Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠಾಣ್ ಕೋಟ್,ಉರಿ ದಾಳಿ ನಡೆದಾಗಲೂ ನಾವು...

ಪಠಾಣ್ ಕೋಟ್,ಉರಿ ದಾಳಿ ನಡೆದಾಗಲೂ ನಾವು ಕೇವಲ ಎಚ್ಚರಿಕೆಗಳನ್ನು ನೀಡಿದ್ದೇವೆ: ಶಿವಸೇನೆ

ಪುಲ್ವಾಮಾ ದಾಳಿಗೆ ಭಾರತದ ಪ್ರತಿಕ್ರಿಯೆಯನ್ನು ಪ್ರಶ್ನಿಸಿದ ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ21 Feb 2019 11:31 PM IST
share
ಪಠಾಣ್ ಕೋಟ್,ಉರಿ ದಾಳಿ ನಡೆದಾಗಲೂ ನಾವು ಕೇವಲ ಎಚ್ಚರಿಕೆಗಳನ್ನು ನೀಡಿದ್ದೇವೆ: ಶಿವಸೇನೆ

 ಮುಂಬೈ,ಫೆ.21: ಪುಲ್ವಾಮಾ ಭಯೋತ್ಪಾದಕ ದಾಳಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಪ್ರತಿಕ್ರಿಯೆಯನ್ನು ಗುರುವಾರ ಪ್ರಶ್ನಿಸಿರುವ ಶಿವಸೇನೆಯು,ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ‘ಲೋಕಸಭಾ ಚುನಾವಣೆಯ ಮುನ್ನಾ ದಿನ’ದವರೆಗೂ ಕಾಯದಂತೆ ಸೂಚಿಸಿದೆ.

ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳು ದಾಳಿಯನ್ನು ಖಂಡಿಸುವುದನ್ನು ನೆಚ್ಚಿಕೊಳ್ಳದಂತೆ ಮೋದಿ ಸರಕಾರಕ್ಕೆ ಸೂಚಿಸಿರುವ ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯ ಲೇಖನವು,ನಾವು ಬೆಂಬಲಕ್ಕಾಗಿ ಅಮೆರಿಕ ಅಥವಾ ಐರೋಪ್ಯ ರಾಷ್ಟ್ರಗಳತ್ತ ನೋಡುವ ಬದಲು ನಮ್ಮ ಸ್ವಂತಬಲದಲ್ಲಿ ಹೋರಾಡಬೇಕು ಎಂದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಭಾರತ ಮತ್ತು ಪಾಕಿಸ್ತಾನಗಳ ನಡುವೆ ಯುದ್ಧವು ಆರಂಭವಾಗಿದೆ ಎಂದಿರುವ ಸೇನೆಯು,ಇದು ಚುನಾವಣಾ ಪ್ರಚಾರದ ಆರಂಭವನ್ನು ಸೂಚಿಸುತ್ತದೆ. ಈ ಸಾಮಾಜಿಕ ಮಾಧ್ಯಮ ಯುದ್ಧವನ್ನು ನಿಲ್ಲಿಸಬೇಕು ಎಂದು ಹೇಳಿದೆ.

ಯೋಧರ ಬಲಿದಾನ ಮತ್ತು ಭಯೋತ್ಪಾದಕ ದಾಳಿಗಳು ಚುನಾವಣೆಗಳನ್ನು ಗೆಲ್ಲಲು ಸಾಧನಗಳಾಗುತ್ತಿವೆ. ಇಂತಹ ದೇಶವು ಶತ್ರುಗಳನ್ನು ಹೇಗೆ ಎದುರಿಸುತ್ತದೆ? ,ಪಾಕಿಸ್ತಾನಕ್ಕೆ ಪಾಠ ಕಲಿಸುವ ಭರ್ಜರಿ ಆಟಾಟೋಪಗಳು ಕೇಳಿ ಬರುತ್ತಿವೆ. ಮೊದಲು ಆ ಕೆಲಸವನ್ನು ಮಾಡಿ ನಂತರ ಮಾತನಾಡಿ. ಪಠಾಣ್ ಕೋಟ್,ಉರಿ ಮತ್ತು ಈಗ ಪುಲ್ವಾಮಾ ದಾಳಿಯ ಬಳಿಕವೂ ನಾವು ಬರೀ ಎಚ್ಚರಿಕೆಗಳನ್ನಷ್ಟೇ ನೀಡುತ್ತಿದ್ದೇವೆ ಎಂದು ಶಿವಸೇನೆಯು ಕುಟುಕಿದೆ.

 ಶ್ರೀಲಂಕಾ ಎಲ್‌ಟಿಟಿಇ ಅನ್ನು ಮಟ್ಟಹಾಕಿದಾಗ, ಅಮೆರಿಕವು ಪಾಕಿಸ್ತಾನದೊಳಗೆ ನುಗ್ಗಿ ಒಸಾಮಾ ಬಿನ್ ಲಾಡೆನ್‌ನನ್ನು ಕೊಂದಾಗ ವಿಶ್ವವೇ ಆ ದೇಶಗಳನ್ನು ಪ್ರಶಂಸಿಸಿತ್ತು. ಆದರೆ ನಾವೇನೂ ಮಾಡದಿದ್ದರೂ ಬೆನ್ನು ತಟ್ಟಿಕೊಳ್ಳುತ್ತಿದ್ದೇವೆ ಎಂದಿರುವ ಅದು,ಭಾರತವು ಕ್ರಮಕ್ಕೆ ಮುಂದಾದರೆ ಪಾಕಿಸ್ತಾನವು ತಿರುಗೇಟು ನೀಡುತ್ತದೆ ಎಂದು ಆ ರಾಷ್ಟ್ರದ ಪ್ರಧಾನಿ ಇಮ್ರಾನ್ ಖಾನ್ ಕೊಚ್ಚಿಕೊಂಡಿದ್ದಾರೆ. ಭಾರತದೊಡನೆ ಸಂಘರ್ಷಕ್ಕಿಳಿದರೆ ಸೋಲುವುದು ಪಾಕಿಸ್ತಾನವೇ ಎಂದು ಅಮೆರಿಕ ಮತ್ತು ಫ್ರಾನ್ಸ್‌ನಂತಹ ದೇಶಗಳು ಅದಕ್ಕೆ ತಿಳಿಹೇಳುವವರೆಗೆ ಈ ರಾಷ್ಟ್ರಗಳನ್ನು ಭಾರತದ ನಿಜವಾದ ಮಿತ್ರರೆಂದು ಪರಿಗಣಿಸುವಂತಿಲ್ಲ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X