Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಚಾರಕ್ಕಾಗಿ 3,044 ಕೋ.ರೂ.ವೆಚ್ಚ...

ಪ್ರಚಾರಕ್ಕಾಗಿ 3,044 ಕೋ.ರೂ.ವೆಚ್ಚ ಮಾಡಿದ ಕೇಂದ್ರ ಸರಕಾರ !

ವಾರ್ತಾಭಾರತಿವಾರ್ತಾಭಾರತಿ14 Feb 2019 8:35 PM IST
share
ಪ್ರಚಾರಕ್ಕಾಗಿ 3,044 ಕೋ.ರೂ.ವೆಚ್ಚ ಮಾಡಿದ ಕೇಂದ್ರ ಸರಕಾರ !

ಹೊಸದಿಲ್ಲಿ,ಫೆ.14: ಕೇಂದ್ರ ಸರಕಾರವು ಕಳೆದ ಐದು ವರ್ಷಗಳಲ್ಲಿ ತನ್ನ ಪ್ರಚಾರಕ್ಕಾಗಿ 3,044 ಕೋ.ರೂ.ಗಳನ್ನು ವೆಚ್ಚ ಮಾಡಿದ್ದು,ಈ ಪೈಕಿ 2,374 ಕೋ.ರೂ.ಗಳನ್ನು ವಿದ್ಯುನ್ಮಾನ ಮಾಧ್ಯಮಗಳು ಮತ್ತು 670 ಕೋ.ರೂ.ಗಳನ್ನು ಹೊರಾಂಗಣ ಪ್ರಚಾರಕ್ಕಾಗಿ ವ್ಯಯಿಸಲಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದ ಬ್ಯೂರೊ ಆಫ್ ಔಟ್‌ರೀಚ್ ಆ್ಯಂಡ ಕಮ್ಯುನಿಕೇಷನ್(ಬಿಒಸಿ) ಆರ್‌ಟಿಐ ಉತ್ತರದಲ್ಲಿ ತಿಳಿಸಿದೆ.

ಬಿಒಸಿಯ ಮೂಲಕ ವಿವಿಧ ಸಚಿವಾಲಯಗಳು,ಇಲಾಖೆಗಳು,ಸರಕಾರಿ ಸ್ವಾಮ್ಯದ ಉದ್ಯಮಗಳ ಪರವಾಗಿ ನೇಮಕಾತಿ ನೋಟಿಸ್‌ಗಳು, ಟೆಂಡರ್‌ಗಳು, ಇತರ ನೋಟಿಸ್‌ಗಳು ಮತ್ತು ವಿವಿಧ ಯೋಜನೆಗಳ ಜಾಹೀರಾತುಗಳಂತಹ ವಿವಿಧ ವರ್ಗಗಳಲ್ಲಿ ಪ್ರಚಾರಕ್ಕಾಗಿ ಆಕಾಶವಾಣಿ, ದೂರದರ್ಶನ, ಅಂತರ್ಜಾಲ, ರೇಡಿಯೊ, ಎಸ್‌ಎಂಎಸ್, ಥಿಯೇಟರ್, ಟಿವಿ ಇತ್ಯಾದಿ ವಿದ್ಯುನ್ಮಾನ ಮಾಧ್ಯಮಗಳಿಗಾಗಿ 2014 ಎಪ್ರಿಲ್‌ನಿಂದ ಡಿಸೆಂಬರ್ 2018ರ ನಡುವಿನ ಅವಧಿಯಲ್ಲಿ 2,374.46 ಕೋ.ರೂ.ಗಳನ್ನು ವ್ಯಯಿಸಲಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಸುಮಾರು 670 ಕೋ.ರೂ.ಗಳನ್ನು 2014 ಮತ್ತು ನ.26,2018ರ ನಡುವಿನ ಅವಧಿಯಲ್ಲಿ ಹೊರಾಂಗಣ ಪ್ರಚಾರಕ್ಕಾಗಿ ವ್ಯಯಿಸಲಾಗಿದೆ ಎಂದು ಅದು ತಿಳಿಸಿದೆಯಾದರೂ,ಹೊರಾಂಗಣ ಪ್ರಚಾರವು ಏನೇನೆಲ್ಲವನ್ನು ಒಳಗೊಂಡಿತ್ತು ಎಂಬ ವಿವರಗಳನ್ನು ನೀಡಿಲ್ಲ.

ಮುದ್ರಣ,ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿರುವ ವೆಚ್ಚ ಸೇರಿದಂತೆ 2014,ಜೂ.1ರಿಂದ ಕೇಂದ್ರ ಸರಕಾರದ ಪ್ರಚಾರಕ್ಕೆ ಸಂಬಂಧಿಸಿದಂತೆ ಎಲ್ಲ ಜಾಹೀರಾತುಗಳಿಗಾಗಿ ವ್ಯಯಿಸಲಾಗಿರುವ ಹಣದ ವಿವರಗಳನ್ನು ನೀಡುವಂತೆ ಆರ್‌ ಟಿಐ ಅರ್ಜಿದಾರರಾದ ಅಧಿಕಾರಿ ಸಂಜೀವ ಚತುರ್ವೇದಿ ಅವರು ಕೋರಿದ್ದರು.

ವಿದ್ಯುನ್ಮಾನ ಮಾಧ್ಯಮಗಳಲ್ಲಿ ಮತ್ತು ಹೊರಾಂಗಣ ಪ್ರಚಾರಕ್ಕಾಗಿ ವ್ಯಯಿಸಲಾಗಿರುವ ಮೊತ್ತದ ವಿವರಗಳನ್ನು ಬಿಒಸಿ ಒದಗಿಸಿದೆಯಾದರೂ,2014ರಿಂದ ವೃತ್ತಪತ್ರಿಕೆಗಳಿಗೆ ಪಾವತಿಸಿರುವ ಮೊತ್ತವನ್ನು ಒಳಗೊಂಡ ಸಿಡಿಯನ್ನು ಮಾತ್ರ ನೀಡಿದೆ. ವರ್ಷವಾರು ಅಥವಾ ಕಳೆದ ಐದು ವರ್ಷಗಳ ನಿಖರವಾದ ಒಟ್ಟು ಮೊತ್ತಗಳನ್ನು ಅದು ಉಲ್ಲೇಖಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X