Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೋಟು ನಾಪತ್ತೆ ಪ್ರಕರಣ: ತನಿಖೆಗಾಗಿ...

ಬೋಟು ನಾಪತ್ತೆ ಪ್ರಕರಣ: ತನಿಖೆಗಾಗಿ ವಿಶೇಷ ಸಮಿತಿ; ಎಸ್ಪಿ ಜೊತೆ ಮೀನುಗಾರರ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ16 Feb 2019 9:56 PM IST
share
ಬೋಟು ನಾಪತ್ತೆ ಪ್ರಕರಣ: ತನಿಖೆಗಾಗಿ ವಿಶೇಷ ಸಮಿತಿ; ಎಸ್ಪಿ ಜೊತೆ ಮೀನುಗಾರರ ಮಾತುಕತೆ

ಉಡುಪಿ, ಫೆ.16: ಕಳೆದ 63 ದಿನಗಳಿಂದ ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟು ಸೇರಿದಂತೆ ಏಳು ಮಂದಿ ಮೀನುಗಾರರ ಶೋಧ ಕಾರ್ಯಾ ಚರಣೆಗೆ ಸಂಬಂಧಿಸಿ ನೌಕಪಡೆ ಎಲ್ಲ ಮಾಹಿತಿಯನ್ನು ಗೌಪ್ಯವಾಗಿರಿಸುವುದ ರಿಂದ ಕೇಂದ್ರ ರಕ್ಷಣಾ ಸಚಿವರು ನೌಕಪಡೆ, ಕೋಸ್ಟಲ್ ಗಾರ್ಡ್, ಪೊಲೀಸರು ಹಾಗೂ ಮೀನುಗಾರರನ್ನೊಳಗೊಂಡ ಸಮಿತಿಯನ್ನು ರಚಿಸಿ ಆ ಮೂಲಕ ತನಿಖೆ ನಡೆಸುವಂತೆ ಎಸ್ಪಿ ಜೊತೆ ಮಾತುಕತೆ ಸಂದರ್ಭದಲ್ಲಿ ಒತ್ತಾಯಿಸಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಇಂದು ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಜೊತೆ ಸುವರ್ಣ ತ್ರಿಭುಜ ಬೋಟಿಗೆ ಸಂಬಂಧಿಸಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಮುಖಂಡರು ಮತ್ತು ನಾಪತ್ತೆಯಾದ ವರ ಕುಟುಂಬದವರು ನಡೆಸಿದ ಮಾತುಕತೆಯ ಬಳಿಕ ಅವರು ಮಾಧ್ಯಮದ ರಿಗೆ ಈ ಕುರಿತು ವಿವರ ನೀಡಿದರು.

ನೌಕಪಡೆಯ ಐಎನ್‌ಎಸ್ ಕೊಚ್ಚಿ ಹಡಗು ಢಿಕ್ಕಿ ಹೊಡೆದ ಪರಿಣಾಮವೇ ಸುವರ್ಣ ತ್ರಿಭುಜ ಬೋಟು ಹಾನಿಗೊಂಡು ಸಮುದ್ರದಲ್ಲಿ ಮುಳುಗಿದೆ ಎಂಬುದು ನಮ್ಮ ಬಲವಾದ ಶಂಕೆಯಾಗಿದೆ. ಆದರೆ ಈ ವಿಚಾರವನ್ನು ನೌಕಪಡೆ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ಮೀನುಗಾರರಿಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ ಎಂದು ಅವರು ಆರೋಪಿಸಿದರು.

ಬೋಟಿನ ಶೋಧ ಕಾರ್ಯಾಚರಣೆ ನಮ್ಮ ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಬಾರದಿರುವುದರಿಂದ ರಾಜ್ಯ ಸರಕಾರದ ಮೂಲಕ ಕೇಂದ್ರ ಸರಕಾರಕ್ಕೆ ಒತ್ತಡ ಹೇರಿ ನೌಕಪಡೆ, ಕೋಸ್ಟಲ್‌ಗಾರ್ಡ್, ಪೊಲೀಸರು ಹಾಗೂ ಮೀನುಗಾರರ ಸಮಿತಿ ರಚಿಸುವಂತೆ ರಕ್ಷಣಾ ಸಚಿವರನ್ನು ಒತ್ತಾಯಿಸಲಾಗುವುದು. ಇಂದು ನಡೆದ ಸಭೆಯಲ್ಲಿ ಎಸ್ಪಿ ಜೊತೆ ಚರ್ಚಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳ ಲಾಗಿದೆ ಎಂದು ಅವರು ಹೇಳಿದರು.

