Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರ್ಷದಲ್ಲಿ ನಾಲ್ಕೇ ದಿನ ಕಾಣಿಸಿಕೊಳ್ಳುವ...

ವರ್ಷದಲ್ಲಿ ನಾಲ್ಕೇ ದಿನ ಕಾಣಿಸಿಕೊಳ್ಳುವ ನಿಗೂಢ ತಳಿಯ ಕಪ್ಪೆ ಪತ್ತೆ!

ಇದರ ವಿಶೇಷತೆಗಳು ಏನೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ14 Feb 2019 9:29 PM IST
share
ವರ್ಷದಲ್ಲಿ ನಾಲ್ಕೇ ದಿನ ಕಾಣಿಸಿಕೊಳ್ಳುವ ನಿಗೂಢ ತಳಿಯ ಕಪ್ಪೆ ಪತ್ತೆ!

ಹೊಸದಿಲ್ಲಿ, ಫೆ.14: ಸಣ್ಣ ಬಾಯಿಯ ಕಪ್ಪೆಯ ಹೊಸ ತಳಿಯೊಂದನ್ನು ದಿಲ್ಲಿ ವಿವಿಯ ಸಂಶೋಧಕರು ಕೇರಳದ ರಸ್ತೆ ಬದಿಯ ಕೊಚ್ಚೆಗುಂಡಿಯಲ್ಲಿ ಪತ್ತೆಹಚ್ಚಿದ್ದಾರೆ ಎಂದು ವರದಿಯಾಗಿದೆ.

ಪಿಎಚ್‌ಡಿ ವಿದ್ಯಾರ್ಥಿನಿ ಸೊನಾಲಿ ಗಾರ್ಗ್ ಮತ್ತು ಸಂಶೋಧನಾ ಮೇಲ್ವಿಚಾರಕ ಪ್ರೊಫೆಸರ್ ಎಸ್‌ಡಿ ಬಿಜು ಈ ಹೊಸ ವರ್ಗದ ಕಪ್ಪೆಯನ್ನು ಕಂಡುಹಿಡಿದಿದ್ದು ಇದಕ್ಕೆ ‘ಮಿಸ್ಟಿಸೆಲ್ಲಸ್’ (ನಿಗೂಢ ಮತ್ತು ಅತ್ಯಂತ ಸಣ್ಣದು) ಎಂದು ನಾಮಕರಣ ಮಾಡಿದ್ದಾರೆ.

‘ನೇಚರ್ ಜರ್ನಲ್ ಸೈಂಟಿಫಿಕ್ ರಿಪೋರ್ಟ್ಸ್’ನ ಫೆಬ್ರವರಿ ಆವೃತ್ತಿಯಲ್ಲಿ ಈ ಕುರಿತ ವರದಿ ಪ್ರಕಟವಾಗಿದೆ. ಮೂರು ವರ್ಷಗಳ ಕ್ಷೇತ್ರ ಕಾರ್ಯ ಮತ್ತು ಪ್ರಯೋಗಾಲಯದ ಅಧ್ಯಯನದ ಬಳಿಕ ಸಂಶೋಧಕರು ಈ ಹೊಸ ತಳಿಯ ಕಪ್ಪೆಗಳನ್ನು ಪತ್ತೆಹಚ್ಚಿದ್ದಾರೆ. ಜಾಗತಿಕ ಮನ್ನಣೆ ಪಡೆದಿರುವ ಜೀವವೈವಿಧ್ಯತೆಯ ಪ್ರದೇಶವಾಗಿರುವ, ಅತ್ಯಧಿಕ ಸಂಶೋಧನಾ ಕಾರ್ಯ ನಡೆಯುತ್ತಿರುವ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಉಭಯಚರ (ಭೂಮಿ ಮತ್ತು ನೀರಿನಲ್ಲಿ ಬದುಕಬಲ್ಲ) ಜೀವಿಗಳ ದಾಖಲೀಕರಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ ಎಂಬುದನ್ನು ಇದು ಸೂಚಿಸುತ್ತದೆ ಎಂದು ವರದಿ ತಿಳಿಸಿದೆ.

ಈ ಕಪ್ಪೆಯ ವಿಶೇಷವೆಂದರೆ ಸಂತಾನೋತ್ಪತ್ತಿಯ ಸಂದರ್ಭ ನಾಲ್ಕು ದಿನ ಕಾಣಿಸಿಕೊಳ್ಳುವುದನ್ನು ಹೊರತುಪಡಿಸಿ ವರ್ಷವಿಡೀ ಇದು ನಿಗೂಢವಾಗಿಯೇ ಬದುಕುತ್ತದೆ. ಈ ಕಪ್ಪೆಯ ಬೆನ್ನಿನ ಕೆಳಭಾಗದಲ್ಲಿ ಎರಡು ಕಣ್ಣಿನಂತಹ ರಚನೆಯಿದೆ. ಮಿಲನದ ಸಂದರ್ಭದಲ್ಲಿ ಪುರುಷ ಕಪ್ಪೆಗಳು ದೇಹದ ಹಿಂಭಾಗವನ್ನು ಮೇಲೆತ್ತಿ ಈ ಕಣ್ಣಿನಂತಹ ರಚನೆಯನ್ನು ಪ್ರದರ್ಶಿಸುತ್ತವೆ. ಅಲ್ಲದೆ ಅಪಾಯ ಎದುರಾದಾಗಲೂ ಇದೇ ರೀತಿಯ ವರ್ತನೆಯನ್ನು ತೋರುತ್ತವೆ . ಈ ತಳಿಯ ಕಪ್ಪೆಗಳು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಾತ್ರ ಕಾಣಿಸುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಪ್ರಾಣಿಗಳ ಸಹಜ ವಾಸಸ್ಥಾನಗಳ ನಾಶ ಮತ್ತು ಇತರ ಕಾರಣಗಳಿಂದ ಭಾರತೀಯ ಉಭಯಚರಗಳ ಸಂತತಿ ಹಲವು ಅಪಾಯಗಳನ್ನು ಎದುರಿಸುತ್ತಿದೆ. ಹೊಸ ತಳಿಯ ಕಪ್ಪೆಯು ಕೂಡಾ ರಸ್ತೆ ಬದಿಯ ಕೊಚ್ಚೆಯಲ್ಲಿ, ವಾಹನಗಳ ಸಂಚಾರದ ಸದ್ದು, ನೆಡುತೋಪುಗಳು, ಮಾನವನ ಚಟುವಟಿಕೆಯ ಮಧ್ಯೆ ಕಂಡುಬಂದಿದ್ದು ಈ ಕಪ್ಪೆಗಳನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಗಾರ್ಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X