Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶೂಟಿಂಗ್ ವಿಶ್ವಕಪ್‌: ಪಾಕ್ ಶೂಟರ್‌ಗಳಿಗೆ...

ಶೂಟಿಂಗ್ ವಿಶ್ವಕಪ್‌: ಪಾಕ್ ಶೂಟರ್‌ಗಳಿಗೆ ವೀಸಾ

ವಾರ್ತಾಭಾರತಿವಾರ್ತಾಭಾರತಿ18 Feb 2019 11:43 PM IST
share
ಶೂಟಿಂಗ್ ವಿಶ್ವಕಪ್‌: ಪಾಕ್ ಶೂಟರ್‌ಗಳಿಗೆ ವೀಸಾ

ಹೊಸದಿಲ್ಲಿ, ಫೆ.18: ಈ ತಿಂಗಳಾಂತ್ಯದಲ್ಲಿ ದಿಲ್ಲಿಯಲ್ಲಿ ನಿಗದಿಯಾಗಿರುವ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನದ ಆಟಗಾರರಿಗೆ ವೀಸಾ ನೀಡಲಾಗಿದೆ ಎಂದು ಭಾರತದ ಶೂಟಿಂಗ್‌ನ ಉನ್ನತಾಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದು, ಪುಲ್ವಾಮ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕ್ ಶೂಟರ್‌ಗಳು ಟೂರ್ನಿಯಲ್ಲಿ ಭಾಗವಹಿಸುವ ಕುರಿತಂತೆ ಇದ್ದ ಊಹಾಪೋಹಕ್ಕೆ ತೆರೆ ಬಿದ್ದಿದೆ.

ಶೂಟಿಂಗ್ ವಿಶ್ವಕಪ್ ಫೆ.20ರಿಂದ 28ರ ತನಕ ಹೊಸದಿಲ್ಲಿಯ ಡಾ.ಕರ್ಣಿ ಸಿಂಗ್ ರೇಂಜ್‌ನಲ್ಲಿ ನಡೆಯಲಿದೆ. ಟೋಕಿಯೊ 2020ರ ಒಲಿಂಪಿಕ್ಸ್‌ಗೆ 16 ಕೋಟಾ ಸ್ಥಾನಗಳು ವಿಶ್ವಕಪ್ ವೇಳೆಯೇ ಭರ್ತಿಯಾಗುವ ಹಿನ್ನೆಲೆಯಲ್ಲಿ ಈ ಟೂರ್ನಿಯು ಮಹತ್ವ ಪಡೆದಿದೆ.

‘‘ಪಾಕ್ ಶೂಟರ್‌ಗಳ ವೀಸಾ ತೆರವುಗೊಳಿಸಲಾಗಿದೆ. ಭಾರತೀಯ ಹೈಕಮಿಶನ್ ಹಾಗೂ ಪಾಕಿಸ್ತಾನ ಶೂಟಿಂಗ್ ಫೆಡರೇಶನ್‌ನಿಂದ ನಾವು ಮಾಹಿತಿ ಪಡೆದಿದ್ದೇವೆ. ಇಬ್ಬರು ಶೂಟರ್‌ಗಳು ಹಾಗೂ ಮ್ಯಾನೇಜರ್‌ರ ವಿಮಾನ ಟಿಕೆಟ್ ಕೂಡ ಬುಕ್ ಆಗಿದೆ’’ ಎಂದು ರಾಷ್ಟ್ರೀಯ ರೈಫಲ್ ಸಂಸ್ಥೆಯ(ಎನ್‌ಆರ್‌ಎಐ)ಕಾರ್ಯದರ್ಶಿ ರಾಜೀವ್ ಭಾಟಿಯಾ ಸೋಮವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಪಾಕ್‌ನ ಉಗ್ರ ಸಂಘಟನೆ ದಾಳಿ ನಡೆಸಿ ಭಾರತದ 40 ಯೋಧರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಶೂಟಿಂಗ್ ವಿಶ್ವಕಪ್‌ನಲ್ಲಿ ಪಾಕ್ ಶೂಟರ್‌ಗಳು ಭಾಗವಹಿಸುವ ಬಗ್ಗೆ ಸಂಶಯವಿತ್ತು. ಇಂದು ಸಂಜೆ ಭಾರತ ವೀಸಾ ಕಳುಹಿಸದಿದ್ದರೆ, ನಮ್ಮ ಶೂಟರ್‌ಗಳನ್ನು ವಿಶ್ವಕಪ್‌ಗೆ ಕಳುಹಿಸಿಕೊಡುವುದಿಲ್ಲ ಎಂದು ಪಾಕ್ ಶೂಟಿಂಗ್ ಫೆಡರೇಶನ್ ಕರಾಚಿಯಲ್ಲಿ ಹೇಳಿಕೆ ನೀಡಿತ್ತು.

ಭಾರತ ಸರಕಾರ ಗುರುವಾರ ಉಗ್ರ ದಾಳಿ ನಡೆಯುವ ಮುನ್ನಾದಿನ ಪಾಕ್ ಶೂಟರ್‌ಗಳಿಗೆ ವೀಸಾ ಕಳುಹಿಸಲು ಸಮ್ಮತಿ ನೀಡಿತ್ತು. ‘‘ವಿಶ್ವಕಪ್‌ನ ರ್ಯಾಪಿಡ್ ಫೈಯರ್ ವಿಭಾಗದಲ್ಲಿ ಸ್ಪರ್ಧಿಸುವ ಇಬ್ಬರು ಶೂಟರ್‌ಗಳಾದ ಜಿಎಂ ಬಶೀರ್ ಹಾಗೂ ಖಲೀಲ್ ಅಹ್ಮದ್‌ಗಾಗಿ ಪಾಕ್ ವೀಸಾಕ್ಕಾಗಿ ಅರ್ಜಿ ಸಲ್ಲಿಸಿತ್ತು. ಕೋಚ್ ಹಾಗೂ ಪಾಕ್‌ನ ಇಬ್ಬರು ರೈಫಲ್ ಶೂಟರ್‌ಗಳು ಫೆ.20 ರಂದು ಭಾರತಕ್ಕೆ ಬರುವ ನಿರೀಕ್ಷೆಯಿದೆ’’ಎಂದು ಭಾಟಿಯಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X