Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಆಕ್ರಮಣಕ್ಕೆ ಪ್ರತಿಕ್ರಿಯಿಸಲು...

ಭಾರತದ ಆಕ್ರಮಣಕ್ಕೆ ಪ್ರತಿಕ್ರಿಯಿಸಲು ಸೇನೆಗೆ ಅಧಿಕಾರ ನೀಡಿದ ಇಮ್ರಾನ್

ವಾರ್ತಾಭಾರತಿವಾರ್ತಾಭಾರತಿ22 Feb 2019 9:45 PM IST
share
ಭಾರತದ ಆಕ್ರಮಣಕ್ಕೆ ಪ್ರತಿಕ್ರಿಯಿಸಲು ಸೇನೆಗೆ ಅಧಿಕಾರ ನೀಡಿದ ಇಮ್ರಾನ್

 ಇಸ್ಲಾಮಾಬಾದ್, ಫೆ. 22: ಭಾರತ ನಡೆಸಬಹುದಾದ ಯಾವುದೇ ‘ಆಕ್ರಮಣ ಅಥವಾ ದುಸ್ಸಾಹಸಕ್ಕೆ ನಿರ್ಣಾಯಕವಾಗಿ ಹಾಗೂ ಸಮಗ್ರವಾಗಿ’ ಪ್ರತಿಕ್ರಿಯಿಸಲು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಸೇನೆಗೆ ಅಧಿಕಾರ ನೀಡಿದ್ದಾರೆ.

ಪುಲ್ವಾಮ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಎಂಬುದಾಗಿ ಅವರು ಮತ್ತೊಮ್ಮೆ ಹೇಳಿದ್ದಾರೆ.

40 ಸಿಆರ್‌ಪಿಎಫ್ ಯೋಧರ ಸಾವಿಗೆ ಕಾರಣವಾದ ಪುಲ್ವಾಮ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಭಾರತ ಪಣತೊಟ್ಟಿದೆ ಹಾಗೂ ದಾಳಿಯ ತನಿಖೆಯಲ್ಲಿ ನೆರವು ನೀಡುವ ಇಮ್ರಾನ್ ಖಾನ್‌ರ ಹಿಂದಿನ ಕೊಡುಗೆಯನ್ನು ತಿರಸ್ಕರಿಸಿದೆ.

ಇಸ್ಲಾಮಾಬಾದ್‌ನಲ್ಲಿ ಗುರುವಾರ ನಡೆದ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಅದೇ ವೇಳೆ, ಮುಂಬೈ ಭಯೋತ್ಪಾದಕ ದಾಳಿಯ ಸೂತ್ರಧಾರಿ ಹಾಗೂ ಲಷ್ಕರೆ ತಯ್ಯಬ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹಫೀಝ್ ಸಯೀದ್‌ನ ಜಮಾಅತುದಅವಾ ಮತ್ತು ಫಲಾಹೆ ಇನ್ಸಾನಿಯತ್ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿತ ಗುಂಪುಗಳೆಂದು ಘೋಷಿಸಲು ಈ ಸಭೆ ತೀರ್ಮಾನಿಸಿತು.

ಆದಾಗ್ಯೂ, ಪುಲ್ವಾಮ ಭಯೋತ್ಪಾದಕ ದಾಳಿಯ ಹೊಣೆ ಹೊತ್ತಿರುವ ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಯ ವಿರುದ್ಧ ಕ್ರಮ ತೆಗೆದುಕೊಳ್ಳುವ ಯಾವುದೇ ಇಂಗಿತ ಸಭೆಯಲ್ಲಿ ವ್ಯಕ್ತವಾಗಿಲ್ಲ.

ಪ್ಯಾರಿಸ್‌ನಲ್ಲಿ ನಡೆಯಲಿರುವ ಹಣಕಾಸು ಕ್ರಿಯಾ ಕಾರ್ಯಪಡೆಯ ಸಭೆಯನ್ನು ಗಮನದಲ್ಲಿಟ್ಟುಕೊಂಡು ಜಮಾಅತುದಅವಾ ಮತ್ತು ಫಲಾಹೆ ಇನ್ಸಾನಿಯತ್ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸುವ ನಿರ್ಧಾರಗಳನ್ನು ತೆಗೆದುಕೊಂಡಿರುವಂತೆ ಕಂಡು ಬಂದಿದೆ.

ಭಯೋತ್ಪಾದನೆಗೆ ಹಣ ಪೂರೈಕೆಯಾಗುವುದನ್ನು ತಡೆಯಲು ಪಾಕಿಸ್ತಾನ ತೆಗೆದುಕೊಂಡಿರುವ ಕ್ರಮಗಳನ್ನು ಪ್ಯಾರಿಸ್ ಸಭೆ ಪರಿಶೀಲಿಸುತ್ತದೆ.

 ‘ಪೂರ್ಣ ಶಕ್ತಿ’ಯಿಂದ ಪ್ರತಿಕ್ರಿಯೆ: ಪಾಕ್ ಸೇನೆ

ಭಾರತದ ಯಾವುದೇ ಆಕ್ರಮಣಕ್ಕೆ ಪಾಕಿಸ್ತಾನವು ‘ಪೂರ್ಣ ಶಕ್ತಿ’ಯಿಂದ ಪ್ರತಿಕ್ರಿಯಿಸುವುದು ಎಂದು ಪಾಕಿಸ್ತಾನ ಸೇನೆಯ ವಕ್ತಾರ ಮೇಜರ್ ಜನರಲ್ ಅಸಿಫ್ ಗಫೂರ್ ಶುಕ್ರವಾರ ಹೇಳಿದ್ದಾರೆ.

‘‘ಯುದ್ಧವನ್ನು ಆರಂಭಿಸುವ ಉದ್ದೇಶ ನಮಗಿಲ್ಲ. ಆದರೆ ನಾವು ಪೂರ್ಣ ಪ್ರಮಾಣದ ಬೆದರಿಕೆಗೆ ಪೂರ್ಣ ಶಕ್ತಿಯಿಂದ ಪ್ರತಿಕ್ರಿಯಿಸುತ್ತೇವೆ. ಆಗ ನೀವು ಅಚ್ಚರಿಗೊಳ್ಳಬಹುದು’’ ಎಂದು ಸೇನೆಯ ಪ್ರಧಾನ ಕಚೇರಿಯಿರುವ ನಗರ ರಾವಲ್ಪಿಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೇಳಿದರು.

‘‘ಪಾಕಿಸ್ತಾನದೊಂದಿಗೆ ಆಟವಾಡಬೇಡಿ’’ ಎಂದು ಅವರು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X