Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಪಿಯು ಮಂಡಳಿ ಪರೀಕ್ಷೆಬರೆಯುವ...

ದ್ವಿತೀಯ ಪಿಯು ಮಂಡಳಿ ಪರೀಕ್ಷೆಬರೆಯುವ ಜೊತೆಗೆ ತರಬೇತಿ ನಡೆಸುತ್ತಿರುವ ಓಟಗಾರ್ತಿ ಹಿಮಾ ದಾಸ್

ವಾರ್ತಾಭಾರತಿವಾರ್ತಾಭಾರತಿ14 Feb 2019 11:42 PM IST
share
ದ್ವಿತೀಯ ಪಿಯು ಮಂಡಳಿ ಪರೀಕ್ಷೆಬರೆಯುವ ಜೊತೆಗೆ ತರಬೇತಿ ನಡೆಸುತ್ತಿರುವ ಓಟಗಾರ್ತಿ ಹಿಮಾ ದಾಸ್

ಗುವಾಹಟಿ, ಫೆ.14: ಓಟದ ಟ್ರಾಕ್‌ನಲ್ಲಿ ದಾಖಲೆ ಮೇಲೆ ದಾಖಲೆ ನಿರ್ಮಿಸಿರುವ ಭಾರತದ ಉದಯೋನ್ಮುಖ ಓಟಗಾರ್ತಿ ಹಿಮಾ ದಾಸ್ ತನ್ನ ಶಿಕ್ಷಣವನ್ನು ಮೊಟಕುಗೊಳಿಸಲು ಬಯಸದೇ, ಏಕಕಾಲದಲ್ಲಿ ತರಬೇತಿಯ ಜೊತೆಗೆ ದ್ವಿತೀಯ ಪಿಯು ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

400 ಮೀ. ಓಟದಲ್ಲಿ ವಿಶ್ವ ಜೂನಿಯರ್ ಚಾಂಪಿಯನ್ ಆಗಿರುವ ಅಸ್ಸಾಂನ ನಾಗಾಂವ್ ಜಿಲ್ಲೆಯ ಗ್ರಾಮೀಣ ಪ್ರತಿಭೆ ಹಿಮಾ ರಾತ್ರೋರಾತ್ರಿ ರಾಣಿಯಾಗಿ ಹೊರಹೊಮ್ಮಿದ್ದರು. ಕಳೆದ ವರ್ಷ ತನ್ನ ಓಟದ ಸಮಯವನ್ನು ಉತ್ತಮಪಡಿಸಿಕೊಂಡಿದ್ದು, ಏಶ್ಯನ್ ಗೇಮ್ ್ಸ ನಲ್ಲಿ 50.79 ಸೆಕೆಂಡ್‌ನಲ್ಲಿ ಗುರಿ ತಲುಪಿ ಬೆಳ್ಳಿ ಜಯಿಸಿದ್ದರು. ಮಾತ್ರವಲ್ಲ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದರು.

ಇತರ ಯುವತಿಯರಂತೆ ಹಿಮಾ ಕೂಡ ಶಿಕ್ಷಣದಲ್ಲಿ ಪದವಿ ಪಡೆಯಲು ಬಯಸಿದ್ದಾರೆ. ಪ್ರಸ್ತುತ ಅವರು ಅಸ್ಸಾಂ ಉನ್ನತ ಮಾಧ್ಯಮಿಕ ಶಿಕ್ಷಣ ಪರಿಷತ್‌ನ ದ್ವಿತೀಯ ಪಿಯು ಪರೀಕ್ಷೆೆಗೆ ಹಾಜರಾಗುತ್ತಿದ್ದಾರೆ. ‘‘ನಾನು 2019ರಲ್ಲಿ ಪ್ರಮುಖ ಟೂರ್ನಮೆಂಟ್‌ಗಳನ್ನು ಎದುರು ನೋಡುತ್ತಿರುವೆ. ಕಾಲೇಜು ಪರೀಕ್ಷೆಯ ಜೊತೆಗೆ ನನ್ನ ತರಬೇತಿ ಕಡೆಗೂ ಗಮನ ನೀಡುತ್ತಿದ್ದೇನೆ. ಶಿಕ್ಷಣ ಪಡೆಯುವಾಗ ಲಭಿಸುವ ಸಮಯದಲ್ಲೇ ತರಬೇತಿ ಪಡೆಯುತ್ತಿದ್ದೇನೆ’’ ಎಂದು ಹಿಮಾ ದಾಸ್ ಪಿಟಿಐಗೆ ತಿಳಿಸಿದ್ದಾರೆ.

ಹಿಮಾ ಅವರ ಮಂಡಳಿ ಪರೀಕ್ಷೆಯು ಫೆ.12 ರಂದು ಆರಂಭವಾಗಿದೆ. ಮಾರ್ಚ್ ಮಧ್ಯದ ತನಕ ಪರೀಕ್ಷೆ ನಡೆಯಲಿದೆ. ‘‘ಫೆ.11 ರಂದು ಸಂಜೆ ಗುವಾಹಟಿಗೆ ಬಂದಿರುವ ಹಿಮಾ ಮರುದಿನ ಬೆಳಗ್ಗೆ ಮೊದಲ ಪರೀಕ್ಷೆ ಬರೆದಿದ್ದಾರೆ. ಮಧ್ಯಾಹ್ನ ಪರೀಕ್ಷೆ ಮುಗಿದ ಬಳಿಕ ಮನೆಗೆ ತೆರಳಿದ್ದಾರೆ. ಎರಡನೇ ಪರೀಕ್ಷೆಗೆ ಹಾಜರಾಗಲು ಶುಕ್ರವಾರ ಬರುವುದಾಗಿ ಹೇಳಿದ್ದಾರೆ. ಪರೀಕ್ಷೆ ಬರೆದು ಮತ್ತೆ ತರಬೇತಿ ನಡೆಸಲು ಗುವಾಹಟಿಗೆ ವಾಪಸಾಗಲಿದ್ದಾರೆ. ಇದಕ್ಕೆ ಅವರ ಹೆತ್ತವರ ಬೆಂಬಲವಿದೆ. ತನ್ನ ಮಗಳು ಶೈಕಣಿಕ ಅರ್ಹತೆ ಪಡೆಯಬೇಕೆನ್ನುವುದು ಹೆತ್ತವರ ಬಯಕೆಯಾಗಿದೆ’’ ಎಂದು ಹಿಮಾ ಸಂಬಂಧಿ ಬಿಜಾಯ್ ದಾಸ್ ಹೇಳಿದ್ದಾರೆ. ಹಿಮಾ ತಂದೆ ರೈತ. ತಾಯಿ ಗೃಹಿಣಿ. ಸಣ್ಣ ತುಂಡು ಭೂಮಿಯೇ ಆರು ಜನರಿರುವ ಕುಟುಂಬದ ಆದಾಯ ಮೂಲ. ನಾಲ್ವರು ಒಡಹುಟ್ಟಿದವರ ಪೈಕಿ ಹಿಮಾ ಹಿರಿಯವಳು. ಹಿಮಾಗೆ ಇಬ್ಬರು ತಂಗಿಯರು ಹಾಗೂ ಓರ್ವ ತಮ್ಮನಿದ್ದಾನೆ.

ಹಿಮಾ ಮುಂದಿನ ತಿಂಗಳು ಫೆಡರೇಶನ್ ಕಪ್ ನ್ಯಾಶನಲ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಮೂಲಕ ತನ್ನ ಅಥ್ಲೆಟಿಕ್ ಋತು ಆರಂಭಿಸಲಿದ್ದಾರೆ.

ಕ್ರೀಡಾಪಟುವಾಗಿ ಅಸ್ಸಾಂನಲ್ಲಿ ಜನಜನಿತವಾಗಿರುವ ಹಿಮಾ ಕಳೆದ ವರ್ಷ ರಾಜ್ಯ ಕ್ರೀಡಾ ರಾಯಭಾರಿಯಾಗಿ ನೇಮಕಗೊಂಡಿದ್ದರು. ಹಲವು ಗೌರವವನ್ನು ಪಡೆದಿದ್ದಾರೆ. ಕಳೆದ ವರ್ಷ ಕೇಂದ್ರ ಸರಕಾರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X