Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇರಾನಿ ಕಪ್: ಅಕ್ಷಯ್ ಚೊಚ್ಚಲ...

ಇರಾನಿ ಕಪ್: ಅಕ್ಷಯ್ ಚೊಚ್ಚಲ ಶತಕ,ವಿದರ್ಭಕ್ಕೆ ಮುನ್ನಡೆ

ಹನುಮ ವಿಹಾರಿ- ಅಜಿಂಕ್ಯ ರಹಾನೆ ಮರು ಹೋರಾಟ

ವಾರ್ತಾಭಾರತಿವಾರ್ತಾಭಾರತಿ14 Feb 2019 11:32 PM IST
share
ಇರಾನಿ ಕಪ್: ಅಕ್ಷಯ್ ಚೊಚ್ಚಲ ಶತಕ,ವಿದರ್ಭಕ್ಕೆ ಮುನ್ನಡೆ

ನಾಗ್ಪುರ, ಫೆ.14: ಇರಾನಿ ಕಪ್‌ನ ಮೂರನೇ ದಿನವಾದ ಗುರುವಾರ ವಿದರ್ಭದ ಅಕ್ಷಯ್ ಕರ್ನೆವಾರ್ ಪಾಲಿಗೆ ಶುಭ ದಿನವಾಗಿತ್ತು. ಚೊಚ್ಚಲ ಶತಕ ಸಿಡಿಸಿದ ಕೆಳ ಕ್ರಮಾಂಕದ ದಾಂಡಿಗ ಕರ್ನೆವಾಲ್ ರಣಜಿ ಟ್ರೋಫಿ ಚಾಂಪಿಯನ್ ತಂಡಕ್ಕೆ ಶೇಷ ಭಾರತ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ 95 ರನ್ ಮುನ್ನಡೆ ಪಡೆಯಲು ಪ್ರಮುಖ ಪಾತ್ರವಹಿಸಿದರು.

ಮೊದಲ ಇನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸಿರುವ ಶೇಷ ಭಾರತ ದಿನದಾಟದಂತ್ಯಕ್ಕೆ 2ನೇ ಇನಿಂಗ್ಸ್‌ನಲ್ಲಿ 2 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿದೆ. ಹನುಮ ವಿಹಾರಿ(40) ಹಾಗೂ ನಾಯಕ ಅಜಿಂಕ್ಯ ರಹಾನೆ(25)ಮೂರನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 56 ರನ್ ಗಳಿಸಿ ತಿರುಗೇಟು ನೀಡಲು ಯತ್ನಿಸುತ್ತಿದ್ದಾರೆ. ಶೇಷ ಭಾರತ ಇದೀಗ 7 ರನ್ ಮುನ್ನಡೆಯಲ್ಲಿದೆ.

ಮೊದಲ ಇನಿಂಗ್ಸ್‌ನಲ್ಲಿ 95 ರನ್ ಗಳಿಸಿದ್ದ ಮಾಯಾಂಕ್ ಅಗರ್ವಾಲ್ 12ನೇ ಓವರ್‌ನಲ್ಲಿ 27 ರನ್‌ಗೆ ಔಟಾಗಿದ್ದಾರೆ. ಅಮೋಲ್‌ಪ್ರೀತ್ ಸಿಂಗ್(6) ಮತ್ತೊಮ್ಮೆ ವಿಫಲರಾಗಿದ್ದಾರೆ.

ಅಕ್ಷಯ್ ಅಬ್ಬರ, ವಿದರ್ಭ 425 ರನ್

ಇದಕ್ಕೂ ಮೊದಲು 6 ವಿಕೆಟ್‌ಗೆ 245 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ವಿದರ್ಭಕ್ಕೆ ಅಕ್ಷಯ್ ಕರ್ನೆವಾರ್(102,133 ಎಸೆತ, 13 ಬೌಂಡರಿ, 2 ಸಿಕ್ಸರ್)ಹಾಗೂ ಅಕ್ಷಯ್ ವಾಡ್ಕರ್(73,139 ಎಸೆತ, 14 ಬೌಂಡರಿ)ಆಸರೆಯಾದರು. ಶೇಷ ಭಾರತದ ಮೊದಲ ಇನಿಂಗ್ಸ್ ಮೊತ್ತ 331ಕ್ಕೆ ಉತ್ತರವಾಗಿ ವಿದರ್ಭ 425 ರನ್ ಗಳಿಸಿತು. ಕರ್ನೆವಾರ್‌ಗೆ 50 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ವಾಡ್ಕರ್ ಉತ್ತಮ ಸಾಥ್ ನೀಡಿದರು.7ನೇ ವಿಕೆಟ್‌ಗೆ 79 ರನ್ ಜೊತೆಯಾಟ ನಡೆಸಿದರು.

ಭೋಜನ ವಿರಾಮಕ್ಕೆ ಮೊದಲೇ ವಾಡ್ಕರ್ ಔಟಾದರೂ ದೃತಿಗೆಡದ ಕರ್ನೆವಾರ್ ತನ್ನ ಆಕ್ರಮಣಕಾರಿ ಆಟ ಮುಂದುವರಿಸಿದರು. 9ನೇ ಕ್ರಮಾಂಕದ ಆಟಗಾರ ಅಕ್ಷಯ್ ವಖಾರೆ(20)ತನ್ನ ಪಾಲಿನ ಕೊಡುಗೆ ನೀಡಿದ್ದು, ಕರ್ನೆವಾರ್ರೊಂದಿಗೆ 8ನೇ ವಿಕೆಟ್‌ಗೆ ಉಪಯುಕ್ತ 76 ರನ್ ಸೇರಿಸಿದರು. ಭೋಜನ ವಿರಾಮದ ಬಳಿಕ ಕರ್ನೆವಾರ್ವಿಕೆಟನ್ನು ಪಡೆದ ರಾಹುಲ್ ಚಹಾರ್ ಈ ಜೋಡಿಯನ್ನು ಬೇರ್ಪಡಿಸಿದರು. ಏಕಾಂಗಿ ಹೋರಾಟ ನೀಡಿದ ಕರ್ನೆವಾರ್ ವಿಕೆಟ್ ಒಪ್ಪಿಸಿದಾಗ ವಿದರ್ಭ 56 ರನ್ ಮುನ್ನಡೆಯಲ್ಲಿತ್ತು. ಯಶ್ ಠಾಕೂರ್(10) ಹಾಗೂ ರಜನೀಶ್ ಗುರ್ಬಾನಿ(ಔಟಾಗದೆ 28)ಕೊನೆಯ ವಿಕೆಟ್‌ನಲ್ಲಿ ಅಮೂಲ್ಯ 39 ರನ್ ಜೊತೆಯಾಟದಲ್ಲಿ ಭಾಗಿಯಾಗಿ ವಿದರ್ಭದ ಸ್ಕೋರನ್ನು 400ರ ಗಡಿ ದಾಟಿಸಿದರು. ಅಂಕಿತ್ ರಾಜ್‌ಪೂತ್ ಅವರು ಠಾಕೂರ್‌ರನ್ನು ಎಲ್ಬಿಡಬ್ಲು ಬಲೆಗೆ ಬೀಳಿಸುವುದರೊಂದಿಗೆ ವಿದರ್ಭದ ಮೊದಲ ಇನಿಂಗ್ಸ್‌ಗೆ ತೆರೆ ಎಳೆದರು.

19ರ ಹರೆಯದ ರಾಹುಲ್ ಚಹಾರ್ 112 ರನ್‌ಗೆ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ಚಹಾರ್ ವಿದರ್ಭದ ಇಬ್ಬರು ಅಗ್ರ ಸ್ಕೋರರ್‌ಗಳಾದ ಕರ್ನೆವಾರ್ ಹಾಗೂ ವಾಡ್ಕರ್ ವಿಕೆಟನ್ನು ಪಡೆದು ಶೇಷ ಭಾರತದ ಪರ ಯಶಸ್ವಿ ಪ್ರದರ್ಶನ ನೀಡಿದರು. ಬೆಳಗ್ಗೆ 15 ರನ್‌ನಿಂದ ಬ್ಯಾಟಿಂಗ್ ಆರಂಭಿಸಿದ ಕರ್ನೆವಾರ್ ರಾಜ್‌ಪೂತ್ ಬೌಲಿಂಗ್‌ನಲ್ಲಿ ಸತತ 3 ಬೌಂಡರಿ ಗಳಿಸಿ ವಿದರ್ಭಕ್ಕೆ ಮಿಂಚಿನ ಆರಂಭ ನೀಡಿದರು. ಭೋಜನ ವಿರಾಮಕ್ಕೆ ಮೊದಲೇ ಧರ್ಮೇಂದ್ರ ಸಿನ್ಹಾ ಜಡೇಜ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸಿದ ಕರ್ನೆವಾರ್ ತನ್ನ ಚೊಚ್ಚಲ ಶತಕವನ್ನು ಆಕರ್ಷಕವಾಗಿ ಪೂರೈಸಿದರು.

ರಾತ್ರಿ ಮಳೆ ಸುರಿಯುವ ಸಾಧ್ಯತೆಯಿದೆ. ಒಂದು ವೇಳೆ ಪಂದ್ಯ ಡ್ರಾನಲ್ಲಿ ಕೊನೆಗೊಂಡರೆ, ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆದಿರುವ ವಿದರ್ಭ ಸತತ ಎರಡನೇ ವರ್ಷ ಇರಾನಿ ಕಪ್‌ನ್ನು ಎತ್ತಿ ಹಿಡಿಯಲಿದೆ. ಆದರೆ,ಇನ್ನೂ 180 ಓವರ್‌ಗಳ ಆಟ ಆಡಲು ಬಾಕಿ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X