Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದಾಪುರ: ಯುನೈಟೆಡ್ ಮುಸ್ಲಿಂ...

ಸಿದ್ದಾಪುರ: ಯುನೈಟೆಡ್ ಮುಸ್ಲಿಂ ಸಂಘಟನೆಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ15 Feb 2019 9:45 PM IST
share
ಸಿದ್ದಾಪುರ: ಯುನೈಟೆಡ್ ಮುಸ್ಲಿಂ ಸಂಘಟನೆಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ

ಸಿದ್ದಾಪುರ (ಕೊಡಗು), ಫೆ.15: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಯೋಧರಿಗೆ ನಮನ ಸಲ್ಲಿಸುವ ಸಲುವಾಗಿ ಸ್ಥಳೀಯ ಯುನೈಟೆಡ್ ಮುಸ್ಲಿಂ ಸಂಘಟನೆಯ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸೇರಿ ಶ್ರದ್ಧಾಂಜಲಿ ಸಭೆ ನಡೆಸಿದರು. 

ಇಲ್ಲಿಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಪ್ರಮುಖರು ಹುತಾತ್ಮರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಿದರು.

ಗ್ರಾ.ಪಂ ಅಧ್ಯಕ್ಷ ಎಂ.ಕೆ ಮಣಿ ಮಾತನಾಡಿ, ದೇಶದ ರಕ್ಷಣೆಯ ಬೆನ್ನೆಲುಬಾಗಿ ನಿಂತಿರುವ ವೀರ ಯೋಧರ ಮೇಲೆ ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು, ರಾಜ್ಯದ ಯೋಧ ಸೇರಿದಂತೆ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿರುವುದು ವಿಷಾದನೀಯ. ಇಂತಹ ಘಟನೆಗಳು ಮರುಕಳಿಸದಂತೆ ಸರಕಾರ ದಿಟ್ಟ ಹೆಜ್ಜೆ ಇಡಬೇಕಾಗಿದೆ ಎಂದರು.

ಸಾಮಾಜಿಕ ಹೋರಾಟಗಾರ ಪಿ.ಆರ್ ಭರತ್ ಮಾತನಾಡಿ, ದೇಶದ ಯೋದರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿ ಅತ್ಯಂತ ಖಂಡನೀಯ. ದೇಶದ ಗೆಡಿಯನ್ನು ಕಾಯುವ ಸೈನಿಕರಿಗೆ ಇವತ್ತು ರಕ್ಷಣೆ ಇಲ್ಲದಂತಾಗಿದೆ. ಗಡಿ ರಕ್ಷಣೆಗಾಗಿ ಶೇಕಡ 39 ರಷ್ಟು ಹಣವನ್ನು ವಿನಿಯೋಗಿಸಿದರೂ ಭಯೋತ್ಪಾದಕರು ಗಡಿಯೊಳಗೆ ಧೈರ್ಯವಾಗಿ ಒಳ ನುಗ್ಗುವ ಮಟ್ಟಕ್ಕೆ ದೇಶ ತಲುಪಿರುವುದು ದೊಡ್ಡ ದುರಂತ. ರಫೇಲ್ ಹಗರಣದ ಬಗ್ಗೆ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದ್ದು, ಕೆಲವೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಸಹ ನಡೆಯಲಿರುವುದರಿಂದ ಈ ದಾಳಿಯ ಬಗ್ಗೆ ಜನರಲ್ಲಿ ಹಲವು ಸಂಶಯಗಳು ಕಾಡತೊಡಗಿದೆ. ಈ ದಾಳಿಯ ಬಗ್ಗೆ ಸರಕಾರ ಸಮಗ್ರ ತನಿಖೆ ನಡೆಸಬೇಕು. ಆಳುವ ವರ್ಗ ದೇಶದೊಳಗೆ ಜಾತಿ, ಧರ್ಮದ ಹೆಸರಿನಲ್ಲಿ ಸಂಘರ್ಷಗಳನ್ನು ಮಾಡುವುದನ್ನು ಬಿಟ್ಟು ದೇಶದಲ್ಲಿರುವ ಎಲ್ಲಾ ಜನಾಂಗವನ್ನು ಒಟ್ಟುಗೂಡಿಸಲು ಮುಂದಾಗಬೇಕು. ಭಯೋತ್ಪಾದಕರನ್ನು ಹಾಗೂ ಶತ್ರು ಸೈನ್ಯವನ್ನು ಬಗ್ಗು ಬಡಿಯಲು ಇರುವ ವ್ಯವಸ್ಥೆಯನ್ನು ಸರಕಾರ ಮಾಡಬೇಕೆಂದರು.

ಸಾಮಾಜಿಕ ಕಾರ್ಯಕರ್ತ ಎ.ಎಸ್ ಮುಸ್ತಫ, ದೇಶದ ಯೋಧರ ಮೇಲೆ ನಡೆದಿರುವ ದಾಳಿ ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದಿರುವ ದಾಳಿಯಾಗಿದೆ. ಹುತಾತ್ಮ ಯೋಧರ ಕುಟುಂಬಕ್ಕೆ ಸ್ಥೈರ್ಯ ತುಂಬಲು ಪ್ರತಿಯೊಬ್ಬರೂ ಮುಂದಾಗಬೇಕಾಗಿದೆ ಎಂದರು.

ಈ ಸಂದರ್ಭ ಯುನೈಟೆಡ್ ಮುಸ್ಲಿಂ ಸಂಘಟನೆಯ ಅಧ್ಯಕ್ಷ ಕೆ.ಯು ಮಜೀದ್, ತಾ.ಪಂ ಸದಸ್ಯೆ ಚಿನ್ನಮ್ಮ, ಪ್ರಮುಖರಾದ ಕೆ.ಎ ಅಸ್ಕರ್, ಎಂ.ಎಸ್ ಶಾಹಿನುಲ್ಲಾ, ಶೌಕತ್ ಅಲಿ, ಪ್ರೇಮ, ಬಶೀರ್, ಅಶ್ರಫ್, ಅಬ್ದುಲ್ ಶುಕೂರ್, ಎನ್.ಡಿ ಕುಟ್ಟಪ್ಪ, ಮುಹಮ್ಮದ್, ಮೂಸಾ, ಮಹದೇವ, ಪ್ರತೀಶ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X