Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸದನದಲ್ಲಿ ಪ್ರಧಾನಿ ಮೋದಿ ಅಂತಿಮ ಭಾಷಣ:...

ಸದನದಲ್ಲಿ ಪ್ರಧಾನಿ ಮೋದಿ ಅಂತಿಮ ಭಾಷಣ: ರಾಹುಲ್ ವಿರುದ್ಧ ಟೀಕಾಪ್ರಹಾರ

ವಾರ್ತಾಭಾರತಿವಾರ್ತಾಭಾರತಿ13 Feb 2019 9:19 PM IST
share
ಸದನದಲ್ಲಿ ಪ್ರಧಾನಿ ಮೋದಿ ಅಂತಿಮ ಭಾಷಣ: ರಾಹುಲ್ ವಿರುದ್ಧ ಟೀಕಾಪ್ರಹಾರ

ಹೊಸದಿಲ್ಲಿ,ಫೆ.13: 2019ರ ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಬುಧವಾರ ಲೋಕಸಭೆಯಲ್ಲಿ ತನ್ನ ಅಂತಿಮ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕಟುವಾಗಿ ಟೀಕಿಸಿದರು. ಸಂಸತ್ತಿನ ಬಜೆಟ್ ಅಧಿವೇಶನ ಇಂದು ಅಂತ್ಯಗೊಂಡಿದ್ದು,ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ತನಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿದರೆ ‘ಭೂಕಂಪ’ ಸಂಭವಿಸುತ್ತದೆ ಎಂಬ ರಾಹುಲ್ ಅವರ 2016ರ ಹೇಳಿಕೆಯನ್ನು ವ್ಯಂಗ್ಯವಾಡಿದ ಮೋದಿ,ಕಳೆದ ಐದು ವರ್ಷಗಳಲ್ಲಿ ಭೂಕಂಪ ಸಂಭವಿಸಿಲ್ಲ ಎಂದು ಹೇಳಿದರು. ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದಲ್ಲಿ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಪ್ರಸ್ತಾಪಿಸಿದ ಅವರು,ದೊಡ್ಡ ವ್ಯಕ್ತಿಗಳು ವಿಮಾನವನ್ನು ಹಾರಿಸಲು ಪ್ರಯತ್ನಿಸಿದ್ದರು. ಆದರೆ ಪ್ರಜಾಪ್ರಭುತ್ವದ ಶಕ್ತಿ ಹೇಗಿದೆಯೆಂದರೆ ಈ ಸರಕಾರವನ್ನು ಪದಚ್ಯುತಗೊಳಿಸಲು ಯಾವುದೇ ವಿಮಾನಕ್ಕೆ ಸಾಧ್ಯವಾಗಲಿಲ್ಲ ಎಂದು ಛೇಡಿಸಿದರು.

ಸಂಸತ್ತಿನಲ್ಲಿ ತನ್ನನ್ನು ಅಪ್ಪಿಕೊಂಡಿದ್ದಕ್ಕಾಗಿಯೂ ರಾಹುಲ್ ವಿರುದ್ಧ ಮೋದಿ ಟೀಕಾಪ್ರಹಾರ ನಡೆಸಿದರು. ಕಳೆದ ವರ್ಷದ ಜುಲೈನಲ್ಲಿ ತನ್ನ ಉಗ್ರ ಭಾಷಣಕ್ಕೆ ಆಡಳಿತ ಪಕ್ಷವು ಅಡ್ಡಿಪಡಿಸುತ್ತಿದ್ದಾಗ ಬಿಜೆಪಿಯ ಬಗ್ಗೆ ತನಗೆ ಯಾವುದೇ ದ್ವೇಷವಿಲ್ಲ ಎಂದು ಘೋಷಿಸಿದ್ದ ರಾಹುಲ್ ಮೋದಿಯವರಿದ್ದಲ್ಲಿಗೆ ತೆರಳಿ ಅವರು ತನ್ನ ಆಸನದಲ್ಲಿ ಕುಳಿತಿದ್ದಂತೆಯೇ ಅವರನ್ನು ಅಪ್ಪಿಕೊಂಡಿದ್ದರು. ದಿಗ್ಭ್ರಮೆಗೊಂಡಿದ್ದ ಮೋದಿ ಬಳಿಕ ಚೇತರಿಸಿಕೊಂಡು ರಾಹುಲ್‌ಗೆ ಹಸ್ತಲಾಘವ ನೀಡಿದ್ದರು. ತನ್ನ ಆಸನಕ್ಕೆ ಮರಳಿದ್ದ ರಾಹುಲ್ ತನ್ನ ಪಕ್ಷ ಸಹೋದ್ಯೋಗಿಯತ್ತ ಮುಗುಳ್ನಗು ಬೀರುತ್ತ ಕಣ್ಣು ಮಿಟುಕಿಸಿದ್ದರು.

ಮೊದಲ ಬಾರಿಗೆ ಲೋಕಸಭೆಯ ಸದಸ್ಯನಾಗಿ ಈ ಅನುಭವ ತನಗೆ ಹೊಸದಾಗಿತ್ತು ಎಂದು ಹೇಳಿದ ಮೋದಿ,ಅಪ್ಪಿಕೊಳ್ಳುವುದಕ್ಕೂ ಬಲವಂತದಿಂದ ಅಪ್ಪಿಕೊಳ್ಳುವುದಕ್ಕೂ ವ್ಯತ್ಯಾಸವಿದೆ ಎಂದರು.

ಬಹುಮತದ ಸರಕಾರಕ್ಕೆ ಒತ್ತು ನೀಡಿದ ಅವರು,ತನ್ನ ಸರಕಾರವು ಬಹುಮತವನ್ನು ಹೊಂದಿದ್ದರಿಂದ ಜಾಗತಿಕವಾಗಿ ಭಾರತದ ವರ್ಚಸ್ಸು ಉತ್ತಮಗೊಂಡಿತ್ತು. ಸುದೀರ್ಘ ಕಾಲ ಮತದಾರರ ಅಸ್ಪಷ್ಟ ತೀರ್ಪುಗಳಿಂದಾಗಿ ಭಾರತವು ಜಾಗತಿಕವಾಗಿ ಹಿನ್ನಡೆ ಅನುಭವಿಸಿತ್ತು. ಬಹುಮತದ ಸರಕಾರದಿಂದಾಗಿ ಇಡೀ ಜಗತ್ತು ಅದನ್ನೀಗ ಗಂಭೀರವಾಗಿ ಪರಿಗಣಿಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X