Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಸಾವಿರಕ್ಕೂ ಅಧಿಕ...

ಬೆಂಗಳೂರಿನ ಸಾವಿರಕ್ಕೂ ಅಧಿಕ ಶಾಲೆಗಳಿಗಿಲ್ಲ ಸಿಸಿಟಿವಿ !

ವಾರ್ತಾಭಾರತಿವಾರ್ತಾಭಾರತಿ17 Feb 2019 11:15 PM IST
share
ಬೆಂಗಳೂರಿನ ಸಾವಿರಕ್ಕೂ ಅಧಿಕ ಶಾಲೆಗಳಿಗಿಲ್ಲ ಸಿಸಿಟಿವಿ !

ಬೆಂಗಳೂರು, ಫೆ.17: ಎಲ್ಲ ಸರಕಾರಿ ಶಾಲೆಗಳಲ್ಲೂ ಸಿಸಿಟವಿಗಳನ್ನು ಆದ್ಯತೆ ಮೇರೆಗೆ ಅಳವಡಿಸುವುದಾಗಿ ರಾಜ್ಯ ಸರಕಾರ ಘೋಷಿಸಿ ಒಂದು ವರ್ಷ ಕಳೆದರೂ ಬೆಂಗಳೂರಿನ 1,151 ಸರಕಾರಿ ಶಾಲೆಗಳ ಪೈಕಿ ಒಂದರಲ್ಲೂ ಸಿಸಿಟಿವಿ ಅಳವಡಿಕೆಯಾಗಿಲ್ಲ.

ಮಕ್ಕಳ ಮೇಲಿನ ಅತ್ಯಾಚಾರ, ಲೈಂಗಿಕ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಕ್ರಮವಾಗಿ ಶಾಲೆಗಳಲ್ಲಿ ಸಿಸಿಟಿವಿ ಅಳವಡಿಸುವುದನ್ನು ಕೆಲವು ವರ್ಷಗಳ ಹಿಂದೆಯೇ ಕಡ್ಡಾಯಗೊಳಿಸಲಾಗಿದೆ. ಆದರೆ, ಈ ಕಡ್ಡಾಯ ಆದೇಶ ಕೇವಲ ಖಾಸಗಿ ಶಾಲೆಗಳಿಗೆ ಸೀಮಿತವಾಗಿದೆ. ಖಾಸಗಿ ಶಾಲೆಗಳಿಗೆ ಅಷ್ಟೇ ಸಿಸಿಟಿವಿ ಕಡ್ಡಾಯ ಎಂದು ಭಾವಿಸುವುದು ತಪ್ಪು ಗ್ರಹಿಕೆ. ಸರಕಾರಿ ಶಾಲೆಗಳಲ್ಲೂ ಎಷ್ಟೋ ಮಕ್ಕಳ ಮೇಲೆ ಹಿಂಸಾಚಾರ, ದುರ್ಬಳಕೆ ನಡೆಯುತ್ತಿವೆ. ಆದರೆ ವರದಿಯಾಗದೇ ಮುಚ್ಚಿ ಹೋಗುತ್ತವೆ’ ಎಂದು ಆರ್‌ಟಿಇ ಕಾರ್ಯಪಡೆಯ ಸಂಚಾಲಕ ನಾಗಸಿಂಹ ಜಿ ರಾವ್ ಹೇಳುತ್ತಾರೆ. 

ಖಾಸಗಿ ಶಾಲೆಗಳಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬರಲು ಪೋಷಕರ ಜಾಗೃತಿ ಹಾಗೂ ಹೋರಾಟವೇ ಕಾರಣ. ಆದರೆ ಮಕ್ಕಳು ಎಷ್ಟೋ ಬಾರಿ ಭಯದಿಂದ ಇಂತಹ ವಿಷಯಗಳನ್ನು ಬಹಿರಂಗಪಡಿಸುವುದೇ ಇಲ್ಲ. ಸರಕಾರಿ ಶಾಲೆಗಳಲ್ಲಿ ಮಕ್ಕಳಾಗಲಿ, ಪೋಷಕರಾಗಲಿ ಇಂತಹ ವಿಷಯಗಳ ಬಗ್ಗೆ ಹೋರಾಟ ನಡೆಸದೆ ಸುಮ್ಮನಿರುವುದೇ ಪ್ರಕರಣಗಳು ಮುಚ್ಚಿಹೋಗಲು ಕಾರಣ ಎಂದು ರಾವ್ ಅಭಿಪ್ರಾಯಪಟ್ಟಿದ್ದಾರೆ.

ರಾಜರಾಜೇಶ್ವರಿ ನಗರದ ಸರಕಾರಿ ಶಾಲೆಯಲ್ಲಿ 100ಕ್ಕೂ ಅಧಿಕ ಬಾಲಕ-ಬಾಲಕಿಯರು ಓದುತ್ತಿದ್ದಾರೆ. ಆದರೆ ಕ್ಯಾಂಪಸ್‌ನಲ್ಲಿ ಎಲ್ಲಿಯೂ ಸಿಸಿಟಿವಿ ಕ್ಯಾಮರಾ ಕಾಣಿಸುವುದಿಲ್ಲ. ಕಳೆದ ನವೆಂಬರ್‌ನಲ್ಲಿ ಶಿಕ್ಷಣ ಇಲಾಖೆ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಎರಡು ಸಿಸಿಟಿವಿ ಕ್ಯಾಮೆರಾ ಅಳವಡಿಸುವುದಾಗಿ ಹೇಳಿದ್ದರು. ಆದರೆ ಇದುವರೆಗೂ ಅಳವಡಿಕೆಯಾಗಿಲ್ಲ ಎಂದು ಶಾಲೆಯ ಅಧ್ಯಾಪಕರೊಬ್ಬರು ತಿಳಿಸಿದರು. ಇನ್ನೊಂದು ಸರಕಾರಿ ಶಾಲೆಯಲ್ಲಿ 5ನೇ ತರಗತಿ ಬಾಲಕಿಯೊಬ್ಬಳು ಹಿರಿಯ ವಿದ್ಯಾರ್ಥಿಗಳ ಕಿರುಕುಳದ ಕಾರಣಕ್ಕೆ ಒಂದು ತಿಂಗಳಿನಿಂದ ಶಾಲೆಗೆ ಬರುವುದನ್ನೇ ನಿಲ್ಲಿಸಿದ್ದಳು. ನಮ್ಮ ದೈನಂದಿನ ದೈಹಿಕ ಶಿಕ್ಷಣದ ಅವಧಿಯಲ್ಲಿ ಹಿರಿಯ ಹುಡುಗನೊಬ್ಬ ನನ್ನ ಜಡೆ ಎಳೆದು ನನ್ನನ್ನು ಅಸಭ್ಯವಾಗಿ ಮುಟ್ಟುತ್ತಾನೆ. ನಾನು ಟೀಚರ್‌ಗೆ ದೂರು ಕೊಟ್ಟರೂ ಇದನ್ನು ದೊಡ್ಡ ವಿಷಯ ಮಾಡಬೇಡ ಎಂದು ಹೇಳಿದರು ಎಂದು ಬಾಲಕಿ ಹೇಳಿಕೊಂಡಿದ್ದಾರೆ.

ಹೀಗೆ ಅನೇಕ ಘಟನೆಗಳು ನಡೆಯುತ್ತಿದ್ದರೂ ಸರಕಾರ ನೀಡಿದ ಭರವಸೆಯನ್ನು ಈಡೇರಿಸಲು ಮುಂದಾಗಿಲ್ಲ. ಮಕ್ಕಳ ರಕ್ಷಣೆ ಸರಕಾರ ಮೊದಲ ಆದ್ಯತೆಯಾಗಿಲ್ಲ. ರಾಜಕೀಯ ಮಾಡುವುದು, ಹೊಡೆದಾಡುವುದು ಬಹಳ ಮುಖ್ಯವಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X