Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಫೆ. 23ರಿಂದ ಕೃಷಿ ಯಂತ್ರ...

ಮಂಗಳೂರು: ಫೆ. 23ರಿಂದ ಕೃಷಿ ಯಂತ್ರ ಮೇಳಕ್ಕೆ ಭರದ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ21 Feb 2019 6:18 PM IST
share
ಮಂಗಳೂರು: ಫೆ. 23ರಿಂದ ಕೃಷಿ ಯಂತ್ರ ಮೇಳಕ್ಕೆ ಭರದ ಸಿದ್ಧತೆ

ಮಂಗಳೂರು, ಫೆ.21: ಕ್ಯಾಂಪ್ಕೋ ಸಂಸ್ಥೆ, ವಿವೇಕಾನಂದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮತ್ತು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಫೆ. 23ರಿಂದ 25ರವರೆಗೆ ನಡೆಯಲಿರುವ ಕೃಷಿ ಯಂತ್ರ ಮೇಳಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಸುದ್ದಿಗೋಷ್ಠಿಯಲ್ಲಿಂದು ಮೇಳದ ಸಿದ್ಧತೆ ಮಾಹಿತಿ ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಸತೀಶ್ ರಾವ್ ಪಿ., ಮೇಳದಲ್ಲಿ ಭಾಗವಹಿಸಲು ಈಗಾಗಲೇ 266 ಮಳಿಗೆಗಳು ನೋಂದಣಿಯಾಗಿವೆ ಎಂದರು.

ಮೇಳದಲ್ಲಿ ಕೃಷಿ ಯಂತ್ರಗಳಿಗೆ ಸಂಬಂಧಿಸಿ 154 ಮಳಿಗೆಗಳು, ಕನಸಿನ ಮನೆಗೆ ಸಂಬಂಧಿಸಿ 83 ಮಳಿಗೆಗಳಿರುತ್ತವೆ. ಇದಲ್ಲದೆ 8 ಅಟೋಮೊಬೈಲ್, 4 ನರ್ಸರಿ, 4 ಕೃಷಿ ನಿಯತಕಾಲಿಗಳು ಹಾಗೂ ಬೀಜ ಮಾರಾಟ ಮಳಿಗೆಗಳು 20 ಆಹಾರ ಮಳಿಗೆಗಳು ಮತ್ತು 20 ಇತರ ವ್ಯಾಪಾರ ಮಳಿಗೆಗಳು ಇರಲಿವೆ. ಬ್ಯಾಂಕ್ ಸಾಲ ಸೌಲಭ್ಯಗಳ ಮಾಹಿತಿಗೆ ಬ್ಯಾಂಕಿಂಗ್ ಮಳಿಗೆಯನ್ನೂ ತೆರೆಯಲಾಗಿದೆ ಎಂದು ಅವರು ಹೇಳಿದರು.

ಡ್ರೋನ್ ಮೂಲಕ ಔಷಧ ಸಿಂಪಡಣೆ ಪ್ರಾತ್ಯಕ್ಷಿಕೆ

ಮೇಳದ ವಿಶೇಷ ಆಕರ್ಷಣೆಯಾಗಿ ಡ್ರೋನ್ ಮೂಲಕ ಔಷಧ ಸಿಂಪಡಣೆ ಪ್ರಾತ್ಯಕ್ಷಿಕೆ ನೀಡಲಾಗುವುದು. ಸುಸಜ್ಜಿತ ಕಾರ್ಬನ್ ಫೈಬರ್ ದೋಟಿಗಳ ಪ್ರದರ್ಶನ, ಜಲ ಕೃಷಿ ವಿಧಾನದ ಸಮಗ್ರ ಪರಿಚಯ, ನೂತನವಾಗಿ ಅವಿಷ್ಕಾರಗೊಂಡ ಹೈನುಗಾರಿಕಾ ತಂತ್ರಜ್ಞಾನ ಮತ್ತು ಪರಿಕರಗಳ ಪ್ರದರ್ಶನ , ವಿವಿಧ ಮೇವಿನ ತಳಿಗಳ ಪ್ರದರ್ಶನ, ಸ್ಥಳದಲ್ಲೇ ಮಣ್ಣಿನ ಪಾತ್ರೆಗಳ ತಯಾರಿ ಮತ್ತು ಮಾರಾಟ ವಿಶೇಷ ಆಕರ್ಷಣೆಯಾಗಲಿದೆ ಎಂದರು.

ಮೇಳದಲ್ಲಿ ಒಟ್ಟು 6 ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಆಯಾಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸಾಧಕರಿಂದ ಅನುಭವ ಹಂಚಿಕೊಳ್ಳುವ ವ್ಯವ್ಥೆಯನ್ನೂ ಮೇಳದಲ್ಲಿ ಮಾಡಲಾಗಿದೆ.

23ರಂದು ಬೆಳಗೆ 10-30ಕ್ಕೆ ಕೇಂದ್ರ ಸಚಿವ ಪಿ.ಪಿ. ಚೌಧರಿ ಉದ್ಘಾಟನೆ ನೆರವೇರಿಸುವರು. ಫೆ. 25ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಕ್ಯಾಂಪ್ಕೋ ವ್ವವಸ್ಥಾಪಕ ನಿರ್ದೇಶಕ ಎಂ. ಸುರೇಶ್ ಭಂಡಾರಿ, ಗೋವಿಂದೇ ಗೌಡ, ಕಿಶೋರ್ ಕುಮಾರ್, ಆಶ್ಲೆ ಡಿಸೋಜಾ ಉಪಸ್ಥಿತರಿದ್ದರು.
ಬಾಕ್ಸ್ ಮಾಡಬಹುದು.

ಚಾಕಲೇಟ್ ಫ್ಯಾಕ್ಟರಿ ವೀಕ್ಷಿಸಲು ಅವಕಾಶ

ಈ ಮೂರು ದಿನಗಳಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯನ್ನು ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಯಂತ್ರಮೇಳದ ಮೈದಾನದಿಂದ ಚಾಕಲೇಟ್ ಫ್ಯಾಕ್ಟರಿಗೆ ಬಸ್ಸಿನ ಸೌಲಭ್ಯ ಕಲ್ಪಿಸಲಾಗಿದೆ.
 ಎಸ್.ಆರ್. ಸತೀಶ್ಚಂದ್ರ, ಅಧ್ಯಕ್ಷರು, ಕ್ಯಾಂಪ್ಕೋ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X