Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಜೀತಪದ್ದತಿಗೆ ಸಿಲುಕಿದವರ ಪೈಕಿ...

ದೇಶದಲ್ಲಿ ಜೀತಪದ್ದತಿಗೆ ಸಿಲುಕಿದವರ ಪೈಕಿ ಶೇ.95ರಷ್ಟು ಪರಿಶಿಷ್ಟರು: ಐಜೆಎಂ ಸಂಸ್ಥೆ ಸಂಚಾಲಕ ಕ್ರಿಸ್ಟೋಫರ್ ವಿಲಿಯಮ್

ವಾರ್ತಾಭಾರತಿವಾರ್ತಾಭಾರತಿ14 Feb 2019 8:28 PM IST
share
ದೇಶದಲ್ಲಿ ಜೀತಪದ್ದತಿಗೆ ಸಿಲುಕಿದವರ ಪೈಕಿ ಶೇ.95ರಷ್ಟು ಪರಿಶಿಷ್ಟರು: ಐಜೆಎಂ ಸಂಸ್ಥೆ ಸಂಚಾಲಕ ಕ್ರಿಸ್ಟೋಫರ್ ವಿಲಿಯಮ್

ಚಿಕ್ಕಮಗಳೂರು, ಫೆ.14: ದೇಶದಲ್ಲಿ ಜೀತಪದ್ದತಿಯ ಸಂಕೋಲೆಗೆ ಸಿಲುಕಿದವರ ಪೈಕಿ ಶೇ.95ರಷ್ಟು ಕಾರ್ಮಿಕರು ಪರಿಶಿಷ್ಟರಾಗಿದ್ದು, ಬ್ರಾಹ್ಮಣ ಸಮುದಾಯದ ಒಂದೇ ಒಂದು ಪ್ರಕರಣ ವರದಿಯಾಗಿಲ್ಲ. ಆರ್ಥಿಕವಾಗಿ ಹಿಂದುಳಿದವರು, ಅನಕ್ಷರಸ್ಥರು ಇದಕ್ಕೆ ಗುರಿಯಾಗುತ್ತಿದ್ದಾರೆ ಎಂದು ಇಂಟರ್‌ನ್ಯಾಷನಲ್ ಜಸ್ಟೀಸ್ ಮಿಶನ್‌ನ ಸಂಚಾಲಕ ಕ್ರಿಸ್ಟೋಫರ್ ವಿಲಿಯಮ್ ತಿಳಿಸಿದ್ದಾರೆ.

ಗುರುವಾರ ನಗರದ ಜಿಪಂ ಕಚೇರಿಯ ನಝೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಇಂಟರ್ ನ್ಯಾಶನಲ್ ಜಸ್ಟೀಸ್ ಮಿಶನ್ ಸಂಸ್ಥೆಯ ಸಹಯೋಗದಲ್ಲಿ ಕಂದಾಯಾಧಿಕಾರಿಗಳು, ಗ್ರಾಪಂ ಪಿಡಿಒ, ಇಒಗಳಿಗೆ ಹಮ್ಮಿಕೊಳ್ಳಲಾಗಿದ್ದ ಜೀತ ಪದ್ದತಿ ನಿರ್ಮೂಲನಾ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಾರ್ಯಾಗಾರದಲ್ಲಿ ಜೀತದಾಳುಗಳ ವಿಡಿಯೋ ಸಂದರ್ಶನ, ಪವರ್ ಪಾಯಿಂಟ್ 1976ರ ಜೀತ ಪದ್ದತಿ ಕಾಯ್ದೆ, ಜೀತ ಪದ್ದತಿ ಸ್ವರೂಪ, ಪತ್ತೆ ಹಚ್ಚುವ ವಿಧಾನಗಳು, ಪುನರ್ವಸತಿ ಮತ್ತಿತರ ಕಾನೂನುಗಳ ಬಗ್ಗೆ ವಿವರಿಸಿದ ಕ್ರಿಸ್ಟೋಫರ್ ವಿಲಿಯಮ್, ವಿಶ್ವದಾದ್ಯಂತ 47 ಮಿಲಿಯನ್ ಜೀತದಾಳುಗಳಿದ್ದು, ಭಾರತ ದೇಶದಲ್ಲಿ ಇದುವರೆಗೂ 1.84 ಕೋಟಿ ಜೀತದಾಳುಗಳನ್ನು ಇದುವರೆಗೂ ಪುನರ್ವಸತಿ ಮಾಡಲಾಗಿದೆ ಎಂದ ಅವರು, ಐಜೆಎಂ ಸಂಸ್ಥೆ ವಿಶ್ವದ ಎಲ್ಲ ದೇಶಗಳಲ್ಲಿ ಜೀತ ಕಾರ್ಮಿಕರ ಪುನರ್ವಸತಿಗೆ ಶ್ರಮಿಸುತ್ತಿದ್ದು, ದೇಶದಲ್ಲೂ ಸರಕಾರಗಳ ಸಹಕಾರದೊಂದಿಗೆ ಜೀತ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶ್ರಮಿಸುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ವಿವರಿಸಿದರು.

