Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕಾರು ಅಪಘಾತದಲ್ಲಿ ಇಬ್ಬರ ಮೃತ್ಯು’...

‘ಕಾರು ಅಪಘಾತದಲ್ಲಿ ಇಬ್ಬರ ಮೃತ್ಯು’ ದುರಾದೃಷ್ಟಕರ: ಶಾಸಕ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ19 Feb 2019 8:44 PM IST
share
‘ಕಾರು ಅಪಘಾತದಲ್ಲಿ ಇಬ್ಬರ ಮೃತ್ಯು’ ದುರಾದೃಷ್ಟಕರ: ಶಾಸಕ ಸಿ.ಟಿ.ರವಿ

ಬೆಂಗಳೂರು, ಫೆ.19: ಕುಣಿಗಲ್ ಬಳಿ ಇಂದು ಮುಂಜಾನೆ ಕಾರು ಢಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದು ದುರಾದೃಷ್ಟಕರ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮೂಗು ಹಾಗೂ ಎದೆಯ ಭಾಗಕ್ಕೆ ಗಾಯವಾಗಿದೆ. ದುರಾದೃಷ್ಟಕರವಾಗಿ ಇಬ್ಬರು ಯುವಕರು ದುರ್ಮರಣ ಹೊಂದಿದ್ದಾರೆ ಎಂದರು.

ತಮಿಳುನಾಡಿನ ಚೆನ್ನೈನಲ್ಲಿ ಆಯೋಜಿಸಲಾಗಿರುವ ಪ್ರಧಾನಿ ನರೇಂದ್ರಮೋದಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಬೆಳಗ್ಗೆಯೇ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡಬೇಕಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿಯೇ ಮನೆಯಿಂದ ಹೊರಟಿದ್ದೆ ಎಂದು ಅವರು ಹೇಳಿದರು.

ನನ್ನ ವಾಹನವನ್ನು ಆಕಾಶ್ ಎಂಬವರು ಚಾಲನೆ ಮಾಡುತ್ತಿದ್ದರು. ನಾನು ಕಾರಿನಲ್ಲಿ ನಿದ್ದೆ ಮಾಡುತ್ತಿದ್ದೆ. ಅಲ್ಲದೇ, ನಾನು ಅವರನ್ನು 100 ಕಿ.ಮೀ. ವೇಗದ ಒಳಗೆಯೇ ಕಾರು ಚಾಲನೆ ಮಾಡುವಂತೆ ಸೂಚಿಸಿದ್ದೆ. ನನಗೆ ನಿದ್ದೆಯಿಂದ ಎಚ್ಚರವಾದಾಗ ಕಾರಿನ ಏರ್ ಬ್ಯಾಗ್ ತೆರೆದಿತ್ತು. ಕಾರಿನ ಬಾಗಿಲನ್ನು ಯಾರು ತೆರೆದದ್ದು ಗೊತ್ತಿಲ್ಲ. ಅದಾಗಲೇ ಅಪಘಾತವಾಗಿತ್ತು ಎಂದು ಸಿ.ಟಿ.ರವಿ ಹೇಳಿದರು.

ಘಟನೆಯಲ್ಲಿ ಮೃತಪಟ್ಟವರು ಪ್ರವಾಸಕ್ಕೆ ಹೋಗಿ ಹಿಂದಿರುಗುತ್ತಿದ್ದವರು ಎಂದು ತಿಳಿಯಿತು. ಘಟನೆ ಬಗ್ಗೆ ಚಾಲಕನನ್ನು ವಿಚಾರಿಸಿದಾಗ ಎದುರುಗಡೆ ಲಾರಿ ಇತ್ತು. ಹಾಗಾಗಿ, ವಾಹನವನ್ನು ಮತ್ತೊಂದು ಬದಿಗೆ ಚಲಿಸಿದೆ, ಇದರಿಂದಾಗಿ ಅಪಘಾತವಾಯಿತೆಂದು ತಿಳಿಸಿದರು. ಸಾರ್ವಜನಿಕ ಕ್ಷೇತ್ರದಲ್ಲಿರುವ ನಾನು ಮದ್ಯಪಾನ ಮಾಡಿರಲಿಲ್ಲ. ನಾನು ವಾಹನ ಚಾಲನೆ ಮಾಡುವ ಅಭ್ಯಾಸವನ್ನು ಬಿಟ್ಟಿದ್ದೇನೆ ಎಂದು ರವಿ ಹೇಳಿದರು.

ಕೂಡಲೇ, ಹುಲಿಯೂರು ದುರ್ಗದ ಆಂಬ್ಯುಲೆನ್ಸ್ ಅನ್ನು ಅಪಘಾತ ನಡೆದ ಸ್ಥಳಕ್ಕೆ ಕರೆಸಿದೆ. ಅಲ್ಲದೇ, ಕುಣಿಗಲ್ ಕೃಷ್ಣ ಕುಮಾರ್‌ಗೆ ವಿಷಯ ಮುಟ್ಟಿಸಿದೆ. ಅವರೂ, ಆ ಸಂದರ್ಭದಲ್ಲಿ ಸ್ಥಳಕ್ಕೆ ಬಂದರು. ನಂತರವಷ್ಟೇ ನಾನು ಬೆಂಗಳೂರಿಗೆ ಬಂದು ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದೆ ಎಂದು ಅವರು ವಿವರಣೆ ನೀಡಿದರು.

ಮೃತಪಟ್ಟ ಯುವಕರ ಕುಟುಂಬದವರಿಗೆ ನಾನು ಹೇಗೆ ಧೈರ್ಯ ಹೇಳಲಿ ಎಂಬುದು ಗೊತ್ತಾಗುತ್ತಿಲ್ಲ. ಭಗವಂತನೇ ಅವರಿಗೆ ಧೈರ್ಯ ಕೊಡಬೇಕು. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಸ್ವಲ್ಪ ದಿನಗಳ ನಂತರ ಆ ಯುವಕರ ಮನೆಗೆ ಭೇಟಿ ನೀಡುತ್ತೇನೆ ಎಂದು ರವಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X