Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಗರ್ ಹುಕುಂ ಸಾಗುವಳಿ ಸಕ್ರಮಕ್ಕೆ...

ಬಗರ್ ಹುಕುಂ ಸಾಗುವಳಿ ಸಕ್ರಮಕ್ಕೆ ಆಗ್ರಹಿಸಿ ರೈತರ ಧರಣಿ

ವಾರ್ತಾಭಾರತಿವಾರ್ತಾಭಾರತಿ19 Feb 2019 9:50 PM IST
share
ಬಗರ್ ಹುಕುಂ ಸಾಗುವಳಿ ಸಕ್ರಮಕ್ಕೆ ಆಗ್ರಹಿಸಿ ರೈತರ ಧರಣಿ

ಬೆಂಗಳೂರು, ಫೆ.19: ಬಗರ್ ಹುಕುಂ ಸಾಗುವಳಿ ಸಕ್ರಮ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷಿ ಕೂಲಿಕಾರ್ಮಿಕರು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಮುಂಖಡರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಂಗಳವಾರ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ ಉದ್ಯಾನದವರೆಗೆ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಿದ ಕೂಲಿಕಾರರು, ತಮ್ಮ ಬೇಡಿಕೆ ಈಡೇರಿಸುವಂತೆ, ಮುಖ್ಯಮಂತ್ರಿಯವರ ಗೃಹ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಿ.ಸಿ.ಬಯ್ಯಿರೆಡ್ಡಿ ಮಾತನಾಡಿ, ಕೃಷಿ ಕಾರ್ಮಿಕರು 15 ವರ್ಷಗಳಿಂದ ನಡೆಸಿದ ಹೋರಾಟದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮುತುವರ್ಜಿಯಿಂದ ಗೋಮಾಳ ಭೂಮಿಯನ್ನು ಉಳುಮೆ ಮಾಡುತ್ತಿದ್ದ ಬಗರ್ ಹುಕುಂ ಸಾಗುವಳಿ ರೈತರಿಗೆ ಸಕ್ರಮ ಮಾಡಲು ಅಗತ್ಯವಿದ್ದ ಕಂದಾಯ ಕಾನೂನುಗೆ ತಿದ್ದಪಡಿ ಹಾಗೂ ವಿಶೇಷವಾಗಿ ಬಗರ್‌ಹುಕುಂ ಸಾಗುವಳಿಯ ಸಕ್ರಮಕ್ಕಾಗಿ ಹೊಸದಾಗಿ ಅರ್ಜಿ ಹಾಕಿಕೊಳ್ಳಲು ಅವಕಾಶ ನೀಡುವ ಮತ್ತೊಂದು ತಿದ್ದುಪಡಿಯನ್ನು ಹಿಂದಿನ ಸರಕಾರ ಮಾಡಿತು. ಆದರೆ, ಅದು ಇಲ್ಲಿಯತನಕ ಅನುಷ್ಠಾನವಾಗದೆ ರೈತರು ಸಮಸ್ಯೆಗೆ ಸಿಲುಕುವಂತಾಗಿದೆ ಎಂದು ತಿಳಿಸಿದರು.

ರಾಜ್ಯ ಸರಕಾರದ ತೀರ್ಮಾನದ ಭಾಗವಾಗಿ ಫಾರಂ ನಂ.57ನ್ನು ಬಿಡುಗಡೆ ಮಾಡಿ ಮಾ.16, 2019ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಫಾರಂ ನಂ.57ನ್ನು ವಿತರಣೆ ಮಾಡುವ ಹಾಗೂ ಸ್ವೀಕರಿಸುವ ಸಂಬಂಧಪಟ್ಟ ಅನೇಕ ಗೊಂದಲಗಳು ಉಂಟಾಗಿವೆ. ಕೋಲಾರ ಜಿಲ್ಲೆಗಳಲ್ಲಿ ಈ ತನಕ ಅರ್ಜಿಗಳನ್ನೇ ಸ್ವೀಕರಿಸುತ್ತಿಲ್ಲ. ತುಮಕೂರು ಜಿಲ್ಲೆಯ ಗುಬ್ಬಿ, ಶಿರಾ ಸೇರಿದಂತೆ ವಿವಿಧ ತಾಲೂಕು ಆಫೀಸ್‌ನಲ್ಲಿ ದಿನಕ್ಕೆ ಕಚೇರಿ ಸೀಲ್‌ನೊಂದಿಗೆ ನಿಗದಿತ ಸಂಖ್ಯೆಯಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ಒಳಗೊಂಡು ಹಲವಾರು ಜಿಲ್ಲೆಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗಡಿಯಿಂದ 18 ಕಿ.ಮೀ. ಬೇರೆ ಮಹಾನಗರ ಪಾಲಿಕೆಗಳ ಗಡಿಗಳಿಂದ 10 ಕಿ.ಮೀ. ನಗರ ಸಭೆಯ ಗಡಿಗಳಿಂದ 5 ಕಿ.ಮೀ ಹಾಗೂ ಪುರಸಭೆ ಗಡಿಗಳಿಂದ 3 ಕಿ.ಮೀ ವ್ಯಾಪ್ತಿಯೊಳಗೆ ನಿಮ್ಮ ಭೂಮಿ ಬರುವುದರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲವೆಂದು ತಾಲೂಕು ಮಟ್ಟದಲ್ಲಿ ಹೇಳುತ್ತಿದ್ದಾರೆ. ಆದರೆ, ಅಂತಹ ಯಾವುದೇ ಸೂಚನೆ ಅಥವಾ ಸುತ್ತೋಲೆಗಳನ್ನು ತಾವು ಕಳುಹಿಸಿಲ್ಲವೆಂದು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಜೀವನ ಸಾಗಿಸುವುದೇ ಕಷ್ಟವಾಗಿರುವ ಈ ಸಂದರ್ಭದಲ್ಲಿ ಬಡವರು ಅರ್ಜಿ ಸಲ್ಲಿಸಿದರೂ, ಇಲ್ಲಿಯ ತನಕ ನಿವೇಶನವಾಗಲಿ ಮನೆಯಾಗಲಿ ಸರಕಾರ ಮಂಜೂರು ಮಾಡಿಲ್ಲ. ಹಾಗಾಗಿ, ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಯ ಮಂತ್ರಿಗಳು ಸಮಸ್ಯೆಯನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X