ನೌಕ ಹಡಗಿನ ಹಾನಿಗೆ ಕಾರಣ ?

ಡಿ.15ರಂದು ನಸುಕಿನ ವೇಳೆ 2ಗಂಟೆಯಿಂದ ಆರು ಗಂಟೆಯ ಮಧ್ಯಾವಧಿ ಯಲ್ಲಿ ಸುವರ್ಣ ತ್ರಿಭುಜ ಬೋಟು ನಾಪತ್ತೆಯಾಗಿದ್ದರೆ, ಅದೇ ಸಮಯದಲ್ಲಿ ನೌಕಪಡೆಯ ಐಎನ್‌ಎಸ್ ಕೊಚ್ಚಿ ಹಡಗು ಮುಂಬೈಯಿಂದ ಕಾರವಾರಕ್ಕೆ ತೆರಳು ತ್ತಿತ್ತು. ನಂತರ ಈ ಹಡಗಿನ ಅಡಿಭಾಗಕ್ಕೆ ಹಾನಿಯಾಗಿರುವುದು ಕಂಡು ಬಂದಿತ್ತು. ಸುವರ್ಣ ತ್ರಿಭುಜ ಬೋಟು ನಾಪತ್ತೆಯಾಗಿರುವುದು ಮತ್ತು ನೌಕಪಡೆಯ ಹಡಗಿನ ಅಡಿಭಾಗಕ್ಕೆ ಹಾನಿಯಾಗಿರುವುದು ಎರಡು ಸಮಯ ಕೂಡ ಒಂದೇ ಆಗಿರುವುದರಿಂದ ಸುವರ್ಣ ತ್ರಿಭುಜ ಬೋಟಿಗೆ ನೌಕಪಡೆಯ ಹಡಗು ಢಿಕ್ಕಿ ಹೊಡೆದಿರುವ ಸಂಶಯ ವ್ಯಕ್ತವಾಗಿತ್ತು ಎಂದು ಸತೀಶ್ ಕುಂದರ್ ತಿಳಿಸಿದರು.

ಈ ಹಿನ್ನೆಲೆಯಲ್ಲಿ ದುರಂತ ಸಂಭವಿಸರಬಹುದೆಂದು ಶಂಕಿಸಲಾದ ಸಮುದ್ರ ದಲ್ಲಿ ನೌಕಪಡೆಯ ಸಟ್ಲೇಜ್ ಹಾಗೂ ನಿರೀಕ್ಷಕ್ ಎಂಬ ಎರಡು ಹಡಗಿನ ಮೂಲಕ ಹುಡುಕಾಟ ಆರಂಭಿಸಲಾಯಿತು. ಈ ವೇಳೆ ಸಮುದ್ರದ ಆಳದಲ್ಲಿ 21.5 ಮೀಟರ್ ಉದ್ದದ ರೆಕ್ಕೆಯ ಭಾಗವೊಂದು ಗೋಚರಿಸಿತ್ತು. ಇತ್ತೀಚೆಗೆ ಬಂದ ಮಾಹಿತಿಯಂತೆ ಆಳದಲ್ಲಿ ಕಂಡುಬಂದಿರುವುದು ಬೋಟು ಅಲ್ಲ, ಕಲ್ಲು ಬಂಡೆ ಎಂಬುದು ಎಸ್ಪಿ ಮೂಲಕ ನಮಗೆ ತಿಳಿಯಿತು ಎಂದರು.

