Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ:...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮಡಿಕೇರಿಯಲ್ಲಿ ಶಿಕ್ಷಕರ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Feb 2019 11:51 PM IST
share
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮಡಿಕೇರಿಯಲ್ಲಿ ಶಿಕ್ಷಕರ ಬೃಹತ್ ಪ್ರತಿಭಟನೆ

ಮಡಿಕೇರಿ, ಫೆ.16: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ನಡೆಸಿದ ಶಿಕ್ಷಕರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಹಲವಾರು ವರ್ಷಗಳಿಂದ ಸರ್ಕಾರಕ್ಕೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದಿದ್ದರೂ ಎಲ್ಲಾ ಸರ್ಕಾರಗಳು ಅವುಗಳನ್ನು ನಿರ್ಲಕ್ಷಿಸುತ್ತಲೆ ಬಂದಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವರ್ಗಾವಣೆ ನೀತಿ ಜಾರಿಯಾಗಿದ್ದರು ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಮಾಡದೆ ಸರ್ಕಾರ ಶಿಕ್ಷಕರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ ಪ್ರಮುಖರು, ಈಗಾಗಲೆ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಕಳೆದ ಮೂರು ವರ್ಷಗಳಿಂದ ನಿರಾಸೆಯಿಂದ ಕಾರ್ಯ ನಿರ್ವಹಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಯೋಜನೆಯನ್ನು ಜಾರಿಗೊಳಿಸಬೇಕು, ಮುಖ್ಯೋಪಾಧ್ಯಾಯರು, ಭಡ್ತಿ ಹೊಂದುವವರಿಗೆ 10, 15, 20 ವರ್ಷಗಳ ಆರ್ಥಿಕ ಸೌಲಭ್ಯವನ್ನು ಒದಗಿಸಬೇಕು. ಸೇವಾ ಜೇಷ್ಠತೆಯನ್ನು ಪರಿಗಣಿಸುವ ಮೂಲಕ ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸಬೇಕು, ಶಿಕ್ಷಕರ ವೇತನ ಆಯೋಗದಲ್ಲಿ 1998 ಮತ್ತು 2003ರಲ್ಲಿ ನೇಮಕಗೊಂಡ ಶಿಕ್ಷಕರಿಗೆ ತಾರತಮ್ಯವಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಪದೋನ್ನತಿ ಪ್ರಕ್ರಿಯೆಯನ್ನು ಮರಳಿ ಆರಂಭಿಸಬೇಕು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರನ್ನು ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸಬೇಕು ಮತ್ತು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲಭಾಷೆಯಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರಕಾರದಿಂದ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ರಾಜ್ಯದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಪ್ರಾಥಮಿಕ ಶಾಲಾ ಶಿಕ್ಷಕರು ವಿಧಾನಸೌಧ ಚಲೋ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಸ್. ಚೇತನ್ ಎಚ್ಚರಿಕೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷೆ ರೇಖಾಕುಮಾರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎ.ವಿ.ಮಂಜುನಾಥ್ ವೀರಾಜಪೇಟೆ ತಾಲೂಕು ಅಧ್ಯಕ್ಷ ಸುರೇಂದ್ರ, ಸೋಮವಾರಪೇಟೆ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೆ. ಬಸವರಾಜು, ಮಡಿಕೇರಿ ತಾಲೂಕು ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಯದರ್ಶಿಯೂ ಆಗಿರುವ ಪುದಿಯನೆರವನ ರೇವತಿ ರಮೇಶ್ ಸೇರಿ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X