Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೆ.20ರಿಂದ ಜೈಲ್ ಭರೋ: ನಾರಾಯಣಸ್ವಾಮಿ...

ಫೆ.20ರಿಂದ ಜೈಲ್ ಭರೋ: ನಾರಾಯಣಸ್ವಾಮಿ ಎಚ್ಚರಿಕೆ

ಪುದುಚೇರಿ ಸಿಎಂ ಧರಣಿ 5ನೇ ದಿನಕ್ಕೆ

ವಾರ್ತಾಭಾರತಿವಾರ್ತಾಭಾರತಿ17 Feb 2019 10:55 PM IST
share
ಫೆ.20ರಿಂದ ಜೈಲ್ ಭರೋ: ನಾರಾಯಣಸ್ವಾಮಿ ಎಚ್ಚರಿಕೆ

ಪುದುಚೇರಿ,ಫೆ.17: ತನ್ನ ಸರಕಾರದ ಜನಕಲ್ಯಾಣ ಯೋಜನೆಳು ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತ ಪ್ರಸ್ತಾವಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ  ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನಡೆಸುತ್ತಿರುವ ಧರಣಿ ರವಿವಾರ ಐದನೆ ದಿನಕ್ಕೆ ಕಾಲಿರಿಸಿದೆ. ಫೆ.20ರಿಂದ ಜೈಲ್ ಭರೋ ನಡೆಸುವ ಮೂಲಕ ತನ್ನ ಹೋರಾಟವನ್ನು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

  

‘‘ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಫೆಬ್ರವರಿ 7ರಂದು ನಾವು ಬರೆದಿರುವ ಪತ್ರದಲ್ಲಿ ಅಡಕವಾಗಿರುವ ನಮ್ಮ ಬೇಡಿಕೆಗಳು ಈಡೇರುವ ತನಕ ನಮ್ಮ ಪ್ರತಿಭಟನೆ ಮುಂದುವರಿಯಲಿದೆ’’ಎಂದು ಕಿರಣ್ ಬೇಡಿ ಅವರ ಅಧಿಕೃತ ನಿವಾಸ ‘ರಾಜ್‌ನಿವಾಸ’ದ ಮುಂದೆ ಧರಣಿ ನಡೆಸುತ್ತಿರುವ ನಾರಾಯಣಸ್ವಾಮಿ ತಿಳಿಸಿದ್ದಾರೆ. ಉಚಿತ ಅಕ್ಕಿ ವಿತರಣೆ ಯೋಜನೆ ಸೇರಿದಂತೆ ಕಲ್ಯಾಣ ಕಾರ್ಯಕ್ರಮಗಳು  ತನ್ನ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತ 39 ಪ್ರಸ್ತಾವಗಳಿಗೆ ಲೆ.ಗ.ಕಿರಣ್ ಬೇಡಿ ಅವರು ಅನುಮೋದನೆ ನೀಡುತ್ತಿಲ್ಲವೆಂದು ಅವರು ಆರೋಪಿಸಿದ್ದಾರೆ.

ನಾರಾಯಣಸ್ವಾಮಿ ಅವರಿಗೆ ಬರೆದ ಪತ್ರವೊಂದರಲ್ಲಿ ಕಿರಣ್‌ಬೇಡಿ ಅವರು, ಮುಖ್ಯಮಂತ್ರಿಯ ಬಹಿರಂಗ ಪ್ರತಿಭಟನೆಯನ್ನು ಕಟುವಾಗಿ ಟೀಕಿಸಿದ್ದಾರೆ ಹಾಗೂ ಅವರು ನಡೆಸುತ್ತಿರುವ ಧರಣಿ ಕಾನೂನುಬಾಹಿರವೆಂದು ಹೇಳಿದ್ದಾರೆ. ಫೆಬ್ರವರಿ 21ರಂದು ಸಾರ್ವಜನಿಕ ವೇದಿಕೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಆಕೆ ಆಹ್ವಾನಿಸಿದ್ದರು. 2016ರ ಮೇನಲ್ಲಿ ಕಿರಣ್ ಬೇಡಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಲೆ.ಗವರ್ನರ್ ಆಗಿ ನೇಮಕಗೊಂಡಾಗಿನಿಂದ ಇಬ್ಬರೂ ವಿವಿಧ ಆಡಳಿತಾತ್ಮಕ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಮುಖ್ಯಮಂತ್ರಿ ನಾರಾಯಣ ಸ್ವಾಮಿ , ಅವರ ಸಂಪುಟ ಸಚಿವರು ಹಾಗೂ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ನಾಯಕರು ರವಿವಾರ ತಮ್ಮ ನಿವಾಸಗಳ ಛಾವಣಿ ಮೇಲೆ ಕಪ್ಪುಬಾವುಟ ಹಾರಿಸುವ ಮೂಲಕ ಲೆ.ಗವರ್ನರ್ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದರು.

ಪ್ರತಿಭಟನಕಾರರಿಗೆ ತಕ್ಕಶಾಸ್ತಿ ಮಾಡುವುದಾಗಿ ಬೇಡಿ ಅವರು ಬೆದರಿಕೆ ಹಾಕಿದ್ದಾರೆಂದು ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಮಣಿಯಲಾರೆವು. ಇದಕ್ಕಾಗಿ ನಾವು ಸಾಮೂಹಿಕ ಬಂಧನಕ್ಕೊಳಗಾಗಲೂ ಸಿದ್ಧರಿದ್ದೇವೆ ಎಂದು ಬೇಡಿ ಹೇಳಿದರು.

ಲೆಫ್ಟಿನೆಂಟ್ ಗವರ್ನರ್ ಅವರನ್ನು ವಾಪಸ್ ಕರೆಯಿಸಿಕೊಳ್ಳಬೇಕೆಂದು ಆಗ್ರಹಿಸಿ ಪುದುಚೇರಿಯ ಮೈತ್ರಿಕೂಟ ಸರಕಾರದ ನಾಯಕರು ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X