Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸೊರಕೆ ಬಗ್ಗೆ ಮುಸ್ಲಿಂ ಸಂಘಟನೆ ಒಕ್ಕೂಟದ...

‘ಸೊರಕೆ ಬಗ್ಗೆ ಮುಸ್ಲಿಂ ಸಂಘಟನೆ ಒಕ್ಕೂಟದ ತಪ್ಪುಗ್ರಹಿಕೆ’

ವಾರ್ತಾಭಾರತಿವಾರ್ತಾಭಾರತಿ20 Feb 2019 9:04 PM IST
share

ಉಡುಪಿ, ಫೆ.20: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಲ್ಪಸಂಖ್ಯಾತ ವಿರೋಧಿ ಎಂಬ ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಆಶ್ರಫ್‌ ಅವರ ಹೇಳಿಕೆ ಸಂಪೂರ್ಣ ತಪ್ಪುಕಲ್ಪನೆ ಮತ್ತು ಪೂರ್ವಾಗ್ರಹ ಪೀಡಿತ ವಾದುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಟೀಕಿಸಿದ್ದಾರೆ.

ಎಲ್ಲಾ ವರ್ಗಗಳನ್ನು ಸಮಾನವಾಗಿ ಕಾಣುವ ಸೊರಕೆ, ಚುನಾವಣೆಗಳಲ್ಲಿ ಮುಸ್ಲಿಂ ಮತ್ತು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನಿರಾಕರಿಸಿದ್ದರು ಎನ್ನುವುದು ಆಧಾರ ರಹಿತ ಆರೋಪವಾಗಿದೆ. ಈ ಹಿಂದೆ ಅವರು ಸ್ಪರ್ಧಿಸಿದ ಎಲ್ಲಾ ಚುನಾವಣೆಗಳಲ್ಲೂ ಕೂಡಾ ಮುಸ್ಲಿಂ ಹಾಗೂ ಅಲ್ಪಸಂಖ್ಯಾತ ವರ್ಗದವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು. ಸೊರಕೆ ಪಕ್ಷದಲ್ಲಿ ಅವಕಾಶವಿದ್ದ ಸಂದರ್ಭದಲ್ಲ್ಲಿ ಮುಸ್ಲಿಂ ಮತ್ತು ಅಲ್ಪಸಂಖ್ಯಾತ ಪ್ರತಿನಿಧಿ ಗಳಿಗೆ ಅವಕಾಶವನ್ನು ಕೊಡುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿದ್ದನ್ನು ನಾವು ಸ್ವತಃ ಕಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಮುಸ್ಲಿಮರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಇತರರು ಮತ ನೀಡೋದಿಲ್ಲ ಎಂಬ ಹೇಳಿಕೆಯನ್ನು ಸೊರಕೆ ಎಂದೂ ನೀಡಿಲ್ಲ. ಇದು ಜಿಪಂ ಚುನಾವಣಾ ಸಂದರ್ಭದಲ್ಲಿ ವಿರೋಧಿಗಳು ಮಾಡಿದ ಅಪಪ್ರಚಾರ. ಈ ಅಪಪ್ರಚಾರದ ಹೇಳಿಕೆಗೆ ಸೊರಕೆಯವರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಸೊರಕೆಯವರು ಈಗಾಗಲೇ ಪುತ್ತೂರಿನ ಶಾಸಕರಾಗಿ, ಉಡುಪಿ ಸಂಸದ ರಾಗಿ, ಕಾಪು ಶಾಸಕರಾಗಿ ಆಯ್ಕೆಯಾಗಿರುವುದು ಎಲ್ಲಾ ವರ್ಗಗಳ ಬೆಂಬಲ ದಿಂದ. ಹೀಗಾಗಿ ಮುಸ್ಲಿಂ ಮತ್ತು ಅಲ್ಪಸಂಖ್ಯಾತರು ಸೊರಕೆಯವರಿಗೆ ಸದಾ ಬೆಂಬಲವಾಗಿ ನಿಂತಿದ್ದಾರೆ ಎನ್ನುವುದು ಸ್ಪಷ್ಟ ಎಂದು ಅವರು ತಿಳಿಸಿದ್ದಾರೆ.

ಜನರಲ್ಲಿ ಸದಾ ಗೊಂದಲ ಮೂಡಿಸುವುದು ಕಿಡಿಗೇಡಿಗಳ ಮತ್ತು ವಿರೋಧಿಗಳ ಹಿಡನ್ ಅಜೆಂಡಾ. ಈ ಹೇಳಿಕೆ ಆ ಅಜೆಂಡದ ಭಾಗವಾಗಿದೆ. ಸ್ಪಷ್ಟವಾದ ಜಾತ್ಯಾತೀತ ನಿಲುವನ್ನು ಹೊಂದಿರುವ ಸೊರಕೆಯವರ ಬಗ್ಗೆ ಮುಸ್ಲಿಂ ಮತ್ತು ಅಲ್ಪಸಂಖ್ಯಾತ ಸಮುದಾಯದ ಯಾರೂ ತಪ್ಪು ಅಭಿಪ್ರಾಯಕ್ಕೆ ಬರಬಾರದು ಮತ್ತು ಪೂರ್ವಾಗ್ರಹ ಪೀಡಿತರ ಈ ಹುನ್ನಾರವನ್ನು ಖಂಡಿಸ ಬೇಕಾಗಿದೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಹಬೀಬ್ ಅಲಿ, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಪಿ. ಇಬ್ರಾಹಿಂ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಿಯಾಝ್ ಪಳ್ಳಿ ಪತ್ರಿಕಾ ಹೇಳಿಕೆಯಲ್ಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X