Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ನಗರಸಭೆ ಸಾಮಾನ್ಯ ಸಭೆ:...

ಚಿಕ್ಕಮಗಳೂರು ನಗರಸಭೆ ಸಾಮಾನ್ಯ ಸಭೆ: ಹುತಾತ್ಮ ಯೋಧ ಗುರು ಕುಟುಂಬಕ್ಕೆ 3 ಲಕ್ಷ ರೂ. ನೀಡಲು ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ20 Feb 2019 11:51 PM IST
share
ಚಿಕ್ಕಮಗಳೂರು ನಗರಸಭೆ ಸಾಮಾನ್ಯ ಸಭೆ: ಹುತಾತ್ಮ ಯೋಧ ಗುರು ಕುಟುಂಬಕ್ಕೆ 3 ಲಕ್ಷ ರೂ. ನೀಡಲು ನಿರ್ಣಯ

ಚಿಕ್ಕಮಗಳೂರು,ಫೆ.20: ಉಗ್ರರ ದಾಳಿಯಲ್ಲಿ ಇತ್ತೀಚೆಗೆ ವೀರಮರಣ ಹೊಂದಿದ ಮಂಡ್ಯ ಜಿಲ್ಲೆಯ ವೀರಯೋಧ ಎಚ್.ಗುರು ಕುಂಟುಂಬಕ್ಕೆ ನಗರಸಭೆ ಮತ್ತು ನಗರಸಭೆ ಸದಸ್ಯರಿಂದ ಮೂರು ಲಕ್ಷ ರೂ. ನೀಡಲಾಗುವುದೆಂದು ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್ ಅಧ್ಯಕ್ಷತೆಯಲ್ಲಿ ಬುಧವಾರ ನಗರಸಭೆ ಸಂಭಾಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರಸಭೆ ಸದಸ್ಯ ಟಿ.ರಾಜಶೇಖರ್ ಮಾತನಾಡಿ, ವೀರಯೋಧ ಎಚ್.ಗುರು ಅವರ ಕುಟುಂಬಕ್ಕೆ ನಗರಸಭೆ ಹಾಗೂ ಸದಸ್ಯರ ಒಂದು ತಿಂಗಳ ಗೌರವಧನ ನೀಡಲು ನಿರ್ಧಾರ ಮಾಡಬೇಕು. ನಗರಸಭೆ ಎಲ್ಲಾ ಸದಸ್ಯರು ಎಚ್.ಗುರು ಅವರ ಕುಟುಂಬಕ್ಕೆ ಭೇಟಿ ನೀಡಿ 2 ಲಕ್ಷ ರೂ. ಚೆಕ್ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಎರಡು ಲಕ್ಷದ ಜೊತೆಗೆ ನಗರಸಭೆ ಮಾಜಿ ಅಧ್ಯಕ್ಷರು ಇನ್ನಷ್ಟು ಹಣ ಸೇರಿಸಿ ಗುರು ಅವರ ಕುಟುಂಬಕ್ಕೆ ಮೂರು ಲಕ್ಷ ರೂ. ನೀಡುವಂತೆ ತಿಳಿಸಿದರು. ಇದಕ್ಕೆ ಎಲ್ಲಾ ಸದಸ್ಯರು ಒಮ್ಮತ ಸಮ್ಮತಿಸಿದರು.

ನಂತರ ಮಾತನಾಡಿದ ಸದಸ್ಯ ಎಚ್.ಡಿ.ತಮಯ್ಯ, ಇತ್ತೀಚೆಗೆ ಲಿಂಗೈಕ್ಯರಾದ ಸಿದ್ಧಗಂಗಾ ಮಠದ ಡಾ. ಶಿವಕುಮಾರ್ ಸ್ವಾಮೀಜಿ ಅವರ ನೆನಪಿನಾರ್ಥವಾಗಿ ನಗರದ ಯಾವುದಾದರೂ ರಸ್ತೆಗೆ ಅವರ ಹೆಸರು ಇಡುವಂತೆ ಸಭೆಗೆ ತಿಳಿಸಿದಾಗ, ಮುಂದಿನ ದಿನಗಳಲ್ಲಿ ನಗರದ ಯಾವುದಾದರೊಂದು ರಸ್ತೆಗೆ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರಿಡುವುದಾಗಿ ನಗರಸಭೆ ಅಧ್ಯಕ್ಷೆ ಶಿಲ್ಪಾರಾಜಶೇಖರ್ ತಿಳಿಸಿದರು.

ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ನಗರದ ಎಂ.ಜಿ ರಸ್ತೆ ಹಾಗೂ ಐ.ಜಿ ರಸ್ತೆ ವಾಹನ ನಿಲುಗಡೆಗೆ ಪಾರ್ಕಿಂಗ್ ಶುಲ್ಕ ವಸೂಲಿ ಟೆಂಡರ್ ಗೆ ತಮ್ಮ ಪಕ್ಷದ ವಿರೋಧವಿದೆ. ಇದನ್ನು ಕಡತದಲ್ಲಿ ನಮೂದಿಸುವಂತೆ ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಸದಸ್ಯರ ನಡುವೆ ಚರ್ಚೆ ನಡೆದ ನಂತರ ಕಾಂಗ್ರೆಸ್ ಪಕ್ಷದ ವಿರೋಧವನ್ನು ಕಡತದಲ್ಲಿ ನಮೂದಿಸಲು ಸಮ್ಮತಿ ಸೂಚಿಸಿದರು. 

