Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನವ ಕಳ್ಳ ಸಾಗಣೆ ತಡೆಗೆ ಪ್ರತಿಯೊಬ್ಬರು...

ಮಾನವ ಕಳ್ಳ ಸಾಗಣೆ ತಡೆಗೆ ಪ್ರತಿಯೊಬ್ಬರು ಶ್ರಮಿಸಬೇಕು: ನ್ಯಾ.ಎಲ್.ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Feb 2019 11:27 PM IST
share

ಬೆಂಗಳೂರು, ಫೆ.17: ಮಾನವ ಕಳ್ಳ ಸಾಗಣೆ ಒಂದು ಸಾಮಾಜಿಕ ಪಿಡುಗಾಗಿದ್ದು, ಈ ಪಿಡುಗನ್ನು ಹೋಗಲಾಡಿಸಲು ಹಾಗೂ ಸಂತ್ರಸ್ಥರನ್ನು ರಕ್ಷಿಸಲು ಪ್ರತಿಯೊಬ್ಬರೂ ಶ್ರಮಿಸುವ ಅವಶ್ಯಕತೆ ಇದೆ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹೇಳಿದ್ದಾರೆ.

ರವಿವಾರ ಹೈಕೋರ್ಟ್ ಸಭಾಂಗಣದಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಜಂಟಿಯಾಗಿ ಆಯೋಜಿಸಿದ್ದ ‘ಮಾನವ ಕಳ್ಳಸಾಗಣಿಕೆ ತಡೆಗಟ್ಟುವ’ ಕುರಿತ ನ್ಯಾಯಾಂಗ ಅಧಿಕಾರಿಗಳ ಜೊತೆಗಿನ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 

ಸಾಮಾಜಿಕ, ಆರ್ಥಿಕ ಮತ್ತು ದೇವರ ಹೆಸರಿನಲ್ಲಿ ನಡೆಯುವ ಸಾಂಪ್ರದಾಯಿಕ ಹಾಗೂ ಆಚರಣಾ ಪದ್ಧತಿಗಳಿಂದಾಗಿ ಈ ಮಾನವ ಕಳ್ಳ ಸಾಗಣೆ ಸಮಸ್ಯೆ ಇನ್ನೂ ಜೀವಂತವಾಗಿ ಉಳಿದುಕೊಂಡಿದ್ದು, ಈ ಪಿಡುಗನ್ನು ಹೋಗಲಾಡಿಸಲು ಪ್ರತಿಯೊಬ್ಬರು ಶ್ರಮಿಸಬೇಕೆಂದು ಹೇಳಿದರು. ಆರ್ಥಿಕ ಸಮಸ್ಯೆಯಿಂದ ಬಡ ವರ್ಗದವರು ಮಾರುಕಟ್ಟೆಯಲ್ಲಿ ಸರಕಾಗುತ್ತಿದ್ದಾರೆ. ಬಡತನ ನಿರ್ಮೂಲನೆ ಜವಾಬ್ದಾರಿ ನ್ಯಾಯಾಂಗದ ಮೇಲಿರುವುದಿಲ್ಲ. ಸರಕಾರವು ಬಡತನ ನಿರ್ಮೂಲನೆ ಮಾಡಬೇಕಿದ್ದು, ನ್ಯಾಯಾಂಗ ಸೂಕ್ತ ಮಾರ್ಗದರ್ಶನ ನೀಡಬಹುದಾಗಿದೆ. ಆದರೆ, ಸಾಂಪ್ರದಾಯಿಕ ಆಚರಣಾ ಪದ್ಧತಿಗಳಿಂದ ಮಾನವ ಕಳ್ಳಸಾಗಣೆ ನಡೆಯುತ್ತಿರುವುದು ಕಂಡುಬಂದರೆ ನ್ಯಾಯಾಂಗ ಅಧಿಕಾರಿಗಳು ತಕ್ಷಣವೇ ಅದರ ನಿರ್ಮೂಲನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ರಾಜ್ಯಾದ್ಯಂತ ಸುಮಾರು 1,100 ಮಂದಿ ನ್ಯಾಯಾಂಗ ಅಧಿಕಾರಿಗಳಿದ್ದಾರೆ. ಜೀವಿತಾವಧಿಯಲ್ಲಿ ಎಷ್ಟು ತೀರ್ಪು ಬರೆದಿದ್ದೇವೆ ಎಂಬುದರ ಜೊತೆಗೆ ಮಾನವ ಕಳ್ಳ ಸಾಗಣೆ ಪ್ರಕರಣಗಳಿಂದ ಎಷ್ಟು ಮಂದಿ ಸಂತ್ರಸ್ಥರನ್ನು ರಕ್ಷಿಸಿದ್ದೇವೆ ಎಂಬುದನ್ನು ಸಹ ನ್ಯಾಯಾಧೀಶರು ಲೆಕ್ಕವಿಡಬೇಕು. ನ್ಯಾಯಧೀಶರು, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು, ಪೊಲೀಸ್ ಅಧಿಕಾರಿ ಅಥವಾ ಸರಕಾರಿ ಅಧಿಕಾರಿಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಸಮಸ್ಯೆ ನಿರ್ಮೂಲನೆಗೆ ಸಮರೋಪಾದಿಯಲ್ಲಿ ಶ್ರಮಿಸಬೇಕು. ಇಂತಹ ವಿಷ ವರ್ತುಲದಿಂದ ಒಬ್ಬ ಸಂತ್ರಸ್ಥರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಿದರೆ ಬದುಕು ಸಾರ್ಥಕವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಹೈಕೊರ್ಟ್ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಅರವಿಂದ ಕುಮಾರ್ ಮಾತನಾಡಿ, ಬಡತನ, ಜಾಗತೀಕರಣ ಮತ್ತು ಶಿಕ್ಷಣದ ಕೊರತೆಯಿಂದ ಮಾನವ ಕಳ್ಳಸಾಗಣೆ ನಡೆಯುತ್ತಿದೆ. ಅದರ ಸುಳಿಗೆ ಸಿಲುಕಿದವರ ಪೈಕಿ ಹೆಚ್ಚಿನವರು ಲೈಂಗಿಕ ಶೋಷಣೆಗೆ ಗುರಿಯಾಗುತ್ತಾರೆ ಎಂದರು.

ಇಂತಹ ಪ್ರಕರಣಗಳ ಅಪರಾಧಿಗೆ ಶಿಕ್ಷೆಯಾಗುವ ಪ್ರಮಾಣವು 2015ರಲ್ಲಿ ಶೇ.65ರಷ್ಟಿತ್ತು. 2016ರಲ್ಲಿ ಶೇ.72ಕ್ಕೆ ಏರಿಕೆಯಾಗಿದೆ. ಸಾಕ್ಷಿಗಳು ಪ್ರಾಸಿಕ್ಯೂಷನ್‌ಗೆ ಸಹಕರಿಸದ ಹೊರತು ಆರೋಪಿಯನ್ನು ದೋಷಿಯಾಗಿ ತೀರ್ಮಾನಿಸಲು ಕೋರ್ಟ್‌ಗೆ ಸಾಧ್ಯವಾಗುವುದಿಲ್ಲ. ಆರೋಪಿಗಳು ಖುಲಾಸೆಯಾದರೆ ನ್ಯಾಯಾಲಯವನ್ನು ದೂರಿದರೆ ಲಾಭವಿಲ್ಲ. ಹೀಗಾಗಿ, ಆರೋಪಿಗಳ ದುಷ್ಕೃತ್ಯ ಸಾಬೀತುಪಡಿಸಲು ತನಿಖಾಧಿಕಾರಿಗಳು ಹಾಗೂ ಪ್ರಾಸಿಕ್ಯೂಷನ್ ಸಮರ್ಥವಾಗಿ ಕೆಲಸ ಮಾಡುವುದು ಅನಿವಾರ್ಯ ಎಂದರು.

ಹೈಕೋರ್ಟ್ ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್, ಹೈಕೋರ್ಟ್ ರಿಜಿಸ್ಟ್ರಾರ್ ಶ್ರೀಷಾನಂದ ಹಾಗೂ ಅಧೀನ ನ್ಯಾಯಾಲಯದ ನ್ಯಾಯಾಧೀಶರುಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X