Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 100 ಕೋಟಿ ವಂಚನೆ ಆರೋಪ: ಮಾಜಿ ಶಾಸಕನ...

100 ಕೋಟಿ ವಂಚನೆ ಆರೋಪ: ಮಾಜಿ ಶಾಸಕನ ಪುತ್ರ ಸೇರಿ 8 ಮಂದಿಯ ಸೆರೆ

ವ್ಯವಹಾರಕ್ಕೆ ಬಿಎಸ್‌ವೈ ಕೊಠಡಿ ಬಳಸಿದ್ದ ಆರೋಪಿಗಳು ?

ವಾರ್ತಾಭಾರತಿವಾರ್ತಾಭಾರತಿ13 Feb 2019 9:13 PM IST
share
100 ಕೋಟಿ ವಂಚನೆ ಆರೋಪ: ಮಾಜಿ ಶಾಸಕನ ಪುತ್ರ ಸೇರಿ 8 ಮಂದಿಯ ಸೆರೆ

ಬೆಂಗಳೂರು, ಫೆ.13: ಗೋಡಂಬಿ ಬೆಳೆಗೆ 100 ಕೋಟಿ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ, ವಂಚಿಸಿರುವ ಪ್ರಕರಣ ಸಂಬಂಧ ಮಾಜಿ ಶಾಸಕನ ಪುತ್ರ ಸೇರಿದಂತೆ 8 ಜನರನ್ನು ಇಲ್ಲಿನ ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದು, ಆರೋಪಿಗಳು ಸಾಲದ ವ್ಯವಹಾರಕ್ಕಾಗಿ ವಿಧಾನಸೌಧದ ಒಂದನೇ ಮಹಡಿಯಲ್ಲಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಕೊಠಡಿಯನ್ನೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

1950ರಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕರಾಗಿದ್ದ ಪಳನಿಯಪ್ಪ ಎಂಬವರ ಪುತ್ರ ಪಿ.ಕಾರ್ತಿಕೇಯನ್(60), ಮಣಿಕಂಠ ವಾಸನ್(25), ಸುಮನ್(27), ಅಭಿಲಾಷ್(27), ಕಾರ್ತಿಕ್, ಪ್ರಭು, ಜಾನ್‌ಮೂನ್, ಹಾಗೂ ಸಗವರೂಪ್ ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲಾ ಮೂಲತಃ ತಮಿಳುನಾಡು ನಿವಾಸಿಗಳೆಂದು ಕೇಂದ್ರ ವಿಭಾಗದ ಡಿಸಿಪಿ ಡಿ.ದೇವರಾಜು ತಿಳಿಸಿದ್ದಾರೆ.

ಏನಿದು ಪ್ರಕರಣ: ರಮೇಶ್ ಎಂಬವರು ತಮ್ಮ ಗೋಂಡಬಿ ವ್ಯಾಪಾರಕ್ಕಾಗಿ 100 ಕೋಟಿಗಳ ಸಾಲ ಕೊಡಿಸಿ ಎಂದು ಇಳಮದಿ ಎಂಬಾಕೆಯನ್ನು ಸಂಪರ್ಕಿಸಿದ್ದಾರೆ. ಬಳಿಕ ಆಕೆ, ತಮಗೆ ಪರಿಚಯವಿರುವ ಸುಂದರಂ ಸೆಲ್ವಂ, ಅಜಯ್ ಮತ್ತು ಅವರ ತಂದೆ ಕೆ.ಕೆ.ಶೆಟ್ಟಿ ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸ್ಟಾಂಪ್ ಚಾರ್ಜ್‌ಗಾಗಿ ಸಾಲದ ಮೊತ್ತದ 1.12(ಶೇಕಡ)ನಷ್ಟು ಹಣವನ್ನು ನೀಡಬೇಕೆಂದು ಜ.2ರಂದು ವಿಧಾನಸೌಧದ ಒಂದನೇ ಮಹಡಿಯಲ್ಲಿ ಮಾತುಕತೆ ನಡೆಸಿ, ನಂತರ ಸಮೀಪದ ಓಬೇರಾಯ್ ಹೊಟೇಲ್‌ನಲ್ಲಿ ರಮೇಶ್‌ನಿಂದ 100 ರೂ. ಮೌಲ್ಯದ 5 ಸ್ಟಾಂಪ್ ಕಾಗದ, 20 ರೂಪಾಯಿ ಮೌಲ್ಯದ 5 ಸ್ಟಾಂಪ್ ಕಾಗದ ಪಡೆದು ಅದರ ಮೇಲೆ ಸಹಿ ಮಾಡಿಸಿದ್ದಾರೆ.

ಕೆಲ ಸಮಯದ ಬಳಿಕ, ಬ್ಯಾಂಕಿನ 5 ಚೆಕ್‌ಗಳನ್ನು 6 ಭಾವಚಿತ್ರಗಳ ಜೊತೆ 1.12 ಕೋಟಿ ರೂ. ಪಡೆದ ಆರೋಪಿಗಳು, ತಮಿಳುನಾಡಿಗೆ ಪರಾರಿಯಾಗಿದ್ದರು. ಈ ಸಂಬಂಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎಂದು ದೇವರಾಜ್ ವಿವರಿಸಿದರು.

ಈ ಸಂಬಂಧ ತನಿಖೆ ನಡೆಸಿದ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು, ಆರೋಪಿಗಳನ್ನು ಬಂಧಿಸಿ, 40 ಲಕ್ಷ ರೂ.ಗಳನ್ನು ವಾಪಸ್ಸು ಪಡೆದು, ರಮೇಶ್ ಅವರಿಗೆ ನೀಡಿದ್ದು, ಆರೋಪಿಗಳಿಂದ ಬಾಕಿ ಉಳಿದಿರುವ 72 ಲಕ್ಷ ರೂ.ಗಳನ್ನು ಜಪ್ತಿ ಮಾಡಬೇಕಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ವೈ ಕಚೇರಿ ದುರ್ಬಳಕೆ?

ಹಣದ ವ್ಯವಹಾರ ನಡೆಸಲು, ಆರೋಪಿಗಳು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರ ಕೊಠಡಿ ದುರ್ಬಳಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ವ್ಯವಹಾರದ ದಿನ ವಿಧಾನಸೌಧ ಪ್ರವೇಶಿಸಿದ ಮಾಜಿ ಶಾಸಕನ ಪುತ್ರ ಪಿ.ಕಾರ್ತಿಕೇಯನ್ ಸೇರಿ ಇತರರು, ಖಾಲಿ ಕೊಠಡಿಯೊಂದರಲ್ಲಿ ಕುಳಿತು ಸಚಿವರಂತೆ ವೇಷ ಧರಿಸಿದ್ದಾರೆ. ಅಷ್ಟೇ ಅಲ್ಲದೆ, ವಿಧಾನಸೌಧ ಸಿಬ್ಬಂದಿಯನ್ನು ಪರಿಚಯ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತನಿಖೆಯಲ್ಲಿ ಗೊತ್ತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X