Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಜಾಲತಾಣದ ದ್ವೇಷದ ಮಾತುಗಳು...

ಸಾಮಾಜಿಕ ಜಾಲತಾಣದ ದ್ವೇಷದ ಮಾತುಗಳು ಬಹುಮತದ ಅಭಿಪ್ರಾಯವಲ್ಲ: ಅಜಯ್ ದೇವಗನ್

ವಾರ್ತಾಭಾರತಿವಾರ್ತಾಭಾರತಿ20 Feb 2019 10:31 PM IST
share
ಸಾಮಾಜಿಕ ಜಾಲತಾಣದ ದ್ವೇಷದ ಮಾತುಗಳು ಬಹುಮತದ ಅಭಿಪ್ರಾಯವಲ್ಲ: ಅಜಯ್ ದೇವಗನ್

 ಹೊಸದಿಲ್ಲಿ, ಫೆ.20: ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ದ್ವೇಷದ ಮಾತಿನಂತಹ ಕೆಲವು ದಾರಿತಪ್ಪಿಸುವ ಘಟನೆಗಳು ಬಹುಮತದ ಅಭಿಪ್ರಾಯ ಎನ್ನಲಾಗದು. ಸಮಸ್ಯೆಯನ್ನು ಸೃಷ್ಟಿಸಲು ಯತ್ನಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿಲ್ಲ ಎಂದು ಹಿಂದಿ ನಟ ಅಜಯ್ ದೇವಗನ್ ಹೇಳಿದ್ದಾರೆ.

ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿಯ ಬಳಿಕ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಹಾಗೂ ಜನರಿಗೆ ದೇಶದ ವಿವಿಧೆಡೆ ಕಿರುಕುಳ ನೀಡುತ್ತಿರುವ ವರದಿಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ, ಕಾಶ್ಮೀರ ವಿದ್ಯಾರ್ಥಿಗಳ ಮತ್ತು ಜನತೆಯ ಸುರಕ್ಷತೆ ಮತ್ತು ಭದ್ರತೆಗೆ ಕ್ರಮ ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಈ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸುತ್ತಿದ್ದರು.

ಇಡೀ ದೇಶದ ಜನತೆ ಈ ರೀತಿ ಮಾಡುತ್ತಾರೆ ಎಂದು ಹೇಳಲಾಗದು. ಕೆಲವು ಜನರಿಗೆ ಸಮಸ್ಯೆ ಸೃಷ್ಟಿಸುವುದರಲ್ಲಿ ವಿಶೇಷ ಆನಂದ ದೊರಕುತ್ತದೆ. ಇಂತಹ ಘಟನೆಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವರದಿಯನ್ನು ಗಮನಿಸಿ, ಇಡೀ ದೇಶವೇ ಕೊಳಕು ಎನ್ನಲಾಗದು ಎಂದು ದೇವಗನ್ ಹೇಳಿದರು.

 ಅಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಸುದ್ದಿಯ ಬಗ್ಗೆ ನಾವು ಜಾಗರೂಕರಾಗಿರಬೇಕು. ಯಾವುದು ಸತ್ಯವೋ ಅವನ್ನು ಮಾತ್ರ ಸ್ವೀಕರಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವೊಂದು ಕೆಡುಕುಗಳಿವೆ ಮತ್ತು ಜನರೇ ಈ ಬಗ್ಗೆ ನಿರ್ಧರಿಸಲು ಮುಂದಾಗಿರುವುದು ಸರಿಯಲ್ಲ ಎಂದರು.

 ಸಿನೆಮದ ಬಗ್ಗೆ ಉಲ್ಲೇಖಿಸಿದ ಅವರು, ನಾವು ಯಾವುದೇ ಧರ್ಮ ಅಥವಾ ಪಂಗಡದ ಬಗ್ಗೆ ತಮಾಷೆ ಮಾಡುವುದಿಲ್ಲ. ನಾವು ಯಾರ ಬಗ್ಗೆಯೂ ತಮಾಷೆ ಮಾಡುವುದಿಲ್ಲ. ನಾವು ನಟಿಸುವಾಗ ಯಾವಾಗಲೂ ತುಂಬಾ ಜಾಗರೂಕತೆ ವಹಿಸುತ್ತೇವೆ. ಆದ್ದರಿಂದ ಜನತೆಗೆ ನೋವಾಗುವಂತಹ ವಿಷಯಗಳನ್ನು ಸಿನೆಮದಲ್ಲಿ ಸೇರಿಸುವುದಿಲ್ಲ. ಕೆಲವೊಮ್ಮೆ ಉದ್ದೇಶವಿಲ್ಲದೇ ಕೆಲವೊಂದು ವಿಷಯಗಳು ನಡೆಯುತ್ತವೆ ಮತ್ತು ಇಂದಿನ ದಿನದಲ್ಲಿ ಯಾರು ಕೂಡಾ ನ್ಯಾಯಾಲಯದ ಮಾತನ್ನೂ ಕೇಳುತ್ತಿಲ್ಲ. ಒಂದು ಸಿನೆಮ ಪ್ರದರ್ಶನವಾಗಲು ಬಿಡುವುದಿಲ್ಲ ಎಂದು ಜನತೆ ದೃಢ ನಿಶ್ಚಯ ಮಾಡಿಕೊಂಡರೆ, ನ್ಯಾಯಾಲಯದ ಆದೇಶವಿದ್ದರೂ ಸಿನೆಮ ಸುಸೂತ್ರವಾಗಿ ಪ್ರದರ್ಶನ ಕಾಣಲು ಕಷ್ಟವಾಗುತ್ತದೆ. ನೀವು ಈ ಬಗ್ಗೆ ಏನು ಮಾಡಲೂ ಸಾಧ್ಯವಿಲ್ಲ ಎಂದು ದೇವಗನ್ ಹೇಳಿದರು.

ಇಂದ್ರಕುಮಾರ್ ನಿರ್ದೇಶನದ ‘ಟೋಟಲ್ ಧಮಾಲ್’ ಸಿನೆಮದ ಪ್ರೊಮೋಷನ್ ಕಾರ್ಯಕ್ರಮದಲ್ಲಿ ದೇವಗನ್ ಮಾಧ್ಯಮದವರೊಂದಿಗೆ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X