ಕಾರ್ಯಾಗಾರದಲ್ಲಿ ಪ್ರಾತ್ಯಕ್ಷಿಕೆ, ವಿಡಿಯೋ ಪ್ರದರ್ಶನ, ಸಂವಾದ, ಪ್ರಶ್ನಾವಳಿಗಳ ಮೂಲಕ ಸಂಪನ್ಮೂಲ ವ್ಯಕ್ತಿ, ಅಧಿಕಾರಿಗಳಿಗೆ ಜೀತ ಪದ್ದತಿ ಬಗ್ಗೆ ತರಬೇತಿ ನೀಡಿದರು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಜೀತ ಪದ್ದತಿ ದೇಶದಲ್ಲಿರುವ ಅಮಾನವೀಯ ಪದ್ದತಿಯಾಗಿದೆ. ಈ ಸಾಮಾಜಿಕ ಪಿಡುಗನ್ನು ಬುಡಸಹಿತ ಕೀಳಲು ಸರಕಾರಗಳು ಕಠಿಣ ಕಾನೂನುಗಳನ್ನು ಜಾರಿಗೆ ತಂದಿವೆ. ಆದರೆ ಈ ಪಿಡುಗು ದೇಶದಾದ್ಯಂತ ಇನ್ನೂ ಜೀವಂತವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಜೀತ ಪದ್ದತಿಯ ನಿರ್ಮೂಲನೆ ಮಾಡುವ ನಿಟ್ಟನಲ್ಲಿ ಅಧಿಕಾರಿಗಳು, ಸಾರ್ವಜನಿಕರ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಉಪಕಾರ್ಯದರ್ಶಿ ರಾಜಗೋಪಾಲ್, ಪ್ರಾದೇಶಿಕ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ಜಾನ್‌ಸನ್ ಉಪಸ್ಥಿತರಿದ್ದರು. ಚಿಕ್ಕಮಗಳೂರು, ಕಡೂರು, ತರೀಕೆರೆ, ಕೊಪ್ಪ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ಕಂದಾಯ ಇಲಾಖೆಯ ಅಧಿಕಾರಿಗಳು, ವಿವಿಧ ಗ್ರಾಪಂ ಪಿಡಿಒಗಳು, ಇಒಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲೆಯಲ್ಲಿ ಈ ಪದ್ದತಿ ಇಲ್ಲ ಎನ್ನಲಾಗುತ್ತಿದೆ. ಆದರೆ ಈ ಸಂಬಂಧ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಕಂದಾಯಾಧಿಕಾರಿಗಳಿಗೆ, ಪಿಡಿಒಗಳಿಗೆ ಹಾಗೂ ಇಒಗಳಿಗೆ ಸಾಕಷ್ಟು ಬಾರಿ ಜಿಲ್ಲಾಡಳಿತ ಆದೇಶಿಸಿದೆ. ಆದರೆ ಇತ್ತೀಚೆಗೆ ಕೆಲವೇ ಕೆಲವು ಅಧಿಕಾರಿಗಳು ಸಮೀಕ್ಷಾ ವರದಿ ನೀಡಿರುವುದನ್ನು ಹೊರತು ಪಡಿಸಿ ಉಳಿದ ಅಧಿಕಾರಿಗಳು ಈ ಬಗ್ಗೆ ತತ್ಸಾರ ಮನೋಭಾವನೆ ತೋರಿರುವುದು ಅತ್ಯಂತ ನಾಚಿಗೇಡಿನ ಸಂಗತಿಯಾಗಿದೆ. ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಗಂಭೀರ ಪಿಡುಗಿನ ಬಗ್ಗೆ ಅಧಿಕಾರಿಗಳಲ್ಲಿ ಬದ್ಧತೆ ಪ್ರದರ್ಶಿಸದಿರುವುದು, ತಲೆಕೆಡಿಸಿಕೊಳ್ಳದಿರುವುದು ಬೇಸರದ ಸಂಗತಿ.

