ನಿಮ್ಮ ಮೇಲೆ ವಿಶ್ವಾಸವಿದೆ. ನಿಮ್ಮ ಪ್ರಾಮಾಣಿಕತೆ, ನಿಮ್ಮ ಖಾಸಗಿ ಹಾಗೂ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ಈ ಸುದ್ದಿಯಿಂದಾಗಿ ಭಾವನಾತ್ಮಕವಾಗಿ ಯಾವುದೇ ತೀರ್ಮಾನ ಕೈಗೊಳ್ಳಬೇಡಿ, ಈ ಧ್ವನಿ ಸುರುಳಿಯ ಸತ್ಯಾಸತ್ಯತೆ ಏನು ಎಂಬುದು ಹೊರಗೆ ಬರಬೇಕಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರಚನೆಯಾದಾಗಿನಿಂದಲೂ ಒಂದೇ ಪ್ರಶ್ನೆ ನಮ್ಮ ಮುಂದೆ ಬರುತ್ತಿದೆ. ಈ ಸರಕಾರ ಉಳಿಯುತ್ತದೆಯೇ? ಈ ಸರಕಾರ ಅಭದ್ರವಾಗಿದೆ. ಬಾಂಬೆ, ಚೈನ್ನೈ, ದಿಲ್ಲಿಗೆ 10, 14 ಶಾಸಕರು ಹೋಗಿದ್ದಾರಂತೆ ಎಂಬ ಪ್ರಶ್ನೆಗಳು ನಮ್ಮ ಮುಂದೆ ಬರುತ್ತಿವೆ. ಕೆಲವು ಮಾಧ್ಯಮಗಳಂತೂ ಸರಕಾರಕ್ಕೆ ಗಡುವನ್ನು ನೀಡಿ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಪ್ರಕರಣ ಆರಂಭವಾದದ್ದು ಮುಖ್ಯಮಂತ್ರಿ ಪತ್ರಿಕಾಗೋಷ್ಠಿ ನಡೆಸಿದರಲ್ಲ, ಅಲ್ಲಿಂದಲ್ಲ. ಬದಲಾಗಿ, ಶರಣಗೌಡನನ್ನು ಕರೆದು ಮಾತುಕತೆ ನಡೆಸಲಾಯಿತಲ್ಲ ಅಲ್ಲಿಂದಲೇ ಈ ಪ್ರಕರಣ ಆರಂಭವಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಐಪಿಸಿಯಡಿಯಲ್ಲಿ ಈ ಪ್ರಕರಣ ಬರುತ್ತದೆ ಎಂದು ಅವರು ಹೇಳಿದರು.

ಇಂತಹ ವಿಷಯ ಒಬ್ಬ ಮುಖ್ಯಮಂತ್ರಿಯ ಗಮನಕ್ಕೆ ಬಂದಾಗ ಸುಮ್ಮನೆ ಕೂರುವುದು ಅಪರಾಧವಾಗುತ್ತದೆ. ನ್ಯಾಯಾಂಗ ಸಮಿತಿ ಹಾಗೂ ಸದನ ಸಮಿತಿಯು ಸತ್ಯಶೋಧನೆಯನ್ನು ನೀಡಲು ಮಾತ್ರ ಸಾಧ್ಯ. ಪ್ರಾಸಿಕ್ಯೂಷನ್ ಮಾಡಲು ಅಧಿಕಾರವಿಲ್ಲ. ಎಸ್‌ಐಟಿಯಿಂದ ಕಾಲಮಿತಿಯಲ್ಲಿ ತನಿಖೆ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಈ ಪ್ರಕರಣವನ್ನು ಇಲ್ಲಿಗೆ ಬಿಟ್ಟುಬಿಡಿ, ನಮ್ಮಿಂದ ತಪ್ಪಾಗಿದೆ ಎಂದು ಕೆಲವರು ಹೇಳಿದ್ದಾರೆ. ಆದರೆ, ನೀವೆ(ಸ್ಪೀಕರ್) ಈಗ ಇದನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದರೂ ಅದು ಯಾರೂ ಒಪ್ಪುವುದಿಲ್ಲ. ಇಂತಹ ಗಂಭೀರವಾದ ವಿಷಯಗಳು ತಾರ್ಕಿಕ ಅಂತ್ಯ ಕಾಣಲೇಬೇಕು. ಸ್ಪೀಕರ್ ಸ್ಥಾನದ ಘನತೆಗೆ ಕುಂದು ಉಂಟಾಗಬಾರದು ಎಂದು ಸಿದ್ದರಾಮಯ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X