Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಟ ಜೋಡಿ ಕೊಲೆ ಪ್ರಕರಣ: ರೆಡ್ಡಿ ಸಹೋದರ...

ಕೋಟ ಜೋಡಿ ಕೊಲೆ ಪ್ರಕರಣ: ರೆಡ್ಡಿ ಸಹೋದರ ಸಹಿತ ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ14 Feb 2019 9:33 PM IST
share
ಕೋಟ ಜೋಡಿ ಕೊಲೆ ಪ್ರಕರಣ: ರೆಡ್ಡಿ ಸಹೋದರ ಸಹಿತ ಇಬ್ಬರ ಬಂಧನ

ಉಡುಪಿ, ಫೆ.14: ಕೋಟ ಮಣೂರು ಗ್ರಾಮದ ಚಿಕ್ಕನಕೆರೆ ಯುವಕರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚಂದ್ರ ಶೇಖರ್ ರೆಡ್ಡಿ(48) ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮಣೂರು ಚಿಕ್ಕನಕೆರೆಯ ಚಂದ್ರಶೇಖರ್ ರೆಡ್ಡಿಯನ್ನು ಫೆ.14ರಂದು ಬಂಧಿಸಿದ್ದರೆ, ಇನ್ನೋರ್ವ ಆರೋಪಿ ಉಡುಪಿ ಬ್ರಹ್ಮಗಿರಿಯ ರತೀಶ್ ಎಂ.ಕರ್ಕೇರ(34) ಎಂಬಾತನನ್ನು ಫೆ.12 ರಂದು ಉಡುಪಿ ಸಿಟಿ ಆಸ್ಪತ್ರೆಯ ಬಳಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ತಿಳಿಸಿದ್ದಾರೆ.

ಪಿಕ್‌ಅಪ್ ವಾಹನ ಹೊಂದಿರುವ ಚಂದ್ರಶೇಖರ್ ರೆಡ್ಡಿ ಚಾಲಕ ವೃತ್ತಿ ಮಾಡುತ್ತಿದ್ದನು. ಈತ ರೆಡ್ಡಿ ಸಹೋದರರಲ್ಲಿ ಹಿರಿಯವನಾಗಿದ್ದಾನೆ. ಈಗಾಗಲೇ ಈ ಪ್ರಕರಣದ ಪ್ರಮುಖ ಆರೋಪಿಗಳಾದ ಈತನ ತಮ್ಮಂದಿರಾದ ರಾಜ ಶೇಖರ ರೆಡ್ಡಿ(44) ಹಾಗೂ ಹರೀಶ್ ರೆಡ್ಡಿ(40)ಯನ್ನು ಪೊಲೀಸರು ಬಂಧಿಸಿದ್ದಾರೆ.
ರತೀಶ್ ಕರ್ಕೇರ ವ್ಯವಹಾರ ಮಾಡಿಕೊಂಡಿದ್ದು, ಕೊಲೆ ನಡೆದ ಬಳಿಕ ಪ್ರಮುಖ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದಾನೆ. ಈತನನ್ನು ಪೊಲೀಸರು ಈಗಾಗಲೇ ಕುಂದಾಪುರ ನ್ಯಾಯಾ ಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಣೂರು ಗ್ರಾಮದ ಚಿಕ್ಕನಕೆರೆಯಲ್ಲಿ ಶೌಚಾಲಯ ಹೊಂಡದ ವಿವಾದಕ್ಕೆ ಸಂಬಂಧಿಸಿ ಭರತ್ ಕುಮಾರ್ ಮತ್ತು ಯತೀಶ್ ಎಂಬವರನ್ನು ಜ.26ರಂದು ಕೊಲೆಗೈದ ಪ್ರಕರಣದಲ್ಲಿ ಪೊಲೀಸರು ಈವರೆಗೆ ರಾಜಶೇಖರ ರೆಡ್ಡಿ, ಮೆಡಿಕಲ್ ರವಿ, ಉಡುಪಿ ಜಿಪಂ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್, ಹರೀಶ್ ರೆಡ್ಡಿ, ಮಹೇಶ್ ಗಾಣಿಗ, ರವಿಚಂದ್ರ ಪೂಜಾರಿ, ಪೊಲೀಸ್ ಸಿಬ್ಬಂದಿಯಾದ ಪವನ್ ಅಮೀನ್ ಮತ್ತು ವೀರೇಂದ್ರ ಆಚಾರ್ಯ, ಅಭಿಷೇಕ್ ಪಾಲನ್, ಸಂತೋಷ್ ಕುಂದರ್, ರೊಟ್ಟಿ ನಾಗರಾಜ, ವಿದ್ಯಾರ್ಥಿ ಪ್ರಣವ್ ರಾವ್, ಶಂಕರ ಮೊಗವೀರ ಎಂಬವರನ್ನು ಬಂಧಿಸಿದ್ದರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಕಲಂ 143, 147, 148, 447, 120(ಬಿ), 323, 307, 302, 112, 201, 212 ಜೊತೆಗೆ 149 ಐಪಿಸಿ ಪ್ರಕರಣವನ್ನು ದಾಖಲಿಸಲಾಗಿದೆ.