ಶಿವಕುಮಾರ್, ಅಪರ ಜಿಲ್ಲಾಧಿಕಾರಿ

"ಜೀತಪದ್ದತಿ ಗುಟ್ಟಾಗಿ ನಡೆಯುವ ಅಪರಾಧ ಕೃತ್ಯ"

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೀತ ಕಾರ್ಮಿಕರಿಲ್ಲ ಎಂದು ಅಧಿಕಾರಿಗಳು ನೀಡಿದ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ ಎಂಬುದನ್ನು ಜಿಲ್ಲಾಡಳಿತವೇ ಹೇಳುತ್ತಿದೆ. ಇದಕ್ಕೆ ಕಾರಣ ಜೀತಪದ್ದತಿ, ಅದರ ಸ್ವರೂಪ, ಕಾಯ್ದೆ, ಕಾನೂನುಗಳ ಬಗ್ಗೆ ಸಮರ್ಪಕ ಅರಿವಿಲ್ಲದಿರುವುದಾಗಿದೆ. ಜೀತಪದ್ದತಿ ಗುಟ್ಟಾಗಿ ನಡೆಯುವ ಅಪರಾಧ ಕೃತ್ಯವಾಗಿರುವುದರಿಂದ ಇದರ ಬಗ್ಗೆ ಅಧಿಕಾರಿಗಳಿಗೆ ಸಂಪೂರ್ಣ ಅರಿವು ಅಗತ್ಯ ಎಂದು ಐಜೆಎಂ ಸಂಸ್ಥೆ ಸಂಚಾಲಕ ಕ್ರಿಸ್ಟೋಫರ್ ವಿಲಿಯಮ್ ಹೇಳಿದರು.

ಅಸಂಘಟಿತ ಕಾರ್ಮಿಕರಿಗೆ ಸರಕಾರ ಕನಿಷ್ಠ ವೇತನ ನಿಗದಿ ಮಾಡಿದ್ದು, ಈ ವೇತನಕ್ಕಿಂತ ಕಡಿಮೆ ಕೂಲಿ ನೀಡಿ ದುಡಿಸಿಕೊಳ್ಳುವುದೂ ಜೀತಪದ್ದತಿಯಾಗಿದೆ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಪ್ರತೀ ಮೂರು ವರ್ಷಗಳಿಗೊಮ್ಮೆ ಜೀತ ಕಾರ್ಮಿಕರ ಸಮೀಕ್ಷೆ ನಡೆಯಬೇಕಿದೆ. ರಾಜ್ಯದಲ್ಲಿ 2012ರಲ್ಲಿ ಸಮೀಕ್ಷೆ ನಡೆದಿದ್ದು, ನಾಲ್ಕು ವರ್ಷಗಳ ಬಳಿಕ 2016ರಲ್ಲಿ ಸಮೀಕ್ಷೆ ನಡೆಯಿತು. ನಂತರ ಇದುವರೆಗೂ ಸಮೀಕ್ಷೆ ನಡೆದಿಲ್ಲ.

ಕ್ರಿಸ್ಟೋಫರ್ ವಿಲಿಯಮ್, ಐಜೆಎಂ ಸಂಸ್ಥೆ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X