ಯುಜಿಡಿ ಕಾಮಗಾರಿ ಪ್ರಗತಿಯ ಬಗ್ಗೆ ಸದಸ್ಯ ರೂಬೀನ್ ಮೊಸೆಸ್ ಸಭೆಯಲ್ಲಿ ಪ್ರಸ್ತಾಪಿಸಿದಾಗ, ಯುಜಿಡಿ ಕಾಮಗಾರಿ ಸಾಕಷ್ಟು ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯಕ್ಕೆ ಮನೆ ಮನೆ ಸಂಪರ್ಕ ನೀಡುವುದಾಗಿ ಅಧಿಕಾರಿ ತಿಳಿಸಿದರು. ನಗರಸಭೆ ಆಯುಕ್ತೆ ತುಷಾರಮಣಿ ಮಾತನಾಡಿ, ಯುಜಿಡಿ ಪೈಪ್‍ಲೈನ್ ಕೊಳಚೆ ಸಮರ್ಪಕವಾಗಿ ಸಾಗುತ್ತದೆಯೇ ಎಂಬುದನ್ನು ಪ್ರಾಯೋಗಿಕವಾಗಿ ಪರೀಕ್ಷಿಸಬೇಕು. ತಕ್ಷಣವೇ ಪ್ರಾಯೋಗಿಕ ಪರೀಕ್ಷೆ ನಡೆಸುವಂತೆ ಅಧಿಕಾರಿಗೆ ತಿಳಿಸಿದರು. ಸದಸ್ಯ ರೂಬಿನ್ ಮೊಸೆಸ್ ಮಾತನಾಡಿ ಕಾಮಗಾರಿ ಶೀಘ್ರದಲ್ಲಿಯೇ ಮುಗಿಸುವಂತೆ ತಿಳಿಸಿದರು.

ಸದಸ್ಯ ಎಚ್.ಡಿ.ತಮ್ಮಯ್ಯ ಮಾತನಾಡಿ, ನಗರದ ಕೆಲ ಭಾಗದಲ್ಲಿ ಬೀದಿದೀಪದ ಸಮಸ್ಯೆ ಇದೆ. ಬೀದಿದೀಪದ ಸಮಸ್ಯೆಯಿಂದ ಮನೆಗಳ್ಳತನ, ಸರಗಳ್ಳತನ ಪ್ರಕರಣ ನಡೆಯುತ್ತಿದೆ. ಹಾಳಾಗಿರುವ ಬೀದಿದೀಪ ಸರಿಪಡಿಸಿ ಹೈಮಾಸ್ಕ್ ದೀಪ ಅಳವಡಿಸುವಂತೆ ಒತ್ತಾಯಿಸಿದರು. ಹಾಗೂ ನಗರದ ಕೆಲ ಭಾಗದಲ್ಲಿ ಬೀದಿಬಾಯಿಗಳ ಕಾಟ ಹೆಚ್ಚಾಗಿದೆ. ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು. 

ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಡಾ.ಶಿವಕುಮಾರ್ ಸ್ವಾಮೀಜಿ, ಅಂಬರೀಶ್, ಅನಂತ್ ಕುಮಾರ್ ಸೇರಿದಂತೆ ಗಣ್ಯರಿಗೆ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು. ಸಭೆಯಲ್ಲಿ ನಗರಸಭೆ ಉಪಧ್ಯಕ್ಷ ಸುಧೀರ್, ಸದಸ್ಯರಾದ ಲೀಲಾ, ಕವಿತಾ, ರೂಬೆನ್ ಮೋಸೆಸ್ ಅಫ್ಸರ್ ಅಹ್ಮದ್, ದೇವರಾಜ್ ಶೆಟ್ಟಿ, ಮುತ್ತಯ್ಯ, ಸುರೇಖಾ ಸಂಪತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಮೃತ್ ಯೋಜನೆಯಡಿಯಲ್ಲಿ ಪೈಪ್‍ಗಳನ್ನು ಅಳವಡಿಸಲಾಗುತ್ತಿದೆ. ಪೈಪ್‍ಲೈನ್ ಅಳವಡಿಕೆ ಸಂದರ್ಭದಲ್ಲಿ ರಸ್ತೆಗಳು ಹಾಳಾಗಿ, ಸಾರ್ವಜನಿಕರು ತಿರುಗಾಡದ ಸ್ಥಿತಿ ನಿರ್ಮಾಣವಾಗಿದೆ. ಪೈಪ್‍ಲೈನ್ ಅಳವಡಿಕೆ ನಂತರ ಸರಿಯಾಗಿ ಮುಚ್ಚುತ್ತಿಲ್ಲ. ಇದರಿಂದ ದೂಳು ಏಳುತ್ತಿದೆ ಎಂದು ಆರೋಪಿಸಿದಾಗ, ಸಂಬಂಧಪಟ್ಟ ಇಲಾಖೆ ಅಧಿಕಾರಿ ಮಾತನಾಡಿ, ಪೈಪ್‍ಲೈನ್ ಅಳವಡಿಕೆಗೆ ಕಟಿಂಗ್ ಯಂತ್ರ ಉಪಯೋಗಿಸಲಾಗುತ್ತಿದೆ. ಪೈಪ್ ಅಳವಡಿಕೆಗೆ ಆಯಾ ಪ್ರಮಾಣದ ಅನುಗುಣವಾಗಿ ಕಟಿಂಗ್ ಯಂತ್ರದಿಂದ ಕತ್ತರಿಸಿ ತೆಗೆಯಲಾಗುತ್ತಿದೆ .

-ಹಿರೇಮಗಳೂರು ಪುಟ್ಟಸ್ವಾಮಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X