Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಯೋತ್ಪಾದನೆ ಖಂಡಿಸಿ ಫೆ.19ಕ್ಕೆ...

ಭಯೋತ್ಪಾದನೆ ಖಂಡಿಸಿ ಫೆ.19ಕ್ಕೆ ರಾಜ್ಯಾದ್ಯಂತ ಬಂದ್‌ಗೆ ಕನ್ನಡ ಒಕ್ಕೂಟ ಕರೆ

ವಾರ್ತಾಭಾರತಿವಾರ್ತಾಭಾರತಿ16 Feb 2019 10:33 PM IST
share

ಬೆಂಗಳೂರು, ಫೆ.16: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳ ಮೇಲೆ ನಡೆಸಿದ ಆತ್ಮಹತ್ಯಾ ದಾಳಿಯನ್ನು ಖಂಡಿಸಿ ಮತ್ತು ಭಯೋತ್ಪಾದನೆ ನಿರ್ಮೂಲನೆಗೆ ಆಗ್ರಹಿಸಿ ಫೆ.19ರಂದು ಕನ್ನಡಪರ ಸಂಘಟನೆಗಳ ಒಕ್ಕೂಟ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂದ ಅಧ್ಯಕ್ಷ ವಾಟಾಳ್ ನಾಗರಾಜ್, ಯೋಧರ ಮೇಲೆ ನಡೆದಿರುವ ದಾಳಿಯನ್ನು ಇಡೀ ದೇಶವೇ ಖಂಡಿಸುತ್ತದೆ. ಈ ಆತ್ಮಹತ್ಯೆ ದಾಳಿ ಕೇಂದ್ರ ಸರಕಾರಕ್ಕೆ ಸವಾಲಾಗಿದೆ. ಭಾರತ ಮನಸ್ಸು ಮಾಡಿದರೆ ಭಯೋತ್ಪಾದನೆಯ ಸಂಘಟನೆಗಳು ಪುಡಿ-ಪುಡಿಯಾಗುತ್ತವೆ. ಆದರೆ, ದೇಶ ಹಾಗೂ ಸೈನ್ಯ ವಿಶ್ವ ಸಮುದಾಯಕ್ಕೆ ಬೆಲೆ ಕೊಡುತ್ತಿದೆ ಎಂದು ಹೇಳಿದರು.

ಭಯೋತ್ಪಾದನೆ ಮಾನವ ಕುಲದ ಅಪಾಯದ ಸಂಕೇತ. ಹೆಚ್ಚು ಬೆಳೆಯೋಕೆ ಬಿಡಬಾರದು. ಹೀಗಾಗಿ, ಪ್ರಧಾನಿ ಮಂತ್ರಿಯವರ ಸೈನಿಕರ ಹತ್ಯೆಯ ಪ್ರತೀಕಾರದ ಮಾತನ್ನು ಸ್ವಾಗತಿಸುತ್ತೇನೆ. ಪ್ರತೀಕಾರದ ನಡೆ ಸರಿಯಾಗಿದೆ. ಇಡೀ ದೇಶ ಪ್ರತೀಕಾರಕ್ಕೆ ಕಾತರಿಸುತ್ತಿದ್ದು, ಪಾಕಿಸ್ತಾನ ಜೈಶೆ ಮುಹಮ್ಮದ್ ಸಂಘಟನೆಗೆ ನೇರವಾಗಿ ಸಹಾಯ ಮಾಡುತ್ತಿದೆ. ಈ ಮೂಲಕ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪ ಮಾಡಿದರು.

ಯುದ್ಧದಿಂದ ಅಪಾರ ಆಸ್ತಿ-ಪಾಸ್ತಿ ನಷ್ಟವಾಗುತ್ತದೆ, ಸಾವು-ನೋವುಗಳಾಗುತ್ತವೆ. ಮತ್ತಷ್ಟು ಸೈನಿಕರು ಸಾಯುತ್ತಾರೆ. ಅಲ್ಲದೆ, ಅವರ ಮಡದಿಯರು, ಮಕ್ಕಳು ಅನಾಥರಾಗುತ್ತಾರೆ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭಯೋತ್ಪಾದನೆಗೆ ನೆರವು ನೀಡುತ್ತಿರುವವರನ್ನು ಮಟ್ಟ ಹಾಕಬೇಕು. ಉಗ್ರ ಸಂಘಟನೆಗಳನ್ನು ನಾಶ ಮಾಡಲು ಇಡೀ ವಿಶ್ವ ಸಮುದಾಯವೇ ಒಂದಾಗಬೇಕು. ಆದರೆ, ಹಲವು ರಾಷ್ಟ್ರಗಳು ಭಾರತಕ್ಕೆ ಸಾಂತ್ವನ ನೀಡುತ್ತಿರುವಾಗ, ಕೆಲವು ರಾಷ್ಟ್ರಗಳು ಭಾರತಕ್ಕೆ ಬೆಂಬಲ ಸೂಚಿಸದೇ ವೌನವಾಗಿರುವುದು ವಿಷಾದನೀಯ ಎಂದರು.

ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಸರಕಾರಿ ಬಸ್‌ಗಳು, ಖಾಸಗಿ ವಾಹನಗಳು, ಹೊಟೇಲ್, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರಕಾರಿ ಶಾಲಾ ಕಾಲೇಜ್, ಸಿನೆಮಾ ಮಂದಿರ, ಬಿಡಿಎ, ಬಿಬಿಎಂಪಿ ಎಲ್ಲ ಕಾರ್ಖಾನೆಗಳು, ಐಟಿ-ಬಿಟಿ ಬಂದ್ ಮಾಡಬೇಕು. ಆದರೆ, ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಎಲ್ಲ ಶಾಂತಿ ಸುವ್ಯವಸ್ಥೆಯಿಂದ ಇರಬೇಕು ಎಂದರು.

ಸಿಆರ್‌ಪಿಎಫ್ ಬೆಂಗಾವಲು ವಾಹನಗಳ ಮೇಲೆ ಆತ್ಮಹತ್ಯೆ ದಾಳಿ ನಡೆದಿರುವುದು ಗುಪ್ತಚಾರ ಇಲಾಖೆಯ ವೈಫಲ್ಯ. ಅಲ್ಲದೆ, ಚೀನಾದವರು ಜೈಶೆ ಮುಹಮ್ಮದ್ ಸಂಘಟನೆಯ ಬಗ್ಗೆ ಮೃಧು ಧೋರಣೆ ತೋರುತ್ತಿರುವುದು ಸರಿಯಲ್ಲ.

-ವಾಟಾಳ್ ನಾಗರಾಜ್, ಕನ್ನಡ ಒಕ್ಕೂಟದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X