Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನವು ಸೌದಿಗಳಿಗೆ ಪ್ರಿಯ ದೇಶ:...

ಪಾಕಿಸ್ತಾನವು ಸೌದಿಗಳಿಗೆ ಪ್ರಿಯ ದೇಶ: ಸೌದಿ ಅರೇಬಿಯ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್

ವಾರ್ತಾಭಾರತಿವಾರ್ತಾಭಾರತಿ18 Feb 2019 8:43 PM IST
share
ಪಾಕಿಸ್ತಾನವು ಸೌದಿಗಳಿಗೆ ಪ್ರಿಯ ದೇಶ: ಸೌದಿ ಅರೇಬಿಯ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್

ಇಸ್ಲಾಮಾಬಾದ್, ಫೆ. 18: ವಿವಿಧ ಕ್ಷೇತ್ರಗಳಲ್ಲಿ ಪಾಕಿಸ್ತಾನದೊಂದಿಗೆ ಭಾಗೀದಾರಿಕೆ ಹೊಂದಲು ಪ್ರಧಾನಿ ಇಮ್ರಾನ್ ಖಾನ್‌ರಂಥವರ ನಾಯಕತ್ವಕ್ಕಾಗಿ ನನ್ನ ದೇಶ ಕಾಯುತ್ತಿತ್ತು ಎಂದು ಪಾಕಿಸ್ತಾನ ಪ್ರವಾಸದಲ್ಲಿರುವ ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಹೇಳಿದ್ದಾರೆ.

ಇಸ್ಲಾಮಾಬಾದ್ ‌ನ ಪ್ರಧಾನಿ ನಿವಾಸದಲ್ಲಿ ರವಿವಾರ ರಾತ್ರಿ ನಡೆದ ಭೋಜನಕೂಟದಲ್ಲಿ ಭಾಗವಹಿಸಿ ಮಾತನಾಡಿದ ಮುಹಮ್ಮದ್, ಪಾಕಿಸ್ತಾನವು ಎಲ್ಲ ಸೌದಿಗಳಿಗೆ ‘ಪ್ರಿಯ ದೇಶ’ವಾಗಿದೆ ಹಾಗೂ ಉಭಯ ದೇಶಗಳು ಕಠಿಣ ಹಾಗೂ ಒಳ್ಳೆಯ ಸಮಯಗಳಲ್ಲಿ ಜೊತೆಯಾಗಿ ನಡೆದಿವೆ ಎಂದು ಹೇಳಿದರು ಎಂದು ‘ಡಾನ್ ನ್ಯೂಸ್’ ವರದಿ ಮಾಡಿದೆ.

‘‘ಭವಿಷ್ಯದಲ್ಲಿ ಪಾಕಿಸ್ತಾನವು ತುಂಬಾ, ತುಂಬಾ ಮಹತ್ವದ ದೇಶವಾಗಲಿದೆ ಹಾಗೂ ಈ ಬೆಳವಣಿಗೆಯಲ್ಲಿ ನಾವು ಭಾಗೀದಾರರಾಗುತ್ತೇವೆ’’ ಎಂದು ಅವರು ನುಡಿದರು.

‘‘ಪಾಕಿಸ್ತಾನವು ಇಂದು ಶ್ರೇಷ್ಠ ನಾಯಕತ್ವವನ್ನು ಹೊಂದಿದ್ದು, ಉತ್ತಮ ಭವಿಷ್ಯವನ್ನು ಹೊಂದಿದೆ’’ ಎಂದು ಅವರು ಅಭಿಪ್ರಾಯಪಟ್ಟರು.

ನನ್ನ ದೇಶವು ಪಾಕಿಸ್ತಾನದೊಂದಿಗೆ ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಭದ್ರತೆಯ ವಿಷಯದಲ್ಲಿ ಸಹಯೋಗ ಹೊಂದಲಿದೆ ಎಂದು ಸೌದಿ ಯುವರಾಜ ತಿಳಿಸಿದರು. ‘‘ನಮ್ಮ ವಲಯದ ಬಗ್ಗೆ ನಮಗೆ ನಂಬಿಕೆಯಿದೆ. ಹಾಗಾಗಿ, ನಾವು ಅದರಲ್ಲಿ ಹೂಡಿಕೆ ಮಾಡುತ್ತಿದ್ದೇವೆ’’ ಎಂದರು.

►1.43 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದಗಳಿಗೆ ಸಹಿ

ಸೌದಿ ಅರೇಬಿಯ ಮತ್ತು ಪಾಕಿಸ್ತಾನಗಳು ರವಿವಾರ 20 ಬಿಲಿಯ ಡಾಲರ್ (ಸುಮಾರು 1.43 ಲಕ್ಷ ಕೋಟಿ ಭಾರತೀಯ ರೂಪಾಯಿ) ಮೊತ್ತದ ಹಲವಾರು ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್‌ರ ಪಾಕಿಸ್ತಾನ ಪ್ರವಾಸದ ಮೊದಲ ದಿನದಂದು 7 ಒಪ್ಪಂದಗಳು ಮತ್ತು ತಿಳುವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದೆ.

ಪಾಕಿಸ್ತಾನದ ಕುಸಿದ ಆರ್ಥಿಕತೆಗೆ ಈ ಹೂಡಿಕೆಗಳು ಜೀವ ತುಂಬಲಿವೆ ಎಂಬ ವಿಶ್ವಾಸವನ್ನು ಆ ದೇಶದ ನಾಯಕರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಬಳಿಕ, ಸೌದಿ ಯುವರಾಜ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮಂಗಳವಾರ ಮತ್ತು ಬುಧವಾರ ಅವರು ಭಾರತ ಪ್ರವಾಸದಲ್ಲಿರುತ್ತಾರೆ.

ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಘಟನೆಯ ಹಿನ್ನೆಲೆಯಲ್ಲಿ ಉದ್ಭವಿಸಿರುವ ಭಾರೀ ಉದ್ವಿಗ್ನತೆಯ ನಡುವೆಯೇ ಸೌದಿ ಯುವರಾಜನ ಭೇಟಿ ಏರ್ಪಟ್ಟಿದೆ.

►ಸೌದಿಯಲ್ಲಿರುವ 2,107 ಪಾಕ್ ಕೈದಿಗಳ ಬಿಡುಗಡೆ

ಸೌದಿ ಅರೇಬಿಯದ ಜೈಲುಗಳಲ್ಲಿರುವ 2,107 ಪಾಕಿಸ್ತಾನಿ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಆದೇಶ ನೀಡಿದ್ದಾರೆ ಎಂದು ಪಾಕಿಸ್ತಾನದ ವಾರ್ತಾ ಸಚಿವ ಫವಾದ್ ಚೌಧರಿ ಸೋಮವಾರ ಪ್ರಕಟಿಸಿದ್ದಾರೆ.

ಸೌದಿ ಅರೇಬಿಯದಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಕಾರ್ಮಿಕರು ಎದುರಿಸುತ್ತಿರುವ ಸಂಕರ್ಷಗಳ ಬಗ್ಗೆ ಗಮನ ಹರಿಸುವಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ರವಿವಾರ ರಾತ್ರಿ ಸೌದಿ ಯುವರಾಜನಿಗೆ ವಿಶೇಷ ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X