Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಭಾರತದ ಮೊದಲ ಕೇಂದ್ರೀಕೃತ ಕೂಲಿಂಗ್...

ಭಾರತದ ಮೊದಲ ಕೇಂದ್ರೀಕೃತ ಕೂಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿರುವ ಯುಎಇಯ ತಬ್ರೀದ್

ವಾರ್ತಾಭಾರತಿವಾರ್ತಾಭಾರತಿ14 Feb 2019 10:52 PM IST
share
ಭಾರತದ ಮೊದಲ ಕೇಂದ್ರೀಕೃತ ಕೂಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿರುವ ಯುಎಇಯ ತಬ್ರೀದ್

ದುಬೈ,ಫೆ.14: ಯುಎಇ ಮೂಲದ ನ್ಯಾಷನಲ್ ಸೆಂಟ್ರಲ್ ಕೂಲಿಂಗ್ ಕಂಪನಿ(ತಬ್ರೀದ್)ಯು ಆಂಧ್ರ ಪ್ರದೇಶದ ನೂತನ ರಾಜಧಾನಿ ಅಮರಾವತಿಯಲ್ಲಿ ಬಿಒಒಟಿ(ನಿರ್ಮಾಣ, ಒಡೆತನ, ನಿರ್ವಹಣೆ ಮತ್ತು ವರ್ಗಾವಣೆ) ಆಧಾರದಲ್ಲಿ ಭಾರತದ ಮೊದಲ ಕೇಂದ್ರೀಕೃತ ಕೂಲಿಂಗ್ ವ್ಯವಸ್ಥೆಯನ್ನು ನಿರ್ಮಿಸಲು 30 ವರ್ಷಗಳ ಅವಧಿಗೆ ರಾಜ್ಯ ಸರಕಾರದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.

20,000 ರೆಫ್ರಿಜಿರೇಷನ್ ಟನ್‌ ಗಳ ಕೂಲಿಂಗ್ ಸಾಮರ್ಥ್ಯಕ್ಕಾಗಿ ತಬ್ರೀದ್ ಮತ್ತು ಆಂಧ್ರ ಪ್ರದೇಶ ರಾಜಧಾನಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಎಪಿಸಿಆರ್‌ಡಿಎ)ದ ನಡುವೆ ಈ ಒಪ್ಪಂದವೇರ್ಪಟ್ಟಿದ್ದು, ಇದು ಗಲ್ಫ್ ಸಹಕಾರ ಮಂಡಳಿ ಮಾರುಕಟ್ಟೆಯ ಹೊರಗೆ ಸ್ಥಾಪನೆಯಾಗಲಿರುವ ಕಂಪನಿಯ ಮೊದಲ ಸ್ಥಾವರವಾಗಲಿದೆ.

ತಬ್ರೀದ್‌ನ ಕೇಂದ್ರೀಕೃತ ಕೂಲಿಂಗ್ ವ್ಯವಸ್ಥೆಯು ಉದ್ಯೋಗ ಮತ್ತು ಮನೆಗಳ ಸೃಷ್ಟಿ,ವಿಶ್ವದರ್ಜೆಯ ಮೂಲಸೌಕರ್ಯ,ಹಸಿರು ನಗರ ಮತ್ತು ದಕ್ಷ ಸಂಪನ್ಮೂಲ ನಿರ್ವಹಣೆಗಾಗಿ ಅಮರಾವತಿಗಾಗಿ ಸರಕಾರವು ಹೊಂದಿರುವ ನೀಲನಕ್ಷೆಯ ಭಾಗವಾಗಿದೆ.

ಹಾಲಿ ನಿರ್ಮಾಣಗೊಳ್ಳುತ್ತಿರುವ ರಾಜ್ಯ ವಿಧಾನಸಭೆ,ಉಚ್ಚ ನ್ಯಾಯಾಲಯ,ಸಚಿವಾಲಯ ಮತ್ತು ಇತರ ಸರಕಾರಿ ಕಟ್ಟಡಗಳ ವಾತಾನುಕೂಲ ಅಗತ್ಯವನ್ನು ಈ ವ್ಯವಸ್ಥೆಯು ಪೂರೈಸಲಿದ್ದು,2021ರ ಪೂರ್ವಾರ್ಧದಲ್ಲಿ ಸೇವೆಯು ಆರಂಭಗೊಳ್ಳಲಿದೆ. ಭಾರತದಲ್ಲಿ ಇದು ತಮ್ಮ ಮೊದಲ ಕೇಂದ್ರೀಕೃತ ಕೂಲಿಂಗ್ ಯೋಜನೆಯಾಗಿದ್ದು,ವಿಶ್ವದ ಬೃಹತ್ ಮತ್ತು ತ್ವರಿತವಾಗಿ ಬೆಳೆಯುತ್ತಿರುವ ಮಾರುಕಟ್ಟೆಗಳಲ್ಲಿ ಒಂದಾಗಿರುವ ದೇಶದಲ್ಲಿ ತಬ್ರೀದ್‌ನ ಮಹತ್ವದ ಹೆಜ್ಜೆಯನ್ನು ಸಂಕೇತಿಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಖಾಲಿದ್ ಅಬ್ದುಲ್ಲಾ ಅಲ್-ಕುಬೈಸಿ ಅವರು ಹೇಳಿದರು.

ಇತರ ಕೂಲಿಂಗ್ ವ್ಯವಸ್ಥೆಗಳಿಗೆ ಹೋಲಿಸಿದರೆ ಕೇಂದ್ರೀಕೃತ ಕೂಲಿಂಗ್ ವ್ಯವಸ್ಥೆಯು ನಗರ ಕಟ್ಟಡಗಳನ್ನು ತಂಪಾಗಿರಿಸಲು ಶೇ.50ರಷ್ಟು ಮಾತ್ರ ಪ್ರಾಥಮಿಕ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಇಂಗಾಲ ಹೊರಸೂಸುವಿಕೆಯನ್ನು ಕಡಿಮೆಗೊಳಿಸುತ್ತದೆ. ಮಿತವ್ಯಕರವಾದ ವಾತಾನುಕೂಲದ ಈ ವಿಧಾನವು ಇತರ ಸಾಂಪ್ರದಾಯಿಕ ವಾತಾನುಕೂಲ ವ್ಯವಸ್ಥೆಗಳಿಗೆ ಹೋಲಿಸಿದರೆ ವಾಯ ಗುಣಮಟ್ಟವನ್ನು ಹೆಚ್ಚಿಸುವ ಜೊತೆಗೆ ಶಬ್ದವನ್ನು ಕಡಿಮೆಗೊಳಿಸುತ್ತದೆ.

ಭಾರತದಲ್ಲಿ ಮೊದಲ ಯೋಜನೆಯೊಂದಿಗೆ ಕಂಪನಿಯು ತನ್ನ ಅಸ್ತಿತ್ವವನ್ನು ಆರು ದೇಶಗಳಿಗೆ ವಿಸ್ತರಿಸಿಕೊಂಡಿದೆ ಎಂದು ತಬ್ರೀದ್‌ನ ಸಿಇಒ ಜಾಸಿಮ್ ಹುಸೇನ್ ಥಾಬೆಟ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X