Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಉದ್ಯೋಗ ಖಾತ್ರಿ ವೇತನಕ್ಕೆ...

ಕುಂದಾಪುರ: ಉದ್ಯೋಗ ಖಾತ್ರಿ ವೇತನಕ್ಕೆ ಆಗ್ರಹಿಸಿ ಹೋರಾಟ

ವಾರ್ತಾಭಾರತಿವಾರ್ತಾಭಾರತಿ21 Feb 2019 6:59 PM IST
share
ಕುಂದಾಪುರ: ಉದ್ಯೋಗ ಖಾತ್ರಿ ವೇತನಕ್ಕೆ ಆಗ್ರಹಿಸಿ ಹೋರಾಟ

 ಕುಂದಾಪುರ, ಫೆ.21: ಅಖಿಲ ಭಾರತ ಕೃಷಿ ಕೂಲಿಕಾರರ ಸಂಘಕ್ಕೆ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮಿತಿ ನೇತೃತ್ವದಲ್ಲಿ ತಾಲೂಕಿನಾದ್ಯಂತ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ಮೂರು ತಿಂಗಳುಗಳಿಂದ ಕೆಲಸಗಾರರು ಮಾಡಿದ ಕೆಲಸಕ್ಕೆ ಕೂಲಿ ಹಣವನ್ನು ಪಾವತಿಸದಿರುವುದನ್ನು ವಿರೋಧಿಸಿ ಹಾಗೂ ಕೂಡಲೇ ತಡೆಹಿಡಿದ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಕೂಲಿಕಾರರು ಇಲ್ಲಿನ ತಾಲೂಕು ಪಂಚಾಯತ್ ಕಚೇರಿ ಎದುರು ಧರಣಿ ನಡೆಸಿದರು.

ಕಳೆದ ಮೂರು ತಿಂಗಳ ವೇತನವನ್ನು ತಡೆಹಿಡಿದಿರುವುದರಿಂದ ಬಡ ಕೂಲಿಕಾರರು ಇದೀಗ ವಸ್ತು:ಶ ಬೀದಿ ಪಾಲಾಗಿದ್ದಾರೆ. ಆದುದರಿಂದ ಈ ಕೂಡಲೇ ತಮಗೆ ಬಾಕಿ ಇರುವ ಕೂಲಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸುಮಾರು 500ರಷ್ಟಿದ್ದ ನರೇಗಾ ಕೂಲಿಕಾರರು ತಾಲೂಕು ಪಂಚಾಯತ್ ಕಚೇರಿ ಎದುರು ಧರಣಿ ಕುಳಿತು ಪ್ರತಿಭಟಿಸಿದರು.

ಕಳೆದ ಮೂರು ತಿಂಗಳ ವೇತನವನ್ನು ತಡೆಹಿಡಿದಿರುವುದರಿಂದ ಬಡ ಕೂಲಿಕಾರರು ಇದೀಗ ವಸ್ತು:ಶ ಬೀದಿ ಪಾಲಾಗಿದ್ದಾರೆ. ಆದುದರಿಂದ ಈ ಕೂಡಲೇ ತಮಗೆ ಬಾಕಿ ಇರುವ ಕೂಲಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸುಮಾರು 500ರಷ್ಟಿದ್ದ ನರೇಗಾ ಕೂಲಿಕಾರರು ತಾಲೂಕು ಪಂಚಾಯತ್ ಕಚೇರಿ ಎದುರು ರಣಿಕುಳಿತುಪ್ರತಿಟಿಸಿದರು. ಉದ್ಯೋಗ ಖಾತ್ರಿ ಯೋಜನೆಯ ಕೆಲಸಗಾರರಿಗೆ ಬಾಕಿ ನಿಂತ ಕೂಲಿ ಹಣವನ್ನು ನಿಯಮಾನುಸಾರ ದಂಡನೆ ಸಹಿತ ಪಾವತಿಸಬೇಕು. 2019ರ ಎಪ್ರಿಲ್ ಆರಂಭದಿಂದಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕೂಲಿ ಕೆಲಸ ಕೊಡಬೇಕು. ಉದ್ಯೋಗ ಖಾತ್ರಿ ಕೂಲಿಕಾರರಿಗೆ ದಿನವೊಂದರ 600 ರೂ. ವೇತನ ಹಾಗೂ 250 ದಿನ ಕೆಲಸ ಕೊಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಘೋಷಣೆ ಕೂಗಿ ಅಧಿಕಾರಿಗಳಿಗೆ ಸಾಮೂಹಿಕ ಮನವಿ ಅರ್ಪಿಸಲಾಯಿತು.

ಇದಕ್ಕೆ ಮೊದಲು ಇಲ್ಲಿನ ಕಾರ್ಮಿಕ ಭವನದಲ್ಲಿ ನರೇಗಾ ಕೆಲಸಗಾರರು ಬೃಹತ್ ಸಮಾವೇಶ ನಡೆಸಿ ಬಳಿಕ ಮೆರವಣಿಗೆ ಮೂಲಕ ತಾಲೂಕು ಪಂಚಾಯತ್ ಕಚೇರಿಗೆ ತೆರಳಿ ಮುತ್ತಿಗೆ ಹಾಕಲಾಯಿತು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಫೆ.27,28ರಂದು ಬೆಂಗಳೂರು ವಿಧಾನ ಸೌಧ ಚಲೋ ಹೋರಾಟ ಹಾಗೂ ರಾಜ್ಯ ಮಟ್ಟದ ಉದ್ಯೋಗ ಖಾತ್ರಿ ಯೋಜನೆ ಕಾರ್ಯಗಾರ ನಡೆಯಲಿದ್ದು, ಇದನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೃಷಿ ಕೂಲಿಕಾರರ ಸಂಘದ ಮುಖಂಡರಾದ ಯು.ದಾಸಭಂಡಾರಿ, ರಾಜೀವ ಪಡುಕೋಣೆ, ನಾಗರತ್ನ ನಾಡ, ಯಶೋಧ ಹೊಯ್ಯಣ, ಸಂಜೀವ ಹೆಮ್ಮಾಡಿ, ಬಾಬಣ್ಣ ಗುಲ್ವಾಡಿ, ಕಮಲ ಶೆಟ್ಟಿಗಾರ ಬಸ್ರೂರು, ಸಿಂಥಿಯಾ, ಬೇಬಿ, ಶ್ಯಾಮಲ, ಶೋಭಾ,ನಾಗರತ್ನ ಮುಂತಾದವರು ಧರಣಿಯಲ್ಲಿ ಭಾಗವಹಿಸಿದ್ದರು.

ಸಿಐಟಿಯು ಜಿಲ್ಲಾ ಮುಖಂಡರಾದ ಕೆ.ಶಂಕರ್, ಬಾಲಕೃಷ್ಣ ಶೆಟ್ಟಿ, ಎಚ್. ವಿಠಲ ಪೂಜಾರಿ ಧರಣಿ ನಿರತರರನ್ನು ಬೆಂಬಲಿಸಿ ಮಾತನಾಡಿದರು. ವೆಂಕಟೇಶ ಕೋಣಿ ಅಧ್ಯಕ್ಷತೆ ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X