ನಾಳೆ ಎಲ್ಲ ಆರೋಪಿಗಳು ಕೋರ್ಟ್‌ಗೆ ಹಾಜರು
ಮಣೂರು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿ ಹಾಗೂ ನ್ಯಾಯಾಂಗ ಬಂಧನದಲ್ಲಿರುವ ಎಲ್ಲ ಆರೋಪಿಗಳನ್ನು ಪೊಲೀಸರು ಫೆ.15ರಂದು ಬಿಗಿ ಭದ್ರತೆಯಲ್ಲಿ ಕುಂದಾಪುರ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ರಾಜಶೇಖರ ರೆಡ್ಡಿ, ಮೆಡಿಕಲ್ ರವಿ, ರಾಘವೇಂದ್ರ ಕಾಂಚನ್, ಹರೀಶ್ ರೆಡ್ಡಿ, ಮಹೇಶ್ ಗಾಣಿಗ, ರವಿಚಂದ್ರ ಪೂಜಾರಿ ಎಂಬವರ ಪೊಲೀಸ್ ಕಸ್ಟಡಿ ಹಾಗೂ ಪವನ್ ಅಮೀನ್, ವೀರೇಂದ್ರ ಆಚಾರ್ಯ, ಅಭಿಷೇಕ್ ಪಾಲನ್, ಸಂತೋಷ್ ಕುಂದರ್, ರೊಟ್ಟಿ ನಾಗರಾಜ, ಪ್ರಣವ್ ರಾವ್, ಶಂಕರ ಮೊಗವೀರ, ರತೀಶ್ ಕರ್ಕೇರ ಎಂಬವರ ನ್ಯಾಯಾಂಗ ಬಂಧನದ ಅವಧಿಯು ಫೆ.15ಕ್ಕೆ ಮುಗಿಯಲಿರುವುದರಿಂದ ಪೊಲೀಸರು ಎಲ್ಲರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಇವರೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇಂದು ಬಂಧಿಸಲ್ಪಟ್ಟು ಇದೀಗ ಪೊಲೀಸರ ವಶದಲ್ಲಿರುವ ಚಂದ್ರಶೇಖರ್ ರೆಡ್ಡಿಯನ್ನು ಕೂಡ ಪೊಲೀಸರು ನಾಳೆಯೇ ನ್ಯಾಯಾಲಯಕ್ಕೆ ಹಾಜರುಪಡಿಸ ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಈತನನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಬೇಕೆ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೆ ಎಂಬುದರ ಬಗ್ಗೆ ಇನ್ನಷ್ಟೆ ನಿರ್ಧಾರವಾಗಬೇಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X