ಬಡಗಬೆಟ್ಟು ಸೊಸೈಟಿ ಅಧ್ಯಕ್ಷರಾಗಿ ಸಂಜೀವ ಕಾಂಚನ್
ಉಡುಪಿ, ಫೆ.22: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಂಜೀವ ಕಾಂಚನ್ ಹಾಗೂ ಉಪಾಧ್ಯಕ್ಷರಾಗಿ ಎಲ್.ಉಮಾನಾಥ್ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.
ಆಡಳಿತ ಮಂಡಳಿ ಸದಸ್ಯರುಗಳಾಗಿ ಪುರುಷೋತ್ತಮ ಪಿ.ಶೆಟ್ಟಿ, ವಸಂತ ಕೆ. ಕಾಮತ್, ವಿನಯ ಕುಮಾರ್ ಟಿ.ಎ, ಜಯಾನಂದ ಸಿ.ಮೈಂದನ್, ಪದ್ಮನಾಭ ಕೆ.ನಾಯಕ್, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ರಘುರಾಮ ಎಸ್.ಶೆಟ್ಟಿ, ಜಾರ್ಜ್ ಸಾಮ್ಯುಯಲ್, ಸದಾಶಿವ ನಾಕ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್ ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯ ಕೆ.ಆರ್.ರೋಹಿತ್ ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು.
Next Story