Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 'ಉಗ್ರರ ದಾಳಿ ಬಳಿಕ ನಕ್ಕ ಪ್ರಿಯಾಂಕಾ':...

'ಉಗ್ರರ ದಾಳಿ ಬಳಿಕ ನಕ್ಕ ಪ್ರಿಯಾಂಕಾ': ಶ್ರದ್ಧಾಂಜಲಿಯ ವಿಡಿಯೊ ತಿರುಚಿ ಅಪಪ್ರಚಾರ ಮಾಡಿದ ಅಂಕುರ್ ಸಿಂಗ್

ಈತನನ್ನು ಪ್ರಧಾನಿಯೇ ಫಾಲೋ ಮಾಡುತ್ತಿದ್ದಾರೆ!

ವಾರ್ತಾಭಾರತಿವಾರ್ತಾಭಾರತಿ15 Feb 2019 10:57 PM IST
share
ಉಗ್ರರ ದಾಳಿ ಬಳಿಕ ನಕ್ಕ ಪ್ರಿಯಾಂಕಾ: ಶ್ರದ್ಧಾಂಜಲಿಯ ವಿಡಿಯೊ ತಿರುಚಿ ಅಪಪ್ರಚಾರ ಮಾಡಿದ ಅಂಕುರ್ ಸಿಂಗ್

"ಪತ್ರಿಕಾಗೋಷ್ಠಿಯಲ್ಲಿ ನಕ್ಕ ಪ್ರಿಯಾಂಕಾ ಗಾಂಧಿ, ಇಂಥ ರಣಹದ್ದುಗಳು".. ಇದು ಅಂಕುರ್ ಸಿಂಗ್ ಎಂಬ ಟ್ವಿಟರ್ ಬಳಕೆದಾರ, 40 ಮಂದಿ ಸಿಆರ್ ಪಿಎಫ್ ಸೈನಿಕರನ್ನು ಬಲಿ ತೆಗೆದುಕೊಂಡ ಪುಲ್ವಾಮಾ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಮಾಡಿದ ಟ್ವೀಟ್. 11 ಸೆಕೆಂಡ್‍ನ ವಿಡಿಯೊವನ್ನು ಈ ಟ್ವೀಟ್ ಜತೆಗೆ ಲಗತ್ತಿಸಲಾಗಿತ್ತು. ಇದರಲ್ಲಿ ಪ್ರಿಯಾಂಕಾ ಗಾಂಧಿಯವರು ಎದ್ದು ನಿಂತು ‘ಬಹುತ್ ಬಹುತ್ ಧನ್ಯವಾದ್’ ಎಂದು ಹೇಳುತ್ತಿರುವುದು ಕಾಣಿಸುತ್ತಿದೆ.

ವಾಸ್ತವ ಏನು?

ಅಂಕುರ್ ಸಿಂಗ್ ಪೋಸ್ಟ್ ಮಾಡಿದ ವಿಡಿಯೊ ತುಣುಕು, ಪ್ರಿಯಾಂಕಾ ಗಾಂಧಿಯವರು ಮೃತ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದ ಸುದ್ದಿಗೋಷ್ಠಿಯ ಧೀರ್ಘ ಅವಧಿಯ ವಿಡಿಯೊದ ಸಣ್ಣ ತುಣುಕು. "ನಿಮಗೆಲ್ಲರಿಗೂ ತಿಳಿದಿರುವಂತೆ, ಈ ಪತ್ರಿಕಾಗೋಷ್ಠಿಯನ್ನು ಕೆಲ ನಿರ್ದಿಷ್ಟ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸುವ ಸಲುವಾಗಿ ಕರೆಯಲಾಗಿತ್ತು. ಆದಾಗ್ಯೂ, ನಮ್ಮ ಸೈನಿಕರು ಹುತಾತ್ಮರಾಗಲು ಕಾರಣವಾದ ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ರಾಜಕೀಯ ವಿಚಾರಗಳನ್ನು ಚರ್ಚಿಸುವುದು ಸೂಕ್ತವಲ್ಲ" ಎಂದು ಹೇಳುವ ಮೂಲಕ ಪತ್ರಿಕಾಗೋಷ್ಠಿ ಆರಂಭಿಸಿದ್ದರು.

ಮೃತ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸುವ ಸಂದರ್ಭದಲ್ಲಿ ಅವರು, "ಈ ಸಂಕಟದ ಸಮಯದಲ್ಲಿ ಇಡೀ ದೇಶ ನಿಮ್ಮೊಂದಿಗೆ ಇದೆ ಎಂದು ಅವರ ಕುಟುಂಬಗಳಿಗೆ ಹೇಳಬಯಸುತ್ತೇನೆ" ಎಂದು ಹೇಳಿದರು. ಎಲ್ಲ ಪ್ರೇಕ್ಷಕರಿಗೆ ಧನ್ಯವಾದ ಹೇಳುವ ಮೂಲಕ ಈ ಚುಟುಕು ಗೋಷ್ಠಿಯನ್ನು ಸಮಾಪ್ತಿಗೊಳಿಸಿದ್ದರು. ಜತೆಗೆ ಈ ದುರಂತದ ಸಂದರ್ಭದಲ್ಲಿ ಎರಡು ನಿಮಿಷ ಮೌನ ಆಚರಿಸುವಂತೆ ಕೋರಿದ್ದರು.

ಈ ವಿಡಿಯೊವನ್ನು ಸಮಗ್ರವಾಗಿ ವೀಕ್ಷಿಸಿದಾಗ, ಪ್ರಿಯಾಂಕಾ ಯಾವ ಹಂತದಲ್ಲೂ ನಗುತ್ತಿರುವುದು ಕಾಣುವುದಿಲ್ಲ. ಆದರೆ ತಪ್ಪು ಕಲ್ಪನೆ ಮರುವಂತೆ ಮಾಡಲು ವಿಡಿಯೊ ತಿದ್ದಲಾಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ.

ಅಂಕುರ್ ಸಿಂಗ್ ಅವರನ್ನು ಟ್ವಿಟರ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿದ್ದಾರೆ. ಮಿರರ್ ನೌನಲ್ಲಿ ನಡೆದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಅವರು ಇತ್ತೀಚೆಗೆ ತಾಂತ್ರಿಕ ತಜ್ಞರಾಗಿ ಭಾಗವಹಿಸಿದ್ದರು. ಇವರ ಟ್ವಿಟರ್ ಖಾತೆಯನ್ನು ಇತ್ತೀಚೆಗೆ ಅಮಾನತುಗೊಳಿಸಿ ಬಳಿಕ ಅಮಾನತು ವಾಪಸ್ ಪಡೆಯಲಾಗಿತ್ತು.

ಪುಲ್ವಾಮಾದಲ್ಲಿ ನಡೆದ ದುರದೃಷ್ಟಕರ ಘಟನೆಯ ಹಿನ್ನೆಲೆಯಲ್ಲಿ ಪ್ರಿಯಾಂಕಾಗಾಂಧಿ ಪತ್ರಿಕಾಗೋಷ್ಠಿ ರದ್ದುಪಡಿಸಿರುವುದನ್ನು ಹಲವು ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದವು.

ಸಿಆರ್‍ ಪಿಎಫ್ ಯೋಧರ ಸಾವು ರಾಷ್ಟ್ರೀಯ ದುರಂತ. ಇಂಥ ಸಮಯದಲ್ಲಿ, ಸಾಮಾಜಿಕ ಜಾಲತಾಣ ಬಳಕೆದಾರರು ತಿದ್ದಿದ ವಿಡಿಯೊ ಪೋಸ್ಟ್‍ಮಾಡುವ ಮೂಲಕ ಈ ದುರಂತವನ್ನು ಕೂಡಾ ರಾಜಕೀಯಗೊಳಿಸಲು ಪ್ರಯತ್ನಿಸುತ್ತಿರುವುದು ತೀರಾ ದುರದೃಷ್ಟಕರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X