Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರೋಧ, ಕ್ರೌರ್ಯದ ಮುಂದೆ ಶಾಂತತೆಯಿಂದ...

ಕ್ರೋಧ, ಕ್ರೌರ್ಯದ ಮುಂದೆ ಶಾಂತತೆಯಿಂದ ಪ್ರತಿಕ್ರಿಯಿಸಿ: ಎಂ.ವೀರಪ್ಪ ಮೊಯ್ಲಿ

ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಗ್ರಂಥಗಳ ಬಿಡುಗಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Feb 2019 11:34 PM IST
share
ಕ್ರೋಧ, ಕ್ರೌರ್ಯದ ಮುಂದೆ ಶಾಂತತೆಯಿಂದ ಪ್ರತಿಕ್ರಿಯಿಸಿ: ಎಂ.ವೀರಪ್ಪ ಮೊಯ್ಲಿ

ಬೆಳ್ತಂಗಡಿ,ಫೆ.14: ಹಿಂಸೆಯಿಂದ ಹಿಂಸೆಯೇ ಮತ್ತಷ್ಟು ಅಧಿಕವಾಗುತ್ತದೆ. ಕ್ರೋಧ, ಕ್ರೌರ್ಯದ ಮುಂದೆ ಶಾಂತತೆಯಿಂದ ಪ್ರತಿಕ್ರಿಯಿಸುವ ಮೂಲಕ ನೆಮ್ಮದಿಯನ್ನು ಸ್ಥಾಪಿಸಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹೇಳಿದರು.

ಅವರು, ಗುರುವಾರ ಧರ್ಮಸ್ಥಳ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಸಂದರ್ಭ ಅಮೃತವರ್ಷಿಣಿ ಸಭಾಭವನದಲ್ಲಿ ಗ್ರಂಥಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತನೇ ವರ್ಷದ ಸುವರ್ಣ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. 

ಈ ಮಹಾಕಾವ್ಯ ನನ್ನ ಬದುಕನ್ನೇ ಪರಿವರ್ತಿಸಿದೆ. ಆ ಬಳಿಕ ಜೀವನದುದ್ದಕ್ಕೂ ಶಾಂತಿಯ ಮನೋಭಾವನೆಯನ್ನು ಬೆಳೆಸಿಕೊಂಡಿದ್ದೇನೆ. ಸಿಟ್ಟು, ರೋಷವೆಲ್ಲವೂ ಮಾಯಾವಾಗಿದೆ ಎಂದರು.

ದುರ್ಬಲರಾದ ಜನರನ್ನು ಒಟ್ಟುಗೂಡಿಸಿ ಅವರಲ್ಲಿ ಶಕ್ತಿ ತುಂಬುವ ಮಹಾ ಕಾರ್ಯವನ್ನು ಡಾ.ಹೆಗ್ಗಡೆಯವರು ಮಾಡುತ್ತಿದ್ದಾರೆ. ಇದೊಂದು ವಿಸ್ಮಯ. ಕಾರ್ಕಳದಲ್ಲಿ ಬಾಹುಬಲಿಯ ಕೆತ್ತನೆಯಿಂದ ಆರಂಭಿಸಿ, ಅದರ ಸಾಗಾಟ, ಪ್ರತಿಷ್ಠೆ ಎಲ್ಲವೂ ಆಧುನಿಕ ಯುಗದ ವಿಸ್ಮಯವೇ ಆಗಿದೆ. ಜೈನ ಸಂಸ್ಕೃತಿಯಲ್ಲಿ ಬಂದಿರುವಷ್ಟು ಗ್ರಂಥಗಳು ಬೇರೆ ಯಾವ ಸಂಸ್ಕೃತಿಯಲ್ಲೂ ಬಂದಿಲ್ಲ. ಶ್ರವಣಬೆಳಗೊಳ ಭಟ್ಟಾರಕ ಸ್ವಾಮೀಜಿಯವರ ಅಪ್ಪಣೆಯಂತೆ ಬಾಹುಬಲಿಯ ಅಹಿಂಸಾ ದಿಗ್ವಿಜಯ ಮಹಾಕಾವ್ಯವನ್ನು ಬರೆಯಬೇಕಾದರೆ, ಜಗತ್ತಿನಾದ್ಯಂತ ಇರುವ ನೂರಾರು ಗ್ರಂಥಗಳನ್ನು ಅಧ್ಯಯನ ಮಾಡಿ ಬಾಹುಬಲಿಗೆ ಕಾವ್ಯನ್ಯಾಯವನ್ನು ಒದಗಿಸುವ ಪ್ರಯತ್ನ ಮಾಡಿದ್ದೇನೆ ಎಂದರು. 

