Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾವೇರಿ ಒಡಲು ಸೇರುತ್ತಿದೆ ಕಾಫಿ...

ಕಾವೇರಿ ಒಡಲು ಸೇರುತ್ತಿದೆ ಕಾಫಿ ಪಲ್ಪಿಂಗ್ ತ್ಯಾಜ್ಯ !

ಕಣ್ಣುಮುಚ್ಚಿ ಕುಳಿತ ಗ್ರಾಮ ಪಂಚಾಯತ್ ?

ಮುಸ್ತಫಾ ಸಿದ್ದಾಪುರಮುಸ್ತಫಾ ಸಿದ್ದಾಪುರ16 Feb 2019 11:42 PM IST
share
ಕಾವೇರಿ ಒಡಲು ಸೇರುತ್ತಿದೆ ಕಾಫಿ ಪಲ್ಪಿಂಗ್ ತ್ಯಾಜ್ಯ !

ಸಿದ್ದಾಪುರ (ಕೊಡಗು), ಫೆ.16: ರಾಜ್ಯದ ಪ್ರಮುಖ ನದಿಗಳಲ್ಲಿ ಒಂದಾಗಿರುವ ಕಾವೇರಿ ನದಿ ನೀರು ದಿನದಿಂದ ದಿನಕ್ಕೆ ತನ್ನ ಪಾವಿತ್ರವನ್ನು ಕಳೆದುಕೊಳ್ಳುತ್ತಿದೆ. ಕೊಳೆತ ತ್ಯಾಜ್ಯಗಳನ್ನು ನದಿ ನೀರಿಗೆ ನೇರವಾಗಿ ಸುರಿಯುವುದು, ಶೌಚಾಲಯದ ನೀರನ್ನು ನದಿಗೆ ಹರಿಯ ಬಿಡುವುದು ಒಂದೆಡೆಯಾದರೆ, ಕಾಫಿ ಪಲ್ಪಿಂಗ್ ತ್ಯಾಜ್ಯ ನೀರನ್ನು ಹಾಡಹಗಲೆ ಸಾರ್ವಜನಿಕರಿಗೆ ಗೋಚರಿಸುವಂತೆ ಕಳೆದ ಹಲವು ದಿನಗಳಿಂದ ನದಿಗೆ ಹರಿಯ ಬಿಡುತ್ತಿರುವದರಿಂದ ನದಿ ನೀರು ಕಲುಷಿತ ಗೊಳ್ಳುತ್ತಿದ್ದು, ಸಾರ್ವಜನಿಕರ ಆರೋಗ್ಯದಲ್ಲೂ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.

ಕಾಫಿ ಪಲ್ಪಿಂಗ್ ತ್ಯಾಜ್ಯ ನೀರು ನದಿಗೆ: ಸಮೀಪದ ನೆಲ್ಯಹುದಿಕೇರಿ ಕಾವೇರಿ ಸೇತುವೆ ಪಕ್ಕದಲ್ಲಿ ಗೆದ್ದೆಗೆ ಹೊಂದಿಕೊಂಡಿರುವಂತೆ ಮಳೆ ನೀರು ನದಿಗೆ ಹರಿಯಲು ನಿರ್ಮಿಸಿರುವ ಮೋರಿಯ ಮೂಲಕ ಸಮೀಪದ ಪ್ರಭಾವಿ ವ್ಯಕ್ತಿಯೊಬ್ಬರ ಕಾಫಿ ತೋಟದ ಕಾಫಿ ಪಲ್ಪಿಂಗ್ ನೀರು ನದಿಯ ಒಡಲು ಸೇರುತ್ತಿದೆ. ಇದರಿಂದಾಗಿ ಶುದ್ಧವಾಗಿದ್ದ ಕಾವೇರಿ ಕಪ್ಪು ಬಣ್ಣ ಪಡೆಯುತ್ತಿದೆ. ಅಲ್ಲದೆ ಪರಿಸರವೆಲ್ಲ ದುರ್ನಾತ ಬೀರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಎನ್‌ಜಿಒ ವರದಿ: ನೆಲ್ಯಹುದಿಕೇರಿ ಶಾಲಾ ಮಕ್ಕಳ ಆರೋಗ್ಯದ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ ಪ್ರತಿ ವರ್ಷ ನೆಲ್ಯಹುದಿಕೇರಿ ಕಾವೇರಿ ಸೇತುವೆ ಬಳಿ ನೀರಿನ ಗುಣ ಮಟ್ಟ ಪರಿಶೋಧನೆ ಮಾಡಲು ಜಿಲ್ಲೆಯ ಎನ್‌ಜಿಒ ತಂಡವೊಂದು ಆಗಮಿಸುತ್ತಿದೆ. ಇಲ್ಲಿಯ ನೀರು ವರ್ಷದಿಂದ ವರ್ಷಕ್ಕೆ ವಿಷಯುಕ್ತವಾಗುತ್ತಿದೆ. ಅಲ್ಲದೆ ಸ್ನಾನ ಮಾಡಲೂ ಯೋಗ್ಯವಲ್ಲದ ಮಟ್ಟಕ್ಕೆ ನೀರು ಕಲುಷಿತಗೊಳ್ಳುತ್ತಿರುವ ಅಪಾಯಕಾರಿ ಅಂಶವನ್ನು ತಂಡ ಪತ್ತೆ ಹಚ್ಚಿದೆ.

