Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿನೆಮಾದ ಗೆಲುವಿಗೆ ಕತೆ ಮುಖ್ಯವೇ ಹೊರತು...

ಸಿನೆಮಾದ ಗೆಲುವಿಗೆ ಕತೆ ಮುಖ್ಯವೇ ಹೊರತು ಸ್ಟಾರ್‌ಗಿರಿಯಲ್ಲ: ಚಿತ್ರ ನಿರ್ದೇಶಕ ರಾಹುಲ್ ರವೈಲ್

ಬೆಂಗಳೂರು ಅಂತರ್‌ರಾಷ್ಟ್ರೀಯ ಸಿನೆಮೋತ್ಸವ

ವಾರ್ತಾಭಾರತಿವಾರ್ತಾಭಾರತಿ22 Feb 2019 9:57 PM IST
share
ಸಿನೆಮಾದ ಗೆಲುವಿಗೆ ಕತೆ ಮುಖ್ಯವೇ ಹೊರತು ಸ್ಟಾರ್‌ಗಿರಿಯಲ್ಲ: ಚಿತ್ರ ನಿರ್ದೇಶಕ ರಾಹುಲ್ ರವೈಲ್

ಬೆಂಗಳೂರು, ಫೆ.22: ಸಿನೆಮಾದ ಗೆಲುವಿಗೆ ಕತೆಯೆ ಜೀವಾಳ. ನಂತರವಷ್ಟೆ ಸ್ಟಾರ್‌ಗಿರಿ, ಬಜೆಟ್ ಸೇರಿದಂತೆ ಎಲ್ಲವೂ ಸೇರ್ಪಡೆಯಾಗುತ್ತದೆ ಎಂದು ಬಾಲಿವುಡ್ ನಿರ್ದೇಶಕ ರಾಹುಲ್ ರವೈಲ್ ಅಭಿಪ್ರಾಯಿಸಿದ್ದಾರೆ.

ಶುಕ್ರವಾರ ನಗರದ ಒರಾಯನ್ ಮಾಲ್‌ನಲ್ಲಿ ನಡೆಯುತ್ತಿರುವ 11ನೆ ಬೆಂಗಳೂರು ಅಂತರ್‌ರಾಷ್ಟ್ರೀಯ ಸಿನೆಮೋತ್ಸವದಲ್ಲಿ ಸಿನೆಮಾ ನಿರ್ಮಾಣ ಕುರಿತು ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಿರ್ದೇಶಕನೊಬ್ಬನಿಗೆ ಸಿನೆಮಾದ ಎಲ್ಲ ನಿಯಮಗಳನ್ನು ಮುರಿಯುವ ಹಕ್ಕಿದೆ. ಹಾಗೆಂದು ಜನರ ಅಭಿರುಚಿಗೆ ವಿರುದ್ಧ ನಡೆಯುವುದು ಸರಿಯಲ್ಲ. ತನ್ನ ಕಲ್ಪನೆಗಳನ್ನು, ಆಲೋಚನೆಗಳನ್ನು ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ದೃಶ್ಯರೂಪಕ್ಕಿಳಿಸಬೇಕು. ತೆರೆಯ ಮೇಲೆ ಒಳ್ಳೊಳ್ಳೆಯ ದೃಶ್ಯಗಳಿದ್ದರೆ ಮಾತ್ರ ನೋಡುಗರ ಮನಸ್ಸನ್ನು ಸೆಳೆಯಲು ಸಾಧ್ಯವೆಂದು ಅವರು ತಿಳಿಸಿದರು.

ಎಂಬತ್ತರ ದಶಕದಲ್ಲಿ ಈಗಿರುವಷ್ಟು ಸೌಕರ್ಯ ಇರಲಿಲ್ಲ. ಈಗಿರುವಷ್ಟು ತಂತ್ರಜ್ಞಾನ ಇರಲಿಲ್ಲ. ಈಗ ಸಿನೆಮಾವನ್ನು ಚಿಕ್ಕ ಪೆನ್‌ಡ್ರೈವ್‌ನಲ್ಲಿ ಜಗತ್ತಿನ ಯಾವುದೆ ಮೂಲೆಗೆ ತೆಗೆದುಕೊಂಡು ಹೋಗಿ ಪ್ರದರ್ಶಿಸಬಹುದಾಗಿದೆ. ಇವೆಲ್ಲ ಆಧುನಿಕ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಮೌಲ್ಯಯುತವಾದ, ಗುಣಾತ್ಮಕವಾದ ಸಿನೆಮಾವನ್ನು ನೀಡಬೇಕಿದೆ ಎಂದು ಅವರು ಆಶಿಸಿದರು.

ನಾನು ಸಿನೆಮಾ ಜಗತ್ತನ್ನು ಕನ್ನಡ, ತಮಿಳು, ತೆಲಗು, ಹಿಂದಿ ಹೀಗೆ ಭಾಷಾವಾರು ವರ್ಗೀಕರಿಸಲು ಹೋಗುವುದಿಲ್ಲ. ಸ್ಥಳೀಯ ಭಾಷೆಗಳಲ್ಲೂ ಉತ್ಕೃಷ್ಟವಾದ ಸಿನೆಮಾಗಳು ನಿರ್ಮಾಣಗೊಳ್ಳುತ್ತಿವೆ. ಕನ್ನಡದ ಕೆಜಿಎಫ್ ಇದಕ್ಕೊಂದು ಉದಾಹರಣೆಯಾಗಿದೆ. ಈಗ ನನಗೆ ಸಿನೆಮಾ ನಿರ್ದೇಶಿಸಬೇಕೆಂದು ಆಸೆ ಹೋಗಿದೆ. ಆದರೆ, ವೆಬ್ ಸಿರೀಸ್ ಮಾಡಬೇಕೆಂಬ ಆಸೆಯಿದೆ. ಆ ಬಗ್ಗೆ ಕಾರ್ಯಪ್ರವೃತ್ತನಾಗಿದ್ದೇನೆಂದು ಅವರು ಹೇಳಿದರು.

ಹದಿನಾರನೇ ವಯಸ್ಸಿಗೆ ಹಿರಿಯ ನಿರ್ದೇಶಕ ರಾಜ್‌ಕಪೂರ್ ಜೊತೆ ಕೆಲಸ ಆರಂಭಿಸಿದ್ದು ನನ್ನ ಅದೃಷ್ಟವೆಂದೆ ಭಾವಿಸುತ್ತೇನೆ. ನನ್ನ ಸಿನೆಮಾ ಬದುಕಿನಲ್ಲಿ ಅವರ ಪಾಲು ದೊಡ್ಡದಿದೆ. ನಾನು ನಿರ್ದೇಶಿಸಿದ ಲವ್‌ಸ್ಟೋರಿ ಸಿನೆಮಾ ದೊಡ್ಡ ಹೆಸರು ತಂದು ಕೊಟ್ಟಿತು. ಆ ಸಿನೆಮಾದಲ್ಲಿ ನನ್ನ ಹೆಸರನ್ನು ದಾಖಲಿಸಿರಲಿಲ್ಲ. ನಿರ್ದೇಶಕನ ಹೆಸರಿಲ್ಲದೆ ಬಿಡುಗಡೆಗೊಂಡ ವಿಶ್ವದ ಏಕೈಕ ಸಿನೆಮಾ ಇದಾಗಿದೆ ಎಂದು ಅವರು ತಮ್ಮ ಅನುಭವವನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್, ಚಲನಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ವಿದ್ಯಾಶಂಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X