Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭದ್ರತಾ ಲೋಪದ ವಿನಃ ಇಂತಹ ದಾಳಿ ನಡೆಯದು:...

ಭದ್ರತಾ ಲೋಪದ ವಿನಃ ಇಂತಹ ದಾಳಿ ನಡೆಯದು: ‘ರಾ’ ಮಾಜಿ ಅಧ್ಯಕ್ಷ ವಿಕ್ರಮ್ ಸೂದ್

ಪುಲ್ವಾಮಾ ಭಯೋತ್ಪಾದಕ ದಾಳಿ

ವಾರ್ತಾಭಾರತಿವಾರ್ತಾಭಾರತಿ17 Feb 2019 10:01 PM IST
share
ಭದ್ರತಾ ಲೋಪದ ವಿನಃ ಇಂತಹ ದಾಳಿ ನಡೆಯದು: ‘ರಾ’ ಮಾಜಿ ಅಧ್ಯಕ್ಷ ವಿಕ್ರಮ್ ಸೂದ್

ಹೈದರಾಬಾದ್, ಫೆ.17: ಎಲ್ಲೋ ಒಂದೆಡೆ ಭದ್ರತಾ ಲೋಪವಾಗದೆ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಂತಹ ಪ್ರಕರಣ ನಡೆಯಲು ಸಾಧ್ಯವಿಲ್ಲ ಎಂದು ಭಾರತದ ಗುಪ್ತಚರ ಸಂಸ್ಥೆ ‘ರಾ’ದ ಮಾಜಿ ಅಧ್ಯಕ್ಷ ವಿಕ್ರಮ್ ಸೂದ್ ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಿ ತಪ್ಪಾಗಿದೆ ಎಂಬುದು ತಿಳಿದಿಲ್ಲ. ಆದರೆ ಭದ್ರತೆಯಲ್ಲಿ ಲೋಪವಾಗಿರುವುದಂತೂ ಸ್ಪಷ್ಟ. ಒಬ್ಬನಿಗಿಂತ ಹೆಚ್ಚು ಮಂದಿ ಇದರಲ್ಲಿ ಶಾಮೀಲಾಗಿದ್ದಾರೆ. ಸ್ಪೋಟಕ ತಂದ ವ್ಯಕ್ತಿ, ಅದನ್ನು ಒಂದೆಡೆ ಇಟ್ಟ ವ್ಯಕ್ತಿ, ಕಾರನ್ನು ಪಡೆದ ವ್ಯಕ್ತಿ, ಹೀಗೆ ಹಲವು ಮಂದಿ ಇದರಲ್ಲಿದ್ದಾರೆ. ಇವರಿಗೆ ಸಿಆರ್‌ ಪಿಎಫ್ ವಾಹನ ಪ್ರಯಾಣಿಸುವ ದಿನ, ಸಮಯ ಮತ್ತು ದಾರಿಯ ಬಗ್ಗೆ ತಿಳಿದಿತ್ತು ಎಂದವರು ಹೇಳಿದರು.

ಸುರಕ್ಷತೆಯ ಕಾರಣಕ್ಕೆ ಸಾಮಾನ್ಯವಾಗಿ ಯೋಧರನ್ನು ವಿಮಾನ ಮಾರ್ಗದಲ್ಲಿ ಕರೆದೊಯ್ಯಲಾಗುತ್ತದೆ. ಆದರೆ ಗುರುವಾರ ಸಿಆರ್‌ ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 78 ವಾಹನಗಳು ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಂದರ್ಭ ಆತ್ಮಾಹುತಿ ದಾಳಿ ನಡೆದಿದೆ. ಭಾರತವು ಪ್ರತೀಕಾರ ಕ್ರಮ ಕೈಗೊಳ್ಳುವುದರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ತಕ್ಷಣ ಪ್ರತಿಕ್ರಿಯಿಸಲು ಇದೇನೂ ಬಾಕ್ಸಿಂಗ್ ಪಂದ್ಯವಲ್ಲ. ಪ್ರಧಾನಿ ಹೇಳಿದಂತೆ ನಿಮಗೆ ಅನುಕೂಲವಾದ ಮತ್ತು ಸೂಕ್ತವೆನಿಸಿದ ಸಮಯ, ಪ್ರದೇಶದಲ್ಲಿ, ನಿಮ್ಮ ಆಯ್ಕೆಯಂತೆ ಪ್ರತ್ಯುತ್ತರ ನೀಡಬಹುದು. ಇದು ಇವತ್ತೇ ನಡೆಯಬಹುದು ಅಥವಾ ನಾಳೆಯೂ ನಡೆಯಬಹುದು ಎಂದುತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X