Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎ.ಪಿ.ಕಾರಂತರು ಕಲಾವಿದರ ಹಸಿವನ್ನು...

ಎ.ಪಿ.ಕಾರಂತರು ಕಲಾವಿದರ ಹಸಿವನ್ನು ನೀಗಿಸಿದ ಅನ್ನದಾತ: ಶಶಿಧರ್ ಕೋಟೆ

ವಾರ್ತಾಭಾರತಿವಾರ್ತಾಭಾರತಿ17 Feb 2019 10:39 PM IST
share
ಎ.ಪಿ.ಕಾರಂತರು ಕಲಾವಿದರ ಹಸಿವನ್ನು ನೀಗಿಸಿದ ಅನ್ನದಾತ: ಶಶಿಧರ್ ಕೋಟೆ

ಬೆಂಗಳೂರು, ಫೆ.17: ರವೀಂದ್ರ ಕಲಾಕ್ಷೇತ್ರದಲ್ಲಿ ಕಳೆದ 35 ವರ್ಷಗಳಿಂದ ಕ್ಯಾಂಟೀನ್ ನಡೆಸುತ್ತಾ ಕಲಾವಿದರ ಹಸಿವನ್ನು ನೀಗಿಸುತ್ತಿರುವ ಎ.ಪಿ.ಕಾರಂತರನ್ನು ಸನ್ಮಾನಿಸಲಾಯಿತು.

ರವಿವಾರ ಸಂಪಾಜೆ ರಂಗ ಸಂಗಮ ಸಂಸ್ಥೆಯ ನೇತೃತ್ವದಲ್ಲಿ ರಂಗಭೂಮಿ ಕಲಾವಿದರು ಎ.ಪಿ.ಕಾರಂತರಿಗೆ 60 ವರ್ಷದ ತುಂಬಿದ ಹಿನ್ನೆಲೆಯಲ್ಲಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಎ.ಪಿ.ಕಾರಂತರು ಹಾಗೂ ಅವರ ಕ್ಯಾಂಟೀನ್ ಜೊತೆಗೆ ಕಳೆದ 35 ವರ್ಷಗಳ ನಂಟನ್ನು ರಂಗಭೂಮಿ ಕಲಾವಿದರ ಹಂಚಿಕೊಂಡರು.

ಹಿರಿಯ ಗಾಯಕ ಶಶಿಧರ್ ಕೋಟೆ ಮಾತನಾಡಿ, ರವೀಂದ್ರ ಕಲಾಕ್ಷೇತ್ರದಲ್ಲಿ ಕಳೆದ 35ವರ್ಷಗಳಿಂದ ಕ್ಯಾಂಟೀನ್ ನಡೆಸುತ್ತಿರುವ ಎ.ಪಿ.ಕಾರಂತರು ಎಲ್ಲ ಕಲಾವಿದರಿಗೂ ಅಚ್ಚುಮೆಚ್ಚು. ಅವರ 35ವರ್ಷಗಳ ಕ್ಯಾಂಟೀನ್ ಜೀವನದಲ್ಲಿ ಸಾವಿರಾರು ಕಲಾವಿದರ ಹಸಿವನ್ನು ನೀಗಿಸಿದ್ದಾರೆ ಎಂದು ತಿಳಿಸಿದರು.

ಎ.ಪಿ.ಕಾರಂತರು ತಮ್ಮ ಜೀವನವನ್ನು ಕೇವಲ ಕ್ಯಾಂಟೀನ್ ನಡೆಸುವುದಕ್ಕೆ ಮಾತ್ರ ಸೀಮಿತಗೊಳಿಸಲಿಲ್ಲ. ಯಕ್ಷಗಾನ ಸೇರಿದಂತೆ ಹಲವಾರು ನಾಟಕಗಳನ್ನು ಆಯೋಜಿಸಿ, ಕಲಾವಿದರಿಗೆ ಆಸರೆಯಾಗಿದ್ದಾರೆ. ಇವತ್ತು ಅವರಿಗೆ 60ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸುತ್ತಿರುವುದು ಶ್ಲಾಘನೀಯವಾದದ್ದೆಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಎ.ಪಿ.ಕಾರಂತ ಮಾತನಾಡಿ, ನಾನು 25ವರ್ಷದ ತರುಣನಾಗಿದ್ದಾಗ ರವೀಂದ್ರ ಕಲಾಕ್ಷೇತ್ರದ ಬದಿಯೊಂದರಲ್ಲಿ ಪೆಟ್ಟಿ ಅಂಗಡಿಯನ್ನಿಟ್ಟು ಕ್ಯಾಂಟೀನ್ ಆರಂಭಿಸಿದೆ. ಕಲಾವಿದರ ನೋವು, ನಲಿವುಗಳನ್ನು ಕಣ್ಣಾರೆ ನೋಡಿ, ಹಲವರ ಹಸಿವನ್ನು ನೀಗಿಸಿದ್ದೇನೆಂಬ ತೃಪ್ತಿಯಿದೆ ಎಂದು ತಿಳಿಸಿದರು.

ಬಹುಭಾಷಾ ನಟ ಪ್ರಕಾಶ್ ರೈ, ಮಾಜಿ ಸಚಿವ ಉಮಾಶ್ರೀ, ಕಲಾವಿದ ಮುಖ್ಯಮಂತ್ರಿ ಚಂದ್ರು ಮೊದಲುಗೊಂಡ ಸಾವಿರಾರು ಕಲಾವಿದರನ್ನು ಹತ್ತಿರದಿಂದ ನೋಡಿದ್ದೇನೆ. ಇವತ್ತು ಅವರು ಬಹು ಎತ್ತರಕ್ಕೆ ಬೆಳೆದಿರುವುದನ್ನು ನೋಡಿ ಖುಷಿ ಆಗುತ್ತದೆ. ಹೀಗೆ ಕಲಾವಿದರು ಚೆನ್ನಾಗಿ ಬೆಳೆಯಬೇಕೆಂಬುದು ನನ್ನಾಸೆಯೆಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ತುಳುವೆರೆ ಚಾವಡಿ ಗೌರವ ಅಧ್ಯಕ್ಷ ಪುರುಷೋತ್ತಮ ಚೇಂಡ್ಲ, ಬರಹಗಾರ ಬ.ಲ.ಸುರೇಶ್, ಉದ್ಯಮಿ ಕುತ್ಯಾರು ರಾಜೇಶ್ ಶೆಟ್ಟಿ, ಸಂಪಾಜೆ ರಂಗ ಸಂಗಮದ ರಾಜ್ ಸಂಪಾಜೆ, ಕಲಾವಿದ ರಾಮಚಂದ್ರ ಮತ್ತಿತರರು ಉಪಸ್ಥಿತಿರಿದ್ದರು. ಸಭಾ ಕಾರ್ಯಕ್ರಮದ ನಂತರ ಪಾಂಡುನ ಅಲಕ್ಕ ಪೋಂಡು ತುಳು ಹಾಸ್ಯಮಯ ನಾಟಕ ಆಯೋಜಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X