ರೋಗ ಹರಡುವ ಸಾಧ್ಯತೆ: ಸಿದ್ದಾಪುರ ಮತ್ತು ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಮಧ್ಯದಲ್ಲಿ ಕಾವೇರಿ ಹರಿಯುತ್ತಿದೆ. ಎರಡು ಗ್ರಾ.ಪಂ.ಗಳಿಗೂ ನದಿಯನ್ನು ಸಂರಕ್ಷಿಸುವ ಜವಾಬ್ದಾರಿ ಇದೆ. ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಕೆಲವು ಮನೆಗಳ ಶೌಚಾಲಯದ ಕೊಳಚೆ ನೀರು ಕಳೆದ ಹಲವು ತಿಂಗಳುಗಳಿಂದ ನದಿಗೆ ಹರಿಯುತ್ತಿದ್ದು, ಗ್ರಾ.ಪಂ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದೀಗ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಕಾಫಿ ಪಲ್ಪಿಂಗ್ ನೀರು ನೇರವಾಗಿ ಕಾವೇರಿ ಒಡಲು ಸೇರುತ್ತಿದ್ದು, ಕೂಡಲೇ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳದಿದ್ದರೆ ಸಾರ್ವಜನಿಕರಲ್ಲಿ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.

ಕಾವೇರಿ ಸಂರಕ್ಷಣೆಯ ಸಂಘಟನೆಗಳು ನಾಪತ್ತೆ !
ಕಾವೇರಿ ನದಿ ಸಂರಕ್ಷಣೆಯ ಹೆಸರಿನಲ್ಲಿ ಹಲವು ಸಂಘಟನೆಗಳು ಜಿಲ್ಲೆಯಲ್ಲಿದ್ದು, ಕಾವೇರಿ ನದಿ ಅಪಾಯಕಾರಿಯಾಗಿ ಹರಿಯುತ್ತಿದ್ದರೂ ಇದರ ಬಗ್ಗೆ ಕಾಳಜಿ ವಹಿಸದೆ ಕೇವಲ ಪ್ರಚಾರಕ್ಕಾಗಿ ಒಂದಿಷ್ಟು ಕಸ ಗುಡಿಸಿ ತೆರಳುವಂತಾಗಿದೆ. ಇನ್ನು ನೆಲ್ಯಹುದಿಕೇರಿ ಮತ್ತು ಸಿದ್ದಾಪುರ ಭಾಗದಲ್ಲಿರುವ ನದಿ ಸಂರಕ್ಷಣೆ ಹಾಗೂ ಸ್ವಚ್ಛತೆ ನಮ್ಮ ಧ್ಯೇಯ ಎಂದು ಹೇಳಿಕೊಂಡಿರುವ ಕೆಲವು ಯುವ ಸಂಘಟನೆಗಳ ಕಣ್ಣೆದುರಿಗೆ ಕಾವೇರಿ ಕಲುಷಿತಗೊಳ್ಳುತ್ತಿದ್ದರೂ ಮೌನವಾಗಿರುವುದು ದುರಂತವೇ ಸರಿ.

ಕಾವೇರಿ ನದಿಗೆ ಕಾಫಿ ಪಲ್ಪಿಂಗ್ ತ್ಯಾಜ್ಯ ನೀರು ಹರಿಯ ಬಿಡುತ್ತಿರುವುದರ ಬಗ್ಗೆ ಪಂಚಾಯತ್‌ನ ಗಮನಕ್ಕೆ ಬಂದಿದ್ದು, ತಕ್ಷಣದಿಂದ ತ್ಯಾಜ್ಯ ನೀರು ಹರಿಯಬಿಡುತ್ತಿರುವುದನ್ನು ನಿಲ್ಲಿಸಬೇಕೆಂದು ಫೆ. 15 ರಂದು ಕಾಫಿ ತೋಟದ ಮಾಲಕರಿಗೆ ನೋಟಿಸ್ ಜಾರಿಗೊಳಿಸಲಾಗಿತ್ತು. ಆದರೆ, ಮಾಲಕರ ಗೆದ್ದೆಗೆ ನೀರು ಹರಿಯ ಬಿಟ್ಟಿದ್ದು, ನದಿಗೆ ಹರಿಯ ಬಿಡಲಿಲ್ಲ ಎಂದು ಮಾಲಕರು ಹಿಂಬರಹ ನೀಡಿದ್ದಾರೆ. ಪಂಚಾಯತ್‌ನ ನೋಟಿಸ್ ಮೀರಿ ನದಿನೀರಿಗೆ ತ್ಯಾಜ್ಯ ನೀರು ಹರಿಯ ಬಿಡುತ್ತಿದ್ದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

-ವಿಶ್ವನಾಥ್, ಸಿದ್ದಾಪುರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

share
ಮುಸ್ತಫಾ ಸಿದ್ದಾಪುರ
ಮುಸ್ತಫಾ ಸಿದ್ದಾಪುರ
Next Story
X