Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗಪ್ಟಿಲ್ ಶತಕ: ಎರಡನೇ ಏಕದಿನದಲ್ಲಿ...

ಗಪ್ಟಿಲ್ ಶತಕ: ಎರಡನೇ ಏಕದಿನದಲ್ಲಿ ಗೆಲುವು

ಸರಣಿ ವಶಪಡಿಸಿಕೊಂಡ ಕಿವೀಸ್ ಪಡೆ

ವಾರ್ತಾಭಾರತಿವಾರ್ತಾಭಾರತಿ16 Feb 2019 11:32 PM IST
share
ಗಪ್ಟಿಲ್ ಶತಕ: ಎರಡನೇ ಏಕದಿನದಲ್ಲಿ ಗೆಲುವು

ಕ್ರೈಸ್ಟ್‌ಚರ್ಚ್, ಫೆ.16: ಉತ್ಸಾಹಿತ ಮಾರ್ಟಿನ್ ಗಪ್ಟಿಲ್ ಅವರ ಸೊಗಸಾದ ಶತಕದ ನೆರವಿನಿಂದ ನ್ಯೂಝಿಲೆಂಡ್ ತಂಡ ಬಾಂಗ್ಲಾವನ್ನು ಎರಡನೇ ಏಕದಿನ ಪಂದ್ಯದಲ್ಲಿ ಶನಿವಾರ 8 ವಿಕೆಟ್‌ಗಳಿಂದ ಮಣಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 2-0 ಯಿಂದ ಮುನ್ನಡೆ ಗಳಿಸಿ ಸರಣಿ ಜಯಿಸಿದೆ.

ತಮ್ಮ 16ನೇ ಶತಕ ಬಾರಿಸಿ ಸಂಭ್ರಮಿಸಿದ ಗಪ್ಟಿಲ್(118) ಇನ್ನೂ 13.5 ಓವರ್‌ಗಳು ಬಾಕಿ ಇರುವಂತೆಯೇ ಕಿವೀಸ್ ಗೆ ಬಾಂಗ್ಲಾ ನೀಡಿದ 227 ರನ್ ಗುರಿಯನ್ನು ತಲುಪುವಂತೆ ಮಾಡಿದರು. ಆತಿಥೇಯರು ಕೇವಲ 2 ವಿಕೆಟ್ ಕಳೆದುಕೊಂಡರು.

ಇತ್ತೀಚೆಗೆ ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ರನ್ ಗಳಿಸಲು ಭಾರೀ ಪರದಾಟ ನಡೆಸಿದ್ದ ಗಪ್ಟಿಲ್, ಈ ಪಂದ್ಯದಲ್ಲಿ ತಾನೆದುರಿಸಿದ 88 ಎಸೆತಗಳಲ್ಲಿ 14 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ಸಿಡಿಸಿದರು. ಕಿವೀಸ್ ಪರ ನಾಯಕ ಕೇನ್ ವಿಲಿಯಮ್ಸನ್ ಅರ್ಧಶತಕ (ಅಜೇಯ 65) ಸಿಡಿಸಿ ಗೆಲುವನ್ನು ಸುಲಭವಾಗಿಸಿದರು.

ಬಾಂಗ್ಲಾ ಪರ ಮುಸ್ತಫಿಝುರ್ರಹ್ಮಾನ್ ನ್ಯೂಝಿಲೆಂಡ್ ಕಳೆದುಕೊಂಡ ಎರಡೂ ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಯಲ್ಪಟ್ಟ ಪ್ರವಾಸಿ ಬಾಂಗ್ಲಾ ತಂಡಕ್ಕೆ ಮುಹಮ್ಮದ್ ಮಿಥುನ್ ಅರ್ಧಶತಕ (57) ಬಾರಿಸಿ ಸ್ಪರ್ಧಾತ್ಮಕ ಮೊತ್ತ ಜಮೆ ಮಾಡಲು ನೆರವಾದರು. ಅವರಿಗೆ ಉತ್ತಮ ಸಾಥ್ ನೀಡಿದ ಶಬ್ಬೀರ್ರಹ್ಮಾನ್(43), ವಿಕೆಟ್ ಕೀಪರ್ ದಾಂಡಿಗ ಮುಶ್ಫಿಕುರ್ರಹೀಮ್(24) ಉತ್ತಮ ಆಟವಾಡಿದರು. 49.4 ಓವರ್‌ಗಳಲ್ಲಿ ಬಾಂಗ್ಲಾ 226 ರನ್ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕಿವೀಸ್ ಪರ ಲಾಕಿ ಫರ್ಗ್ಯುಸನ್ (43ಕ್ಕೆ 3) ಬೌಲಿಂಗ್‌ನಲ್ಲಿ ಮಿಂಚಿದರು. ಟಾಡ್ ಆ್ಯಸ್ಲೆ (52ಕ್ಕೆ 2) ಹಾಗೂ ನೀಶಾಮ್(21ಕ್ಕೆ 2) ಬಾಂಗ್ಲಾ ಪತನಕ್ಕೆ ಕಾರಣರಾದರು. ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಮುಂದಿನ ಬುಧವಾರ ಡ್ಯುನೆಡಿನ್‌ನಲ್ಲಿ ನಡೆಯಲಿದೆ. ಅದಾದ ಬಳಿಕ ಉಭಯ ತಂಡಗಳ ಮಧ್ಯೆ ಟೆಸ್ಟ್ ಸರಣಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X