Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಮಿತ್ ಭಂಡಾರಿಗೆ ಹಲ್ಲೆ: ಕಳಂಕಿತ...

ಅಮಿತ್ ಭಂಡಾರಿಗೆ ಹಲ್ಲೆ: ಕಳಂಕಿತ ಕ್ರಿಕೆಟಿಗ ಅನುಜ್‌ಗೆ ಆಜೀವ ನಿಷೇಧ

ವಾರ್ತಾಭಾರತಿವಾರ್ತಾಭಾರತಿ13 Feb 2019 11:21 PM IST
share
ಅಮಿತ್ ಭಂಡಾರಿಗೆ ಹಲ್ಲೆ: ಕಳಂಕಿತ ಕ್ರಿಕೆಟಿಗ ಅನುಜ್‌ಗೆ ಆಜೀವ ನಿಷೇಧ

ಹೊಸದಿಲ್ಲಿ, ಫೆ.13: ಭಾರತದ ಮಾಜಿ ವೇಗದ ಬೌಲರ್ ಹಾಗೂ ದಿಲ್ಲಿ ಕ್ರಿಕೆಟ್ ಆಯ್ಕೆ ಸಮಿತಿ ಅಧ್ಯಕ್ಷ ಅಮಿತ್ ಭಂಡಾರಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಕಳಂಕಿತ ಕ್ರಿಕೆಟಿಗ ಅನುಜ್ ದೆಧಾಗೆ ದಿಲ್ಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಬುಧವಾರ ಆಜೀವ ನಿಷೇಧ ಹೇರಿದೆ.

23 ವರ್ಷದೊಳಗಿನವರ ರಾಜ್ಯ ತಂಡದಲ್ಲಿ ತನ್ನನ್ನು ತಿರಸ್ಕರಿಸಿದ ಕೋಪದಲ್ಲಿ ಅನುಜ್ ಗೂಂಡಾಗಳ ಜೊತೆಗೂಡಿ ಅಂಡರ್-23 ಆಯ್ಕೆ ಸಮಿತಿ ಅಧ್ಯಕ್ಷ ಭಂಡಾರಿ ಮೇಲೆ ಸೋಮವಾರ ಹಾಕಿ ಸ್ಟಿಕ್ಸ್, ಕಬ್ಬಿಣದ ರಾಡ್ ಹಾಗೂ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದರು. ಹಣೆ, ಕಿವಿ ಹಾಗೂ ಕಾಲಿನ ಭಾಗದಲ್ಲಿ ಗಾಯವಾಗಿದ್ದ ಭಂಡಾರಿಯವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ದಿಲ್ಲಿ ಪೊಲೀಸರು ತಕ್ಷಣವೇ ಅನುಜ್‌ನನ್ನು ಬಂಧಿಸಿದ್ದು, ಆತ ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದಾನೆ.

ಡಿಡಿಸಿಎ ಅಧ್ಯಕ್ಷ ರಜತ್ ಶರ್ಮಾ ಹಾಗೂ ಆಯ್ಕೆಗಾರರು ಭಾಗವಹಿಸಿದ್ದ ಸಭೆಯಲ್ಲಿ ದಿಲ್ಲಿಯ ಮಾಜಿ ನಾಯಕ ಹಾಗೂ ಡಿಡಿಸಿಎ ಅಪೆಕ್ಸ್ ಕೌನ್ಸಿಲ್ ಸದಸ್ಯ ಗೌತಮ್ ಗಂಭೀರ್, ಅನುಜ್‌ಗೆಆಜೀವ ನಿಷೇಧ ಹೇರುವಂತೆ ಶಿಫಾರಸು ಮಾಡಿದರು.

ಆಯ್ಕೆಗಾರರು ಹಾಗೂ ಗಂಭೀರ್ ಭಾಗವಹಿಸಿದ್ದ ಸಭೆಯಲ್ಲಿ ಅನುಜ್ ದೆಧಾಗೆ ಆಜೀವ ನಿಷೇಧ ಹೇರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಾಮಾನ್ಯ ಮಂಡಳಿ ಸಭೆಯಲ್ಲಿ ಶಿಫಾರಸಿಗೆ ಅನುಮೋದನೆ ಪಡೆಯಲಿದ್ದೇವೆ. ಇನ್ನು ಮುಂದಕ್ಕೆ ಅನುಜ್ ಯಾವುದೇ ಕ್ಲಬ್ ಪಂದ್ಯ ಅಥವಾ ಡಿಡಿಸಿಎಯಿಂದ ಆಯೋಜಿಸಲ್ಪಡುವ ಯಾವುದೇ ಟೂರ್ನಮೆಂಟ್‌ಗಳಲ್ಲಿ ಭಾಗವಹಿಸುವಂತಿಲ್ಲ’’ ಎಂದು ಶರ್ಮಾ ತಿಳಿಸಿದ್ದಾರೆ.

‘‘ಅನುಜ್‌ಗೆ ಆಜೀವ ನಿಷೇಧ ಹೇರುವ ವಿಚಾರ ಗೌತಮ್ ಅವರ ಯೋಚನೆಯಾಗಿತ್ತು. ಇನ್ನು ಮುಂದೆ ಟ್ರಯಲ್ಸ್ ನಡೆಯುವಾಗ ಆಟಗಾರರ ಹೆತ್ತವರು, ಸಂಬಂಧಿಕರು ಅಥವಾ ಸ್ನೇಹಿತರಿಗೆ ವೀಕ್ಷಿಸಲು ಅವಕಾಶ ನೀಡುವುದಿಲ್ಲ. ಅಂಡರ್-14 ಅಥವಾ ಅಂಡರ್-16 ಆಟಗಾರರಿಗೆ ಮಾತ್ರ ಸ್ಟೇಡಿಯಂ ಆವರಣದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು’’ ಎಂದು ಶರ್ಮಾ ತಿಳಿಸಿದ್ದಾರೆ.

ಅನುಜ್ ಸಹಿತ 50ಕ್ಕೂ ಅಧಿಕ ದಿಲ್ಲಿ ಆಟಗಾರರು ರಾಷ್ಟ್ರೀಯ ಅಂಡರ್-23 ಏಕದಿನ ಕೂಟದಲ್ಲಿ ಭಾಗವಹಿಸಿದ್ದರು. ಆದರೆ, ತಂಡದಲ್ಲಿ ಸ್ಥಾನ ಪಡೆಯದೇ ಇರುವುದಕ್ಕೆ ಅನುಜ್‌ಗೆ ನೋವಾಗಿತ್ತು.

‘‘ಅನುಜ್‌ಟ್ರಯಲ್‌ಪಂದ್ಯದಲ್ಲಿಎರಡುವಿಕೆಟ್‌ಪಡೆದಿದ್ದ. ಅನುಜ್‌ಅವರುಮನ್ಜೋತ್‌ಕಾಲ್ರಾ(ಅಂಡರ್-19 ವಿಶ್ವಕಪ್‌ಸ್ಟಾರ್) ಹಾಗೂಜಾಂಟಿ ಸಿಧು(ಈಗಿನರಣಜಿ ಆಟಗಾರ)ವಿಕೆಟ್‌ಕಬಳಿಸಿದ್ದರು. ಹಾಗಾಗಿ ಅವರನ್ನು50 ಆಟಗಾರರಸಂಭಾವ್ಯಪಟ್ಟಿಯಲ್ಲಿಸೇರಿಸಲಾಗಿತ್ತು. ಅಂತಿಮ-15ರಲ್ಲಿಆಯ್ಕೆಯಾಗುವಬಗ್ಗೆ ಎಲ್ಲಮೂವರುಆಯ್ಕೆಗಾರರುಅನುಜ್‌ಗೆ

ಯಾವುದೇಭರವಸೆನೀಡಿರಲಿಲ್ಲ’’ ಎಂದುಡಿಡಿಸಿಎ ಅಧ್ಯಕ್ಷಶರ್ಮಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X