Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ಪತಿ ದೇಶವನ್ನು ರಕ್ಷಿಸುತ್ತಿದ್ದರು,...

ನನ್ನ ಪತಿ ದೇಶವನ್ನು ರಕ್ಷಿಸುತ್ತಿದ್ದರು, ಆದರೆ ಅವರಿಗೆ ರಕ್ಷಣೆ ಸಿಗಲಿಲ್ಲ: ಹುತಾತ್ಮ ಯೋಧ ಗುರು ಪತ್ನಿ

ವಾರ್ತಾಭಾರತಿವಾರ್ತಾಭಾರತಿ15 Feb 2019 9:44 PM IST
share
ನನ್ನ ಪತಿ ದೇಶವನ್ನು ರಕ್ಷಿಸುತ್ತಿದ್ದರು, ಆದರೆ ಅವರಿಗೆ ರಕ್ಷಣೆ ಸಿಗಲಿಲ್ಲ: ಹುತಾತ್ಮ ಯೋಧ ಗುರು ಪತ್ನಿ

ಬೆಂಗಳೂರು, ಫೆ.16: “ನನ್ನ ಪತಿಯನ್ನು ಯಾವ ರೀತಿಯಲ್ಲಿ ಕೊಂದರೋ ಅದೇ ರೀತಿಯಲ್ಲಿ ಅವರನ್ನು (ಉಗ್ರರನ್ನು) ಕೂಡಾ ಕೊಂದುಹಾಕಿ”.... ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಡ್ಯ ಜಿಲ್ಲೆಯ ಸಿಆರ್‌ ಪಿಎಫ್ ಯೋಧ ಗುರು ಅವರ ಪತ್ನಿ ಕಲಾವತಿ, ಉಮ್ಮಳಿಸಿ ಬರುತ್ತಿರುವ ದುಃಖದ ನಡುವೆ ಆಕ್ರೋಶಭರಿತವಾಗಿ ಹೇಳಿದ ಮಾತುಗಳಿವು.

“ಪತಿಯ ನಿಧನದ ಸುದ್ದಿ ನನಗೆ ರಾತ್ರಿ 11:00 ಗಂಟೆಯ ವೇಳೆಗಷ್ಟೇ ತಿಳಿದುಬಂದಿತೆಂದು” ಕಲಾವತಿ ಹೇಳುತ್ತಾರೆ. ''ನಿನ್ನೆ ನನ್ನ ಪತಿ ಫೋನ್ ಕರೆ ಮಾಡಿದ್ದರು. ಆದರೆ ನಾನು ಮನೆಕೆಲಸದಲ್ಲಿ ನಿರತಳಾಗಿದ್ದರಿಂದ ಆ ಕರೆಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ. ಮತ್ತೆ ಅವರಿಗೆ ನಾನು ಮರಳಿ ಕರೆ ಮಾಡಿದಾಗ ಅವರ ಫೋನ್‌ ನ್ನು ತಲುಪಲಾಗಲಿಲ್ಲ. ನನಗೆ ಅವರೊಂದಿಗೆ ಕೊನೆಯ ಬಾರಿ ಮಾತನಾಡುವ ಅವಕಾಶ ದೊರೆತಿತ್ತು. ಅದರೆ ನನ್ನ ಪತಿಯ ವಿಧಿಯಂತೆ, ನನ್ನ ವಿಧಿಯೂ ಅತ್ಯಂತ ಘೋರವಾಗಿದೆ'' ಎಂದು ಆಂಗ್ಲ ಸುದ್ದಿವಾಹಿನಿಯೊಂರ ಜತೆ ಕಲಾವತಿ ಕಣ್ಣೀರು ಸುರಿಸುತ್ತಾ ಹೇಳಿದರು.
“ನನ್ನ ಪತಿಯನ್ನು ನನಗೆ ವಾಪಸ್ ತಂದುಕೊಡಿ. ಗಡಿಯನ್ನು ಕಾಯುತ್ತಿರುವವರು ಇದೇ ರೀತಿ ಸದಾ ಕಾಲವೂ ಸಾಯುತ್ತಲೇ ಇರುವುದಾದರೆ, ಅವರನ್ನು ಮನೆಗೆ ವಾಪಸ್ ಕಳುಹಿಸಿ, ಕನಿಷ್ಠ ಪಕ್ಷ ಅವರು ಮನೆಯವರ ಪಾಲನೆಯನ್ನಾದರೂ ಮಾಡಿಯಾರು” ಎಂದರು. ಗುರು ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದರು. ತಾನು ಪುಲ್ವಾಮಾಕ್ಕೆ ತೆರಳುತ್ತಿರುವುದನ್ನು ಅವರು ತಿಳಿಸಲೇ ಇರಲಿಲ್ಲವೆಂದು ಕಲಾವತಿ ಆಳುತ್ತಾ ಹೇಳಿದರು.

“ನನ್ನ ಪತಿಯು ದೇಶದ ವಿವಿಧ ಭಾಗಗಳಲ್ಲಿ ಪ್ರತಿಕೂಲ ಹವಾಮಾನದ ನಡುವೆಯೂ ಕರ್ತವ್ಯ ನಿರ್ವಹಿಸಿದ್ದಾರೆ. ಗಡಿರಕ್ಷಣೆಯ ತನ್ನ ಕರ್ತವ್ಯದಲ್ಲಿನ ಸಂಕಷ್ಟಗಳ ಬಗ್ಗೆ ಅವರು ನನ್ನೊಂದಿಗೆ ಹೇಳಿಕೊಳ್ಳುತ್ತಿದ್ದರು. ದೇಶವನ್ನು ರಕ್ಷಿಸುತ್ತಿದ್ದುದ್ದಾಗಿ ನನ್ನ ಪತಿಯ ಬಗ್ಗೆ ನನ್ನ ತೀವ್ರ ಹೆಮ್ಮೆಯಿದೆ. ಆದರೆ ಅವರಿಗೆ ಅಗತ್ಯವಿದ್ದಾಗ ಯಾವುದೇ ರಕ್ಷಣೆ ದೊರೆಯಲಿಲ್ಲ” ಎಂದು ಕಲಾವತಿ ಹೇಳಿದರು.

ಕಲಾವತಿಯವರಿಗೆ ಸರಕಾರಿ ಉದ್ಯೋಗವನ್ನು ನೀಡಲಾಗುವುದೆಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಿ.ಎಸ್.ಪುಟ್ಟರಾಜು ಘೋಷಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರತಿಪಕ್ಷ ನಾಯಕ ಬಿ,.ಎಸ್. ಯಡಿಯೂರಪ್ಪ, ಹುತಾತ್ಮ ಸೈನಿಕ ಗುರು ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X