ಎಂ.ವೀರಪ್ಪ ಮೊಯ್ಲಿಯವರು ಅನುವಾದಿಸಿದ ಬಾಹುಬಲಿ ಅಹಿಂಸಾ ದಿಗ್ವಿಜಯಂ ಗದ್ಯಾನುವಾದದ ಗ್ರಂಥದ ಬಿಡುಗಡೆಯನ್ನು ಶ್ರೀ ಪುಣ್ಯಸಾಗರ ಮಹಾರಾಜರು ನೆರವೇರಿಸಿದರು. ವಿಜಯಾ ಜಿ. ಜೈನ್ ಇರ್ವತ್ತೂರು ಬೀಡು ಅವರ ಧರ್ಮಸ್ಥಳದ ಶ್ರೀ ಗೋಮ್ಮಟೇಶ್ವರ ಚರಿತ್ರೆಯನ್ನು ಶ್ರೀ ವೀರಸಾಗರ ಮುನಿಮಹಾರಾಜರು ಬಿಡುಗಡೆಗೊಳಿಸಿದರು. ಎಸ್ ಎಸ್.ಉಕ್ಕಾಲಿ ಮುಧೋಳ ಬರೆದ ಕೃತಿ ಆದಿಪುರಾಣ ಗ್ರಂಥವನ್ನು ಶ್ರೀ ಸಿದ್ಧಸೇನಾಚಾರ್ಯ ಮುನಿಮಹಾರಾಜರು ನೆರವೇರಿಸಿದರು. ಶ್ರೀ ವರ್ಧಮಾನ ಸಾಗರ ಜೀ ಮಹಾರಾಜರು ಶ್ರೀ ವಿಶುದ್ಧ ಸಾಗರ ಮುನಿ ಮಹಾರಾಜರು ರಚಿಸಿದ ಸೈಂತಾಲೀಸ್ ಶಕ್ತಿಯೋಂಕ ವಿಶದ್ ವ್ಯಾಖ್ಯಾನವನ್ನು ಬಿಡುಗಡೆಗೊಳಿಸಿದರು. 

ಕಾರ್ಯಕ್ರಮಕ್ಕೆ ನಾಡೋಜ ಹಂಪ ನಾಗರಾಜಯ್ಯ ಶುಭ ಹಾರೈಸಿದರು. ವೇದಿಕೆಯಲ್ಲಿ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಮಾಜಿ ಸಚಿವ ಅಭಯಚಂದ್ರ ಜೈನ್, ಸುರೇಂದ್ರ ಕುಮಾರ್, ಕಮಲಾ ಹಂಪನಾ, ಜಿ.ಪಂ.ಮೀನಾಕ್ಷಿ ಶಾಂತಿಗೋಡು, ತಾ.ಪಂ. ಅಧ್ಯಕ್ಷೆ ದಿವ್ಯ ಜ್ಯೋತಿ, ಗ್ರಾ.ಪಂ. ಅಧ್ಯಕ್ಷ ಚಂದನ್ಕಾಮತ್, ಎಸ್. ಎಸ್.ಉಕ್ಕಾಲಿ ಬಾಗಲಕೋಟೆ, ಡಾ. ವಿ.ಎಸ್.ರಾಜಣ್ಣ, ಪುತ್ತೂರು ನರಸಿಂಹ ನಾಯಕ್ ಉಪಸ್ಥಿತರಿದ್ದರು. ಪ್ರೊ. ಬೈರಮಂಗಲ ರಾಮೇಗೌಡ ಮಹಾಕಾವ್ಯದ ವಿವರಣೆ ನೀಡಿದರು. 

ಜಿ.ಪಂ.ಮಾಜಿ ಉಪಾಧ್ಯಕ್ಷೆ ರಾಜಶ್ರೀ ಎಸ್.ಹೆಗ್ಡೆ ಸ್ವಾಗತಿಸಿದರು. ಶ್ರುತಿ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ವಿಜಯರಾಜ ಅತಿಕಾರಿ ವೇಣೂರು ವಂದಿಸಿದರು. 

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು, ಇಂದು ಅಪರೂಪದ ಒಳ್ಳೆಯ ದಿನ. ಆಗಬೇಕಾದ ಭಾರೀ ಅನಾಹುತವನ್ನು ಶ್ರೀ ಮಂಜುನಾಥ ಸ್ವಾಮಿ ಅಣ್ಣಪ್ಪ ತಪ್ಪಿಸಿದ್ದಾರೆ. ಕಳೆದ ಕೆಲದಿನಗಳಿಂದ ನನ್ನ ಮನಸ್ಸು ಶಾಂತವಾಗಿರಲಿಲ್ಲ. ಗೊಂದಲದಲ್ಲಿತ್ತು. ಅದಕ್ಕೆ ಜ್ಯೋತಿಷಿಯವರ ಹತ್ತಿರ ಈ ವಿಷಯಗಳನ್ನು ತಿಳಿಸಿ ವಿಮರ್ಶೆಗೆ ಒಡ್ಡಿದ್ದೆ. ಅವರು ಒಂದು ಘಟನೆ ನಡೆಯುವ ಸಾಧ್ಯತೆ ಇದೆ. ಅದರ ತೀವ್ರತೆಯನ್ನು ಕಡಿಮೆ ಮಾಡಲು  ವಿಶೇಷ ಪೂಜೆಯನ್ನು ಸಲ್ಲಿಸುವಂತೆ ಸೂಚಿಸಿದರು. ಅದರಂತೆ ವಿಶೇಷ ಪೂಜೆ ಸಲ್ಲಿಸಿದೆ. ಇಂದು ಎಲ್ಲರೂ ಊಟಕ್ಕೆ ತೆರೆಳಿದ್ದ ವೇಳೆ ಅರಮನೆ ಮಂಟಪ ಕುಸಿಯಿತು. ಅಕಸ್ಮಾತ್ ಒಂದು ಗಂಟೆಯ ಮೊದಲು ಈ ಘಟನೆ ನಡೆದಿದ್ದರೆ, ಮುನಿಗಳು, ನಾನು, ನೀವು ಎಲ್ಲರೂ ತೊಂದರೆಗೊಳಗಾಗುತ್ತಿದ್ದರು. ಇದಕ್ಕೆ ಮುನಿಗಳ ತಪಸ್ಸಿನ ಶಕ್ತಿಯೂ ಕಾರಣ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X