ಆಳದಲ್ಲಿ ಕಂಡುಬಂದಿರುವುದು ಕಲ್ಲು ಬಂಡೆಯಾದರೆ ನೌಕಪಡೆಯ ಹಡಗಿನ ಅಡಿ ಭಾಗಕ್ಕೆ ಹಾನಿಯಾಗಲು ಏನು ಕಾರಣ ಎಂಬುದು ನಮ್ಮ ಪ್ರಶ್ನೆ ಯಾಗಿದೆ. ಇದರಲ್ಲಿ ಮುಚ್ಚಿಡುವ ಕೆಲಸಗಳು ನೌಕಪಡೆಯಿಂದ ನಡೆಯುತ್ತಿದೆ. ಇದನ್ನು ತಿಳಿದುಕೊಳ್ಳಲು ಮೀನುಗಾರರ ನಿಯೋಗ ಎಸ್ಪಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಮಲ್ಪೆ ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಕಿಶೋರ್ ಡಿ.ಸುವರ್ಣ, ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಕೆ.ಗೋಪಾಲ್, ಮುಖಂಡರಾದ ಕರುಣಾಕರ ಕೊಳ, ಸಂತೋಷ್ ಸಾಲ್ಯಾನ್, ನಾಪತ್ತೆಯಾಗಿ ರುವ ಚಂದ್ರಶೇಖರ್ ಕೋಟ್ಯಾನ್‌ರ ಸಹೋದರ ನಿತ್ಯಾನಂದ, ದಾಮೋದರ್ ಸಾಲ್ಯಾನ್‌ರ ಸಹೋದರ ಪ್ರಮೋದ್ ಸಾಲ್ಯಾನ್, ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮುಖಂಡರಾದ ಉಮಾಕಾಂತ್ ಕುಮಟಾ, ಗೋವಿಂದ ಹರಿ ಕಾಂತ್‌ಸ, ಮಂಜುನಾಥ್ ಹರಿಕಾಂತ್, ನಾಪತ್ತೆಯಾದ ಲಕ್ಷ್ಮಣ್ ತಮ್ಮ ಗೋವಿಂದ, ರವಿ ತಮ್ಮ ಅಣ್ಣಪ್ಪ ಹರಿಕಾಂತ್, ಹರೀಶ್ ಮಾವ ವಾಸು ಮೊಗೇರ ಮೊದಲಾದವರು ಉಪಸ್ಥಿತರಿದ್ದರು.

ನೌಕನೆಲೆಗೆ ಮುತ್ತಿಗೆ ಎಚ್ಚರಿಕೆ

ಎರಡು ತಿಂಗಳು ಕಳೆದರೂ ಸುವರ್ಣ ತ್ರಿಭುಜ ಬೋಟಿನ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಇದರಲ್ಲಿ ನಮಗೆ ನ್ಯಾಯ ಸಿಗದಿದ್ದರೆ ಕಾರವಾರ ದಲ್ಲಿರುವ ನೌಕಪಡೆಯ ಕದಂಬ ನೌಕನೆಲೆಗೆ ಮೀನುಗಾರರು ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಮತ್ತು ಅದೇ ರೀತಿ ರಾಜ್ಯ ಸರಕಾರ ಸ್ಪಂದಿಸದಿದ್ದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುವ ಕುರಿತು ನಿರ್ಧರಿಸ ಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.

''ನಾಪತ್ತೆಯಾದ ಮೀನುಗಾರರ ಬಗ್ಗೆ ಯಾವುದೇ ಮಾಹಿತಿಗಳು ಸಿಗುತ್ತಿಲ್ಲ. ಈ ಮೂಲಕ ಸರಕಾರಗಳು ಮೀನುಗಾರರ ಸಮಾಜವನ್ನು ಕಡೆಗಣಿಸುತ್ತಿದೆ. ತಂತ್ರಜ್ಞಾನ ಮುಂದುವರೆದರೂ ಮೀನುಗಾರರು ಎಲ್ಲಿದ್ದಾರೆ ಹೇಗಿದ್ದಾರೆ ಎಂಬ ಕುರುಹುಗಳು ಪತ್ತೆಯಾಗದಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿ ಯಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾದರೆ ಮೀನು ಗಾರರು ಹೇಗೆ ಬದುಕಬೇಕು. ನಾಪತ್ತೆಯಾದವರನ್ನು ಶೀಘ್ರವೇ ಹುಡುಕಿ ಕೊಡಿ ಎಂದು ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಮೇಲೆ ಒತ್ತಡ ಹೇರುವ ಕೆಲಸ ಮಾಡಲಾಗುವುದು''.
- ಮಂಜುನಾಥ್ ಹರಿಕಾಂತ್ ಅಂಕೋಲ, ಮೀನುಗಾರ ಮುಖಂಡ, ಉತ್ತರ ಕನ್ನಡ ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X