Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ 4 ಮಂಗಗಳ ಅಟಾಪ್ಸಿ

ಉಡುಪಿ ಜಿಲ್ಲೆಯಲ್ಲಿ 4 ಮಂಗಗಳ ಅಟಾಪ್ಸಿ

ವಾರ್ತಾಭಾರತಿವಾರ್ತಾಭಾರತಿ12 Feb 2019 10:05 PM IST
share
ಉಡುಪಿ ಜಿಲ್ಲೆಯಲ್ಲಿ 4 ಮಂಗಗಳ ಅಟಾಪ್ಸಿ

ಉಡುಪಿ, ಫೆ.12: ಜಿಲ್ಲೆಯ ವಿವಿಧೆಡೆಗಳಲ್ಲಿ ಮಂಗಳವಾರ ಒಟ್ಟು ಐದು ಮಂಗಗಳ ಕಳೇಬರ ಪತ್ತೆಯಾಗಿದ್ದು, ಇವುಗಳಲ್ಲಿ ನಾಲ್ಕು ಮಂಗಗಳ ಪೋಸ್ಟ್ ಮಾರ್ಟಂ ನಡೆಸಿ, ವಿಸೇರಾವನ್ನು ಮಣಿಪಾಲ ಮತ್ತು ಶಿವಮೊಗ್ಗಗಳ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಮಂಗನ ಕಾಯಿಲೆಯ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಬ್ರಹ್ಮಾವರ ಸಮುದಾಯ ಆಸ್ಪತ್ರೆ ವ್ಯಾಪ್ತಿಯ ಚಾಂತಾರು ಅಗ್ರಹಾರ, ಕರ್ಜೆ ಪಿಎಚ್‌ಸಿ ವ್ಯಾಪ್ತಿಯ ಕೆಂಜೂರು, ಕೊರ್ಗಿ ಪಿಎಚ್‌ಸಿ ವ್ಯಾಪ್ತಿಯ ಕಾಳಾವರ ಸಲ್ವಾಡಿ, ಅಜೆಕಾರಿನ ಮೂಡುಕುಡೂರು ಹಾಗೂ ಕೊಳಲಗಿರಿ ಪಿಎಚ್‌ಸಿಯ ಹಾವಂಜೆಗಳಲ್ಲಿ ಇಂದು ಮಂಗಗಳ ಕಳೇಬರಗಳು ಪತ್ತೆಯಾಗಿದ್ದು, ಇವುಗಳಲ್ಲಿ ಅಜೆಕಾರಿನ ಮಂಗವನ್ನು ಹೊರತು ಪಡಿಸಿ ಚಾಂತಾರು, ಕೆಂಜೂರು, ಕಾಳಾವರ ಸಲ್ವಾಡಿ ಹಾಗೂ ಹಾವಂಜೆಗಳಲ್ಲಿ ದೊರೆತ ಮಂಗಗಳ ಅಟಾಪ್ಸಿ ನಡೆಸಲಾಗಿದೆ ಎಂದವರು ತಿಳಿಸಿದರು.

ಈ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 57 ಮಂಗಗಳ ಅಟಾಪ್ಸಿ ನಡೆಸಲಾಗಿದ್ದು, 52ರ ವರದಿ ಬಂದಿವೆ. 12ರಲ್ಲಿ ಕೆಎಫ್‌ಡಿ ವೈರಸ್ ಪತ್ತೆಯಾದರೆ, ಉಳಿದ 40ರಲ್ಲಿ ಸೋಂಕು ಪತ್ತೆಯಾಗಿಲ್ಲ. ಇನ್ನು 5ರ ವರದಿ ಬರಬೇಕಾಗಿದೆ. ಕಳೆದ ಜ.19ರ ನಂತರ ಜಿಲ್ಲೆಯಲ್ಲಿ ಪತ್ತೆಯಾದ ಯಾವುದೇ ಮಂಗನ ದೇಹದಲ್ಲಿ ವೈರಸ್ ಸೋಂಕು ಪತ್ತೆಯಾಗಿಲ್ಲ ಎಂದು ಡಾ.ಭಟ್ ತಿಳಿಸಿದರು.

ಮಂದಾರ್ತಿಯಲ್ಲೂ ನಗೆಟೀವ್: ಇಂದು ಮಂದಾರ್ತಿ ಪರಿಸರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರ ರಕ್ತವನ್ನು ಶಂಕಿತ ಮಂಗನಕಾಯಿಲೆಗಾಗಿ ಪರೀಕ್ಷೆಗೊಳಪಡಿಸಿದ್ದು, ಇದರಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ 31 ಮಂದಿ ರೋಗಿಗಳ ರಕ್ತವನ್ನು ಶಂಕಿತ ಕೆಎಫ್‌ಡಿ ವೈರಸ್‌ಗಾಗಿ ಪರೀಕ್ಷೆಗೊಳಪಡಿಸಲಾಗಿದ್ದು, ಯಾವುದರಲ್ಲೂ ಸೋಂಕು ಕಂಡುಬಂದಿಲ್ಲ ಎಂದವರು ವಿವರಿಸಿದರು.

ಮಂಗಗಳಲ್ಲಿ ಸೋಂಕು ಪತ್ತೆಯಾಗಿರುವ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಮಂಗನಕಾಯಿಲೆ ತಡೆಗಟ್ಟಲು ನೀಡುವ ಡಿಎಂಸಿ ತೈಲ, ಔಷಧಿ ಹಾಗೂ ಇತರ ಅಗತ್ಯ ವಸ್ತುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಶೇಖರಿಸಿಡಲಾಗಿದೆ. ಇಲ್ಲಿ ಯಾವುದಕ್ಕೂ ಕೊರತೆಯಾಗದಂತೆ ನೋಡಿ ಕೊಳ್ಳಲಾಗಿದೆ ಎಂದು ಡಾ.ಪ್ರಶಾಂತ್ ಭಟ್ ತಿಳಿಸಿದರು.

ಮಂಗನ ಕಾಯಿಲೆಯ ಕುರಿತು ಗ್ರಾಮ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಕುಂದಾಪುರ ತಾಲೂಕಿನಾದ್ಯಂತ ಸಂಚರಿಸುತ್ತಿರುವ ಮೊಬೈಲ್ ಮೆಡಿಕಲ್ ಯುನಿಟ್ ಇಂದು ಕಿರುಮಂಜೇಶ್ವರ ಪರಿಸರದಲ್ಲಿ ಕೆಎಫ್‌ಡಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಿತು. ಬ್ರಹ್ಮಾವರದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ವಾರಂಬಳ್ಳಿ ಪಂಚಾಯತ್‌ನಲ್ಲಿ ವಿಶೇಷ ಗ್ರಾಮ ಸಭೆದಲ್ಲಿ ಮಂಗನ ಕಾಯಿಲೆ ಬಗ್ಗೆ ಮಾಹಿತಿಗಳನ್ನು ಗ್ರಾಮಸ್ಥರಿಗೆ ನೀಡಿದರು.

ಅದೇ ರೀತಿ ಹೆಗ್ಗುಂಜೆ ಗ್ರಾಪಂನಲ್ಲೂ ಇಂದು ವಿಶೇಷ ಹಗ್ರಾಮ ಸಭೆ ನಡೆಯಿತು. ಆರೋಗ್ಯ ಇಲಾಖೆಯು ಪಶು ವೈದ್ಯಕೀಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಗ್ರಾಪಂಗಳ ಸಹಕಾರದೊಂದಿಗೆ ಕಾಯಿಲೆ ಮನುಷ್ಯರಿಗೆ ಹರಡದಂತೆ ತಡೆಯುವಲ್ಲಿ ವಿಶೇಷ ಪ್ರಯತ್ನದಲ್ಲಿ ನಿರತವಾಗಿದ್ದು, ಈವರೆಗೆ ಇಲಾಖೆಯ ಪ್ರಯತ್ನ ಫಲ ನೀಡಿದೆ ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X