Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಕ್ಸಿಂಗ್: ಚಿನ್ನಕ್ಕೆ ಕೊರಳೊಡ್ಡಿದ...

ಬಾಕ್ಸಿಂಗ್: ಚಿನ್ನಕ್ಕೆ ಕೊರಳೊಡ್ಡಿದ ಝರೀನ, ಮೀನಾಕುಮಾರಿ

48 ಕೆ.ಜಿ. ವಿಭಾಗದಲ್ಲಿ ಮಂಜುರಾಣಿಗೆ ಬೆಳ್ಳಿ

ವಾರ್ತಾಭಾರತಿವಾರ್ತಾಭಾರತಿ19 Feb 2019 11:23 PM IST
share
ಬಾಕ್ಸಿಂಗ್: ಚಿನ್ನಕ್ಕೆ ಕೊರಳೊಡ್ಡಿದ ಝರೀನ, ಮೀನಾಕುಮಾರಿ

ಸೋಫಿಯ(ಬಲ್ಗೇರಿಯ), ಫೆ.19: ಮಾಜಿ ಜೂನಿಯರ್ ವಿಶ್ವ ಚಾಂಪಿಯನ್ ನಿಖತ್ ಝರೀನ ಹಾಗೂ ಮೀನಾಕುಮಾರಿ ಮಂಗಳವಾರ ಸ್ಟ್ರಾಂಜಾ ಸ್ಮಾರಕ ಬಾಕ್ಸಿಂಗ್ ಟೂರ್ನಿಯಲ್ಲಿ ಚಿನ್ನದ ಪದಕಗಳಿಗೆ ಮುತ್ತಿಕ್ಕಿದ್ದಾರೆ. ಆ ಮೂಲಕ ಟೂರ್ನಿಯಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳಾ ಬಾಕ್ಸರ್‌ಗಳು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಹಲವು ಬಾರಿ ರಾಷ್ಟ್ರೀಯ ಪದಕ ಗೆದ್ದಿರುವ ಝರೀನ 51 ಕೆ.ಜಿ. ವಿಭಾಗದ ಫೈನಲ್ ಪಂದ್ಯದಲ್ಲಿ ಫಿಲಿಪ್ಪೀನ್ಸ್‌ನ ಐರಿಷ್ ಮ್ಯಾಗ್ನೊ ವಿರುದ್ಧ 5-0 ಅಂಕಗಳ ಅಂತರದ ಜಯ ಸಾಧಿಸಿದರು. ಫೈನಲ್ ಪಂದ್ಯದುದ್ದಕ್ಕೂ ಪಾರಮ್ಯ ಮೆರೆದ ಝರೀನ ಅಂತಿಮ ಪಂದ್ಯದಲ್ಲಿ ಪ್ರಬಲ ರಕ್ಷಣಾತ್ಮಕ ಆಟದಿಂದ ಗಮನ ಸೆಳೆದರು. ಕೊನೆಯವರೆಗೂ ನಿಕಟ ಪೈಪೋಟಿ ಕಂಡುಬಂದ ಪಂದ್ಯದಲ್ಲಿ ಎದುರಾಳಿಗೆ ಒಂದೂ ಅಂಕ ಬಿಟ್ಟುಕೊಡದೇ ಗೆಲುವಿನ ನಗೆ ಬೀರಿದರು.

ಮತ್ತೊಂದೆಡೆ ಮೀನಾಕುಮಾರಿ ದೇವಿ 54 ಕೆ.ಜಿ. ಬಾಟಮ್‌ವೇಟ್ ವಿಭಾಗದಲ್ಲಿ ಫಿಲಿಪ್ಪೀನ್ಸ್‌ನವರೇ ಆದ ಐರಾ ವಿಲ್ಲೇಗಾಸ್ ಅವರನ್ನು 3-2 ಅಂಕಗಳ ಅಂತರದಿಂದ ಮಣಿಸಿ ಸಂಭ್ರಮಿಸಿದರು. ಪ್ರತಿಷ್ಠಿತ ಟೂರ್ನಿಯ ಕಳೆದ ಆವೃತ್ತಿಯಲ್ಲಿ ಕಂಚಿನ ಪದಕಕ್ಕೆ ತೃಪ್ತರಾಗಿದ್ದ ದೇವಿ, ಎದುರಾಳಿ ವಿಲ್ಲೆಗಾಸ್ ವಿರುದ್ಧ ದಿಟ್ಟ ಆಟದ ಮೂಲಕ ತನ್ನ ಪ್ರದರ್ಶನ ಉತ್ತಮಪಡಿಸಿಕೊಂಡರು.

ಆಕ್ರಮಣಕಾರಿ ಎದುರಾಳಿ ಎದುರು ಪ್ರತಿದಾಳಿಯ ಮೂಲಕ ಗಮನ ಸೆಳೆದ ದೇವಿ, ಅಂತಿಮವಾಗಿ ಚಿನ್ನದ ಗರಿ ಮುಡಿಗೇರಿಸಿಕೊಂಡರು.

ಆದಾಗ್ಯೂ 48 ಕೆ.ಜಿ. ವಿಭಾಗದಲ್ಲಿ ಮಂಜುರಾಣಿ ಫಿಲಿಪ್ಪೀನ್ಸ್‌ನ ಜೋಸಿ ಗಾಬುಕೊ ವಿರುದ್ಧ 2-3 ಅಂತರದಿಂದ ಮಣಿದು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.

►ಕಂಚಿನ ಪದಕಕ್ಕೆ ತೃಪ್ತಿಪಟ್ಟ ಮೂವರು

ಸೊೀಮವಾರ ತಮ್ಮ ಸೆಮಿಫೈನಲ್ ಪಂದ್ಯಗಳಲ್ಲಿ ಸೋಲು ಅನುಭವಿಸುವ ಮೂಲಕ ಪ್ವಿಲೊ ಬಾಸುಮತಾರಿ(64 ಕೆ.ಜಿ.), ನೀರಜ್(60 ಕೆ.ಜಿ.) ಹಾಗೂ ಲವ್ಲಿನಾ ಬೊರ್ಗೊಹೈನ್(69 ಕೆ.ಜಿ.) ಕಂಚಿನ ಪದಕಗಳಿಗೆ ತೃಪ್ತಿಪಟ್ಟರು.  2018ರ ಆವೃತ್ತಿಯಲ್ಲಿ ಭಾರತ ಒಟ್ಟು 11 ಪದಕಗಳನ್ನು ಗೆದ್ದಿದ್ದು ಅದರಲ್ಲಿ ಎರಡು ಬಂಗಾರದ ಪದಕಗಳಿದ್ದವು. ಅದು